Breaking News

ದಾವಣಗೆರೆ; ಬಿಜೆಪಿ ಶಾಸಕರಿಗೆ ಎಚ್ಚರಿಕೆ ಕೊಟ್ಟ ಕನಕಶ್ರೀ

ದಾವಣಗೆರೆ, ಆಗಸ್ಟ್ 18: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಬಸವರಾಜ್ ಅವರನ್ನೇನಾದರೂ ಸಚಿವ ಸ್ಥಾನದಿಂದ ಹೊರಗುಳಿಸುವ ಪ್ರಯತ್ನಕ್ಕೆ ಕೈ ಹಾಕಿದರೆ ಗಂಭೀರ ಪರಿಣಾಮ ಎದುರಿಸಬೇಕಾದೀತು ಎಂದು ಜಿಲ್ಲೆಯ ಬಿಜೆಪಿ ಶಾಸಕರಿಗೆ ಕಾಗಿನೆಲೆ ಕನಕ ಗುರುಪೀಠದ ನಿರಂಜನಾನಂದ ಪುರಿ ಶ್ರೀಗಳು ಖಡಕ್ ಎಚ್ಚರಿಕೆ ನೀಡಿದ್ದಾರೆ.

ಮುಂದಿನ ಸಚಿವ ಸಂಪುಟದಲ್ಲಿ ಸಚಿವರಾಗಬೇಕೆಂದಿದ್ದರೆ ನೀವು ಬೇಕಾದರೆ ಸಚಿವರಾಗಿ ಯಾವುದೇ ಅಭ್ಯಂತರವಿಲ್ಲ. ಆದರೆ ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಬಸವರಾಜ್ ಬಗ್ಗೆ ಇಲ್ಲ ಸಲ್ಲದ ಆರೋಪ ಮಾಡಿ ಅವರನ್ನು ಉಸ್ತುವಾರಿಯಿಂದ ತೆಗೆಸಲು ಪ್ರಯತ್ನಿಸಿದರೆ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ. ಈ ಬಗ್ಗೆ ಜಿಲ್ಲೆಯ ಬಿಜೆಪಿ ಶಾಸಕರಿಗೆ ನೇರ ಎಚ್ಚರಿಕೆ ನೀಡುವೆ ಎಂದು ಜಿಲ್ಲೆಯ ಹರಿಹರ ತಾಲೂಕಿನ ಬೆಳ್ಳೂಡಿಯ ಕನಕ ಗುರುಪೀಠದ ಶಾಖಾ ಮಠದಲ್ಲಿ ಶ್ರೀಗಳು ಗುಡುಗಿದ್ದಾರೆ.

About vijay_shankar

Check Also

BJP ತೋರೆದು ಕಾಂಗ್ರೆಸ್ ಕೈ ಹಿಡಿದ ರಂಗಪ್ಪ ಸುರಪೂರ

ಇಲಕಲ್ ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ:- ಕೆಪಿಸಿಸಿ ಸದಸ್ಯರಾದ ಶಾಂತಕುಮಾರ್ ಸುರಪುರ ಅವರ ನೇತೃತ್ವದಲ್ಲಿ ಯುವ ಮುಖಂಡರಾದ ರಂಗಪ್ಪ …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.