ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಬೆಳಕಿಗೆ ಬಂದ ಡ್ರಗ್ ಮಾಫಿಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್ ಹೇಳಿದ್ದಾರೆ. ಆರೋಪಿಗಳು ಹಲವು ಮಾಹಿತಿ ಹಂಚಿಕೊಂಡಿದ್ದು ನಿರಂತರ ತನಿಖೆ ನಡೆಯುತ್ತದೆ ಎಂದು ತಿಳಿಸಿದರು.
ಬೆಂಗಳೂರು: ಡ್ರಗ್ ಮಾಫಿಯಾಗೆ ಸಂಬಂಧಪಟ್ಟಂತೆ ಇಬ್ಬರನ್ನು ಬಂಧಿಸಲಾಗಿದೆ. ಆರೋಪಿಗಳು ನೀಡಿದ ಮಾಹಿತಿ ಪ್ರಕಾರ ಸಿಸಿಬಿ ಪೊಲೀಸರು ದ್ವಿತೀಯ ಹಂತದ ವಿಚಾರಣೆ ಆರಂಭಿಸಿದ್ದು, ತನಿಖೆ ಪ್ರಗತಿಯಲ್ಲಿದೆ ಎಂದು ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್ತಿಳಿಸಿದರು.
ಡ್ರಗ್ಸ್ ಮಾಫಿಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರ ಪೊಲೀಸ್ ಸಯುಕ್ತ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಕಮಲ್ ಪಂಥ್, ಪ್ರಕರಣಕ್ಕೆ ಸಂಬಂಧಿಸಿದಂತೆ ಇಲ್ಲಿಯವರೆಗೂ ರವಿಶಂಕರ್ ಮತ್ತು ರಾಹುಲ್ ಎಂಬ ಇಬ್ಬರನ್ನು ಬಂಧಿಸಲಾಗಿದೆ. ಆರೋಪಿಗಳು ಹಲವರ ಹೆಸರನ್ನು ಹೇಳಿದ್ದು, ಅವರನ್ನು ನಿರಂತರವಾಗಿ ವಿಚಾರಣೆಗೆ ಒಳಪಡಿಸಲಾಗುವುದು ಎಂದರು.
ಕಳೆದ ಒಂದು ತಿಂಗಳಿನಿಂದ ಸಿಸಿಬಿ ಪೊಲೀಸರು ನಗರದಲ್ಲಿ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಳಿ ನಡೆಸಲಾಗಿತ್ತು. ಪಾರ್ಟಿಗಳಲ್ಲಿ ಡ್ರಗ್ ಬಳಕೆ ಮಾಡುತ್ತಿದ್ದರು ಎಂಬ ಮಾಹಿತಿ ಸಿಕ್ಕಿದೆ. ಆರೋಪಿಗಳ ಮೊಬೈಲ್ನಿಂದ ಪ್ರಕರಣದ ಬಗ್ಗೆ ಸಾಕಷ್ಟು ಮಾಹಿತಿ ಸಿಕ್ಕಿದೆ. ಹಲವರು ಈ ಪ್ರಕರಣದಲ್ಲಿ ಭಾಗಿಯಾಗಿದ್ದು, ಹಂತ-ಹಂತವಾಗಿ ವಿಚಾರಣೆ ನಡೆಯಲಿದೆ ಎಂದು ಪಂಥ್ ಹೇಳಿದರು.
ಡ್ರಗ್ಸ್ ಮಾಫಿಯಾ: ಕುತೂಹಲ ಕೆರಳಿಸಿದೆ ಕಮಲ್ ಪಂತ್ ಸುದ್ದಿಗೋಷ್ಠಿ
ಕಾಟನ್ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಂಧಿತ ಆರೋಪಿಗಳು ನೀಡಿದ ಮಾಹಿತಿಯಂತೆ ಸಿಸಿಬಿ ಪೊಲೀಸರು ವಿಸ್ಕೃತ ತನಿಖೆ ನಡೆಸಲಿದ್ದಾರೆ. ಇನ್ನು, ನಟಿ ರಾಗಿಣಿ ದ್ವಿವೇದಿ ವಿರುದ್ಧ ಪ್ರತ್ಯೇಕ ಎಫ್ಐಆರ್ ದಾಖಲಿಸಿ ವಿಚಾರಣೆ ನಡೆಸಲಾಗುತ್ತಿದೆ ಎಂದು ಕಮಲ್ ಪಂಥ್ ಮಾಹಿತಿ ನೀಡಿದ್ದಾರೆ.
ಡ್ರಗ್ಸ್ ಜಾಲ: ರಾಗಿಣಿ ದ್ವಿವೇದಿ ವಿಚಾರಣೆ ಬಳಿಕ ಬೇರೆ ಯಾವೆಲ್ಲ ನಟಿಯರ ಹೆಸರು ಬಯಲಾಗಲಿದೆ?
ರಾಗಿಣಿ ದ್ವಿವೇದಿ ನಿವಾಸದ ಮೇಲೆ ಸರ್ಚ್ ವಾರೆಂಟ್ ಪಡೆದು ಸಿಸಿಬಿ ಪೊಲೀಸರು ದಾಳಿ ನಡೆಸಿದ್ದರು. ಆದರೆ, ತನಿಖೆ ಪ್ರಗತಿಯಲ್ಲಿರುವುದರಿಂದ ಹಂತ ಹಂತವಾಗಿ ಮಾಹಿತಿಯನ್ನು ನೀಡಲಾಗುತ್ತದೆ ಎಂದು ಪೊಲೀಸ್ ಕಮಿಷನರ್ ತಿಳಿಸಿದರು.
Bayalu Birugali – BB News BB News I Kannada Breaking News | Kannada Latest News | News Updates | Political News Updates – Bayalu Birugali News