Breaking News

ಇಂದು ರಾತ್ರಿಯಿಂದಲೇ ರಾಜ್ಯಾದ್ಯಂತ ನೈಟ್ ಕರ್ಪ್ಯೂ ಜಾರಿ: ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಘೋಷಣೆ

ಕೊರೊನಾ ರೂಪಾಂತರ ವೈರಸ್ ಆತಂಕದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಇಂದು ರಾತ್ರಿಯಿಂದಲೇ ನೈಟ್ ಕರ್ಫ್ಯೂ ಜಾರಿಯಾಗಲಿದೆ. ರಾತ್ರಿ 10 ಗಂಟೆಯಿಂದ ಬೆಳಗ್ಗೆ 6 ಗಂಟೆವರೆಗೆ ನೈಟ್​ ಕರ್ಫ್ಯೂ ಇರಲಿದೆ ಎಂದು ಮುಖ್ಯಮಂತ್ರಿ ಬಿ ಎಸ್​ ಯಡಿಯೂರಪ್ಪ ಇದೀಗತಾನೆ ಘೋಷಿಸಿದ್ದಾರೆ.

ಇಂದಿನಿಂದ 9 ದಿನಗಳ ಕಾಲ ನೈಟ್ ಕರ್ಫ್ಯೂ ಇರಲಿದ್ದು, ಅಗತ್ಯ ಸೇವೆಗಳಿಗೆ ಮಾತ್ರ ಅವಕಾಶ ಇರಲಿದೆ. ಜನವರಿ 2ರವರೆಗೂ ರಾತ್ರಿ ಕರ್ಫ್ಯೂ ಇರುವುದರಿಂದ ಹೊಸವರ್ಷದ ಮಧ್ಯರಾತ್ರಿ ಆಚರಣೆಗೆ ಸಹಜವಾಗಿಯೇ ಕಡಿವಾಣ ಇರಲಿದೆ.

ರಾತ್ರಿ 9ರನಂತರ ಬಸ್​ ಸಂಚಾರ ಇರೋದಿಲ್ಲ. ಹೋಟೆಲ್​, ರೆಸ್ಟೋರೆಂಟ್​ಗಳೂ ಬಂದ್​ ಆಗಲಿವೆ. ವ್ಯಾಪಾರ, ವಹಿವಾಟಗಳೂ ನಡೆಯುವುದಿಲ್ಲ. ಅಗತ್ಯ ವಸ್ತುಗಳ ಸರಬರಾಜು ಮಾಡುವ ವಾಹನಗಳ ಸಂಚಾರಕ್ಕೆ ಮಾತ್ರ ಅವಕಾಶ ಇರಲಿದೆ. ಹಾಗೇ ಇಂದು ಸಂಜೆ 5ಗಂಟೆಯೊಳಗೆ ನೈಟ್​ಕರ್ಫ್ಯೂ ಸಂಬಂಧಿತ ಮಾರ್ಗಸೂಚಿಯನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಲಿದೆ.

About vijay_shankar

Check Also

ಯೆಲ್ಲೋ ಫಂಗಸ್’ ಪತ್ತೆ..? ಏನಿದು..? ಇದರ ಲಕ್ಷಣಗಳೇನು..?

ಬ್ಲ್ಯಾಕ್ ಫಂಗಸ್, ವೈಟ್ ಫಂಗಸ್ ಆತಂಕದ ನಡುವೆಯೇ ಇದೀಗ “ಯೆಲ್ಲೋ” ಫಂಗಸ್ ಸೋಂಕು ಪತ್ತೆಯಾಗಿದ್ದು, ಜನರಲ್ಲಿ ಆತಂಕ ಮೂಡಿದೆ. ಯೆಲ್ಲೋ …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.