ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 2019 ನೇ ಸಾಲಿನ ಪ್ರಥಮ ದರ್ಜೆ ಸಹಾಯಕರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಜನವರಿ 24 ರಂದು ನಡೆಯಬೇಕಿದ್ದ ಪರೀಕ್ಷೆಗಳನ್ನು ಮುಂದೂಡಿ ಕರ್ನಾಟಕ ಲೋಕಸೇವಾ ಆಯೋಗ(KPSC)ದ ಕಾರ್ಯದರ್ಶಿ ಜಿ. ಸತ್ಯವತಿ ಆದೇಶ ಹೊರಡಿಸಿದ್ದಾರೆ.
“ಜನವರಿ 24 ರಂದು ಎರಡು ಅಧಿವೇಶನಗಳಲ್ಲಿ ನಡೆಯಬೇಕಿದ್ದ 2019 ನೇ ಸಾಲಿನ ಪ್ರಥಮ ದರ್ಜೆ ಸಹಾಯಕರ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರಶ್ನೆಪತ್ರಿಕೆಗಳು ಕೆಲವೊ೦ದು ದುಷ್ಕರ್ಮಿಗಳ ಕೈಸೇರಿರುವುದು ತಿಳಿದುಬಂದಿದೆ. ಆದ್ದರಿಂದ ಅನಿವಾರ್ಯ ಕಾರಣಗಳಿಂದಾಗಿ ಅವುಗಳನ್ನು ಮುಂದೂಡಲಾಗಿದೆ” ಎಂದು ಆಯೋಗ ತನ್ನ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದೆ.
ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 2019ನೇ ಸಾಲಿನ ಪ್ರಥಮ ದರ್ಜೆ ಸಹಾಯಕರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಜನವರಿ 23 ಮತ್ತು 24 ರಂದು ಪರೀಕ್ಷೆ ನಿಗದಿಯಾಗಿತ್ತು. ಆದರೆ 24 ರಂದು ನಡೆಯಲಿರುವ ಪರೀಕ್ಷಗಳ ಪ್ರಶ್ನೆಪತ್ರಿಕೆ ಶನಿವಾರ ಸೋರಿಕೆಯಾಗಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಆಯೋಗವು ಹೇಳಿದೆ.
ಪರೀಕ್ಷೆಗಳ ದಿನಾಂಕವನ್ನು ಮರುನಿಗದಿಪಡಿಸಿ ಪ್ರಕಟಿಸಲಾಗುವುದೆಂದು ಆಯೋಗವು ತಿಳಿಸಿದೆ.
Bayalu Birugali – BB News BB News I Kannada Breaking News | Kannada Latest News | News Updates | Political News Updates – Bayalu Birugali News