Breaