Breaking News

ಕರ್ನಾಟಕದಲ್ಲಿ ಮುಂದುವರೆಯಲಿದೆ ವರುಣನ ಆರ್ಭಟ: 10 ಜಿಲ್ಲೆಗಳಲ್ಲಿ ಅಕ್ಟೋಬರ್ 24, 25 ರಂದು ಮಳೆ.. ಮಳೆ.. ಮಳೆ..

ಬೆಂಗಳೂರು: ಕರ್ನಾಟಕದಲ್ಲಿ ವರುಣನ ಆರ್ಭಟ ಮುಂದುವರೆಯುವ ಎಲ್ಲಾ ಮುನ್ಸೂಚನೆ ಸಿಕ್ಕಿದೆ. ಇನ್ನೆರಡು ದಿನ ಕರ್ನಾಟಕದ ಹತ್ತು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು ಸೇರಿದಂತೆ ಒಟ್ಟು ಹತ್ತು ಜಿಲ್ಲೆಗಳಲ್ಲಿ ನಾಳೆ ಮತ್ತು ನಾಡಿದ್ದು (ಶನಿವಾರ ಮತ್ತು ಭಾನುವಾರ) ಗುಡುಗ, ಮಿಂಚು ಸಹಿತ ಧಾರಾಕಾರ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಕರ್ನಾಟಕ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ ತಿಳಿಸಿದೆ.

ಯಾವ ಯಾವ ಜಿಲ್ಲೆಗಳಲ್ಲಿ ಮಳೆ.?

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಹಾಸನ, ಚಿಕ್ಕಮಗಳೂರು, ಕೊಡಗು, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಜೋರು ಮಳೆಯಾಗಲಿದೆ.

ಎಚ್ಚರ.. ಬೆಂಗಳೂರಿನಲ್ಲಿ ಇನ್ನೂ ಎರಡು ದಿನ ಭಾರಿ ಮಳೆ.!

ವಾಯುಭಾರ ಕುಸಿತ

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಮಳೆ ಮೋಡಗಳು 24 ಕಿ.ಮೀ ವೇಗದಲ್ಲಿ ಈಶಾನ್ಯಕ್ಕೆ ಚಲಿಸುತ್ತಿವೆ. ಹೀಗಾಗಿ, ಕರ್ನಾಟಕದ ಹತ್ತು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

About vijay_shankar

Check Also

test

test

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.