ಭಾರತದಲ್ಲಿ ಕೊರೊನಾ ವೈರಸ್ ಸೇರಿದಂತೆ ಇತರ ಸಾಂಕ್ರಾಮಿಕ ರೋಗಗಳಿಗೆ ಕಂಡುಹಿಡಿಯಲಾಗುತ್ತಿರುವ ಲಸಿಕೆಯ ಸಂಶೋಧನೆ ಮತ್ತು ಪ್ರಗತಿ ವರದಿಯನ್ನು ತಿಳಿಸಲು ಅಖಿಲ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ(ಐಸಿಎಂಆರ್), ಶೀಘ್ರದಲ್ಲೇ ಆನ್ಲೈನ್ ಪೋರ್ಟಲ್ನ್ನು ಉದ್ಘಾಟಿಸಲಿದೆ. ಭಾರತದಲ್ಲಿ ಕೊರೊನಾ ವೈರಸ್ಗಾಗಿ ಕಂಡು ಹಿಡಿಯಲಾಗುತ್ತಿರುವ ಲಸಿಕೆಯ ಸಂಶೋಧನೆ ಮತ್ತು ಪ್ರಗತಿ ವರದಿಯನ್ನು ತಿಳಿಸಲು ಅಖಿಲ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ(ಐಸಿಎಂಆರ್), ಶೀಘ್ರದಲ್ಲೇ ಆನ್ಲೈನ್ ಪೋರ್ಟಲ್ನ್ನು ಉದ್ಘಾಟಿಸಲಿದೆ. ಸದ್ಯಕ್ಕೆ ಕೊರೊನಾ ವೈರಸ್ ಲಸಿಕೆ ಅಭಿವೃದ್ಧಿಯ ಕುರಿತಷ್ಟೇ ಮಾಹಿತಿ ನೀಡಲಿರುವ ಈ …
Read More »ಬಾಗಲಕೋಟೆ: ಮಲಪ್ರಭಾ ನದಿಗೆ ಒಳಹರಿವು ಹೆಚ್ಚಳ, ಸೇತುವೆಗಳು ಜಲಾವೃತ, ಗ್ರಾಮದ ಜನರಿಗೆ ಆತಂಕ
ಕಳೆದ ಮೂರು ದಿನಗಳಿಂದ ಇಳಿಮುಖವಾಗಿದ್ದ ಮಲಪ್ರಭೆ ಪ್ರವಾಹ ಗಣೇಶನ ಹಬ್ಬದ ದಿನದಂದೇ ಮತ್ತೆ ಹೆಚ್ಚಾಗಿದೆ. ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಗೋವಿನಕೊಪ್ಪ ಸೇತುವೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಆತಂಕದ ವಾತಾವರಣ ಉಂಟಾಗಿದೆ. ಬಾಗಲಕೋಟೆ ಜಿಲ್ಲೆಯಲ್ಲಿ ಮಲಪ್ರಭಾ ನದಿಗೆ ನೀರಿನ ಒಳ ಹರಿವು ಹೆಚ್ಚಾಗಿದೆ. ಇದರಿಂದ ನದಿ ತೀರದ ಪ್ರದೇಶದಲ್ಲಿರುವ ಗ್ರಾಮಗಳಿಗೆ ತೀವ್ರ ಆತಂಕ ಉಂಟಾಗಿದೆ. ನವಿಲು ತೀಥ೯ ಜಲಾಶಯದಿಂದ 11 ಸಾವಿರ ಕ್ಯುಸೆಕ್ ನೀರನ್ನು ಹೊರಬಿಡಲಾಗಿದೆ. ಇದರಿಂದ ಗೋವಿನಕೊಪ್ಪ ಚಿಕ್ಕ ಸೇತುವೆ ಮತ್ತೆ …
Read More »ರಾಯಚೂರು: ಕೋವಿಡ್ ಆಸ್ಪತ್ರೆಗೆ ನುಗ್ಗಿದ ಹಂದಿಗಳು, ಅವ್ಯವಸ್ಥೆ ಬಗ್ಗೆ ಸೋಂಕಿತರ ಆಕ್ರೋಶ
