Breaking News

ಕೊರೊನಾ ಕರ್ತವ್ಯದಲ್ಲಿರುವ ಶಿಕ್ಷಕರಿಗೆ ರಾಜ್ಯ ಸರ್ಕಾರದಿಂದ ಬಿಗ್ ಶಾಕ್!

ಬೆಂಗಳೂರು : ಕೊರೊನಾ ಕರ್ತವ್ಯದಲ್ಲಿರುವ ಶಿಕ್ಷಕರಿಗೆ ರಾಜ್ಯ ಸರ್ಕಾರ ಬಿಗ್ ಶಾಕ್ ನೀಡಿದ್ದು, ಕೊರೊನಾ ಡ್ಯೂಟಿಯಲ್ಲಿರುವ ಶಿಕ್ಷಕರನ್ನೇ ಚುನಾವಣಾ ಕರ್ತವ್ಯಕ್ಕೂ ನಿಯೋಜನೆ ಮಾಡಿ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.

ಶಿಕ್ಷಕರ ಮಾಹಿತಿ ಪಡೆದು ಎಚ್‌ಆರ್ ಎಂಎಸ್ ತಂತ್ರಾಂಶದಿಂದ ನೇರವಾಗಿ ಪಡೆದು ಚುನಾವಣಾ ಕೆಲಸಕ್ಕೆ ನಿಯೋಜನೆ ಮಾಡಲಾಗಿದೆ. ಆದರೆ ಚುನಾವಣಾ ಕರ್ತವ್ಯಕ್ಕೂ ನಿಯೋಜಿಸಿರುವುದಕ್ಕೆ ಶಿಕ್ಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಒಮ್ಮೆ ನಿಯೋಜನೆ ಮಾಡಿದ ಮೇಲೆ ಅದರಲ್ಲಿ ಬದಲಾವಣೆ ತರಬೇಕಾದಲ್ಲಿ ಆಯುಕ್ತರು ಮಧ್ಯಪ್ರವೇಶ ಮಾಡಬೇಕಿದೆ. ಆದರೆ ಆಯುಕ್ತರು ಕೊರೊನಾಗೆ ಚಿಕಿತ್ಸೆ ಪಡೆಯುತ್ತಿದ್ದು, ಶಿಕ್ಷಕರು ಚುನಾವಣಾ ಕರ್ತವ್ಯಕ್ಕೆ ಹಾಜರಾಗುವುದು ಕಡ್ಡಾಯವಾಗಿದೆ.

ಶಿಕ್ಷಕರು ಚುನಾವಣೆ ಕರ್ತವ್ಯಕ್ಕೆ ಹಾಜರಾಗದಿದ್ದರೆ ಶಿಸ್ತು ಕ್ರಮ ಜರುಗಿಸುವುದಾಗಿ ಶಿಕ್ಷಣ ಇಲಾಖೆ ಸೂಚನೆ ನೀಡಿದೆ.

About vijay_shankar

Check Also

test

test

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.