ಕೆಲ ದಿನಗಳ ಹಿಂದಷ್ಟೇ ಸೋಂಕಿತರೇ ಕೋವಿಡ್ ಆಸ್ಪತ್ರೆಯ ವಾರ್ಡಿನ ಕಸಗೂಡಿಸಿದ ಬಗ್ಗೆ ಮಾಹಿತಿ ಬಯಲಾಗಿತ್ತು. ಇದೀಗ ಹಂದಿಗಳು ಆಸ್ಪತ್ರೆಯೊಳಗೆ ನುಗ್ಗಿ ಮೆಡಿಕಲ್ ತ್ಯಾಜ್ಯವನ್ನು ಚೆಲ್ಲಾಪಿಲ್ಲಿ ಮಾಡಿದ್ದು ಸೋಂಕಿತರ ಆಕ್ರೋಶಕ್ಕೆ ಕಾರಣವಾಗಿದೆ.ನಗರದ ಓಪೆಕ್ ನೆರವಿನ ರಾಜೀವ್ ಗಾಂಧಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಕೋವಿಡ್ ವಾರ್ಡಿನ ಅವ್ಯವಸ್ಥೆ ಮತ್ತೊಮ್ಮೆ ಬಯಲಾಗಿದೆ. ಸೋಂಕಿತರಿಂದಲೇ ಅವ್ಯವಸ್ಥೆ ಬಯಲಿಗೆಳೆಯುವ ಪ್ರಯತ್ನ ಇದಾಗಿದೆ. ಕೋವಿಡ್ ವಾರ್ಡಿನಲ್ಲಿ ಶನಿವಾರ ರಾತ್ರಿ ಹಂದಿಗಳು ನುಗ್ಗಿ ವಿವಿಧ ರೀತಿಯ ತ್ಯಾಜ್ಯದ ಚೀಲಗಳನ್ನು ಕಿತ್ತಿ ತಿನ್ನುವ ವಿಡಿಯೋ …
Read More »ಬಾಬ್ರಿ ಮಸೀದಿ ಧ್ವಂಸ ಪ್ರಕರಣ: ಸೆ.30ರೊಳಗೆ ತೀರ್ಪು ನೀಡುವಂತೆ ಸುಪ್ರೀಂ ಆದೇಶ
ಹೊಸದಿಲ್ಲಿ: ಅಯೋಧ್ಯೆ ಬಾಬ್ರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಸಪ್ಟೆಂಬರ್ 30ರೊಳಗೆ ವಿಚಾರಣೆ ಪೂರ್ಣಗೊಳಿಸಿ ತೀರ್ಪು ನೀಡಬೇಕೆಂದು ಲಕ್ನೋ ಸಿಬಿಐ ನ್ಯಾಯಾಧೀಶರಿಗೆ ಸುಪ್ರೀಂ ಕೋರ್ಟ್ ಆದೇಶ ನೀಡಿದೆ. 1992ರ ಬಾಬ್ರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕರಾದ ಲಾಲ್ ಕೃಷ್ಣ ಅಡ್ವಾಣಿ, ಮುರಳಿ ಮನೋಹರ್ ಜೋಶಿ ಸೇರಿದಮಥೆ ಹಲವರು ವಿರುದ್ಧ ಪ್ರಕರಣ ದಾಖಲಾಗಿದ್ದು, ಲಕ್ನೋ ಸಿಬಿಐ ಕೋರ್ಟ್ ನಲ್ಲಿ ವಿಚಾರಣೆ ನಡೆಯುತ್ತಿದೆ. ಈ ಹಿಂದೆ ಆಗಸ್ಟ್ 31ರ ಒಳಗೆ ತೀರ್ಪು …
Read More »ಬಾಗಲಕೋಟೆ: ಕೋವಿಡ್ನಿಂದ 122 ಮಂದಿ ಗುಣಮುಖ, 138 ಹೊಸ ಪ್ರಕರಣ ದೃಢ
ಬಾಗಲಕೋಟೆ: ಜಿಲ್ಲೆಯಲ್ಲಿ 122 ಮಂದಿ ಕೋವಿಡ್ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ. ಶನಿವಾರ ಹೊಸದಾಗಿ 138 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ನಾಲ್ವರು ಸಾವಿಗೀಡಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 5060 ಕೋವಿಡ್ ಪ್ರಕರಣ ದೃಡಪಟ್ಟಿವೆ. ಈ ಪೈಕಿ ಒಟ್ಟು 4151 ಜನ ಕೋವಿಡ್ನಿಂದ ಗುಣಮುಖರಾಗಿದ್ದಾರೆ. ಹೊಸದಾಗಿ ದೃಢಪಟ್ಟವರಲ್ಲಿ ಬಾಗಲಕೋಟೆ ತಾಲ್ಲೂಕಿನ 33, ಬಾದಾಮಿ 12, ಹುನಗುಂದ 22, ಬೀಳಗಿ 3, ಮುಧೋಳ 51, ಜಮಖಂಡಿ …
Read More »ಜಮ್ಮು ಕಾಶ್ಮೀರದಲ್ಲಿ ಆರು ರಾಜಕೀಯ ಪಕ್ಷಗಳ ಮೈತ್ರಿ: ಏನಿದು ಹೊಸ ಬೆಳವಣಿಗೆ?
ಶ್ರೀನಗರ: ಜಮ್ಮು ಕಾಶ್ಮೀರದಲ್ಲಿ ಮತ್ತೆ ರಾಜಕೀಯ ಸುದ್ದಿಯಾಗುತ್ತಿದೆ. ರಾಜಕೀಯ ಚಟುವಟಿಕೆಗಳು ಗರಿಗೆದರುತ್ತಿದೆ. ಮಹತ್ವದ ಬೆಳವಣಿಗೆಯೊಂದರಲ್ಲಿ ಜಮ್ಮು ಕಾಶ್ಮೀರದ ಆರು ರಾಜಕೀಯ ಪಕ್ಷಗಳು ಮೈತ್ರಿಗೆ ಮುಂದಾಗಿದೆ. ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಮರಳಿ ಸಿಗುವಂತೆ ಮಾಡಬೇಕು. ಇದರೊಂದಿಗೆ ರಾಜ್ಯ ಸ್ಥಾನಮಾನವನ್ನು ಮರಳಿ ನೀಡುವಂತೆ ಆಗ್ರಹಿಸುವುದು ಈ ರಾಜಕೀಯ ಮಹಾ ಮೈತ್ರಿಯ ಹಿಂದಿನ ಉದ್ದೇಶವಾಗಿದೆ ಎಂದು ವರದಿಯಾಗಿದೆ. ಕಾಂಗ್ರೆಸ್, ನ್ಯಾಷನಲ್ ಕಾನ್ಫರೆನ್ಸ್, ಪಿಡಿಪಿ, ಪೀಪಲ್ಸ್ ಕಾನ್ಫರೆನ್ಸ್, ಸಿಪಿಎಂ, ಅವಾಮಿ ನ್ಯಾಷನಲ್ ಕಾನ್ಫರೆನ್ಸ್ (ಎಎನ್ ಸಿ) ಪಕ್ಷಗಳು …
Read More »ಪರಿಸರ ಸ್ನೇಹಿ ಗಣಪತಿ ಹಬ್ಬ ಆಚರಣೆ, ಸರಳ ವಿಸರ್ಜನೆ ಕಾರ್ಯಕ್ರಮ ಮೂಲಕ ಮಾದರಿಯಾದ ಕಬ್ಬರಗಿ ಯುವಕರು
ಕುಷ್ಟಗಿ: ಹೌದು ತಾಲೂಕಿನ ಕಬ್ಬರಗಿ ಗ್ರಾಮದ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ಯುವ ಘರ್ಜನೆ ರಾಜ್ಯ ಸಂಚಾಲಕರಾದಶ್ರೀಯುತ ಯಲ್ಲು ತೇಜಿ,ಅವರ ಸಾರಥ್ಯದಲ್ಲಿ ಗ್ರಾಮದ ಹಾಲುಮತ ಸಮಾಜದ ವತಿಯಿಂದ ಭವಣದಲ್ಲಿ ಇಂದು ಸರಳವಾಗಿ ಒಂದು ದಿನದ ಮಟ್ಟಿಗೆ ತರುಣರು ಸೇರಿ ಪರಿಸರ ಸ್ನೇಹಿ ಗಣಪತಿಯನ್ನು ಪ್ರತಿಷ್ಟಾಪನೆ ಮಾಡಿ ಅದ್ದೂರಿತನದಲಿ ಸರಳವಾಗಿ ಗ್ರಾಮಕ್ಕೆ ಮಾದರಿಯಾಗಿ ಇಂದು ಸಾಯಂಕಾಲ ೭ಗಂ, ಸುಮಾರಿಗೆ ಗಣಪತಿಯನ್ನು ವಿಸರ್ಜಿಸುವ ಮೂಲಕ ಹಬ್ಬಕ್ಕೆ ತೆರೆ ಎಳೆಯಕಾಯಿತು. ಈ ಬಗ್ಗೆ ಮಾತನಾಡಿದ …
Read More »ಉಗ್ರ ದಾವೂದ್ ಇಬ್ರಾಹಿಂ ನಮ್ಮ ದೇಶದಲ್ಲೇ ಇದ್ದಾನೆ’.. ಕೊನೆಗೂ ಒಪ್ಪಿಕೊಂಡ ಪಾಕಿಸ್ತಾನ
ಕರಾಚಿ: ಉಗ್ರರನ್ನ ಪೋಷಣೆ ಮಾಡುತ್ತಿರುವ ಪಾಕಿಸ್ತಾನ ಕೊನೆಗೂ ತಲೆಮರೆಸಿಕೊಂಡಿರುವ ಉಗ್ರ ದಾವೂದ್ ಇಬ್ರಾಹಿಂ ವಿಚಾರದಲ್ಲಿ ತನ್ನ ಮುಖವಾಡನ್ನ ಕಳಚಿ ಸತ್ಯವನ್ನ ಹೇಳಿದೆ. ಭಾರತದ ಮೋಸ್ಟ್ ವಾಂಟೆಡ್ ಉಗ್ರ ದಾವೂದ್ ಇಬ್ರಾಹಿಂ ಪಾಕಿಸ್ತಾನದಲ್ಲಿ ಇದ್ದಾನೆ ಅಂತಾ ಸಾರಿ ಸಾರಿ ಹೇಳಿತ್ತು. ಆದರೆ ಪಾಕಿಸ್ತಾನ ಇದುವರೆಗೂ ದಾವೂದ್ ಇಬ್ರಾಹಿಂ ತಮ್ಮ ದೇಶದಲ್ಲಿ ಇರೋದನ್ನ ಒಪ್ಪಿಕೊಂಡಿರಲಿಲ್ಲ. ಇದೀಗ ತಾನಾಗೇ ಉಗ್ರ ಪಾಕ್ನಲ್ಲಿ ಅಡಗಿ ಕೂತಿದ್ದಾನೆ ಅನ್ನೋದನ್ನ ತಿಳಿಸಿದೆ. ವಿಶ್ವಸಂಸ್ಥೆ ಸೇರಿದಂತೆ ಅಂತಾರಾಷ್ಟ್ರೀಯ ಸಂಘಟನೆಗಳ ಎಚ್ಚರಿಕೆ …
Read More »SSLC ಪೂರಕ ಪರೀಕ್ಷೆ ವೇಳಾಪಟ್ಟಿ ಪ್ರಕಟ
ಬೆಂಗಳೂರು : ಕೊರೊನಾ ಆತಂಕದ ನಡುವೆಯೂ ರಾಜ್ಯ ಸರ್ಕಾರ, 10ನೇ ತರಗತಿ ಪರೀಕ್ಷೆಗಳನ್ನು ಯಶಸ್ವಿಯಾಗಿ ನಡೆಸಿದ್ದು, ಈಗಾಗಲೇ ಫಲಿತಾಂಶವನ್ನು ಪ್ರಕಟಿಸಲಾಗಿದೆ. ಇದೀಗ ರಾಜ್ಯ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಅನುತ್ತೀರ್ಣಗೊಂಡ ಹಾಗೂ ಕೊರೊನಾ ಕಾರಣಕ್ಕೆ ಪರೀಕ್ಷೆ ಬರೆಯದಿರುವ ಅಭ್ಯರ್ಥಿಗಳಿಗಾಗಿ ಪೂರಕ ಪರೀಕ್ಷೆ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಪೂರಕ ಪರೀಕ್ಷೆ ಸೆ. 21 ರಿಂದ 29 ರವರೆಗೆ ನಡೆಯಲಿದೆ. ಈ ಕುರಿತು ಮಾಹಿತಿ ನೀಡಿರುವ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯು, ಬೆಳಗ್ಗೆ 10.30 ರಿಂದಲೇ ಪರೀಕ್ಷೆ ಆರಂಭವಾಗಲಿದ್ದು, …
Read More »ಕೊರೋನಾ ಭೀತಿ ಮಧ್ಯೆ ಪ್ರಯಾಣಿಕರನ್ನು ಸೆಳೆಯಲು KSRTC ಬಸ್ ವಿನ್ಯಾಸ ಬದಲು
ಬೆಂಗಳೂರು: ಕೊರೋನಾ ಸೋಂಕಿನ ಹಿನ್ನೆಲೆಯಲ್ಲಿ ಪ್ರಯಾಣಿಕರ ನಡುವೆ ಸಾಮಾಜಿಕ ಅಂತರ ಕಾಯ್ದು ಕೊಳ್ಳಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್ಆರ್ಟಿಸಿ) ಇದೀಗ ಬಸ್ಗಳ ಆಸನ ವಿನ್ಯಾಸ ಬದಲಾವಣೆಗೆ ಮುಂದಾಗಿದೆ. ಪ್ರಾಯೋಗಿಕವಾಗಿ ಬೆಂಗಳೂರು ಕೇಂದ್ರ ವಿಭಾಗದ 2X2 ವಿನ್ಯಾಸದ ಎರಡು ಸಾಲಿನ 39 ಆಸನ ಸಾಮರ್ಥ್ಯದ ರಾಜಹಂಸ (ನೋಂದಣಿ ಸಂಖ್ಯೆ ಕೆಎ 27 ಎಫ್ 1803) ಬಸ್ನಲ್ಲಿ ಆಸನ ವಿನ್ಯಾಸ ಬದಲಾವಣೆ ಮಾಡಲಾಗಿದೆ. ಅಂದರೆ, 2X2 ವಿನ್ಯಾಸದ ಎರಡು ಸಾಲುಗಳ ಆಸನಗಳನ್ನು …
Read More »
Bayalu Birugali – BB News BB News I Kannada Breaking News | Kannada Latest News | News Updates | Political News Updates – Bayalu Birugali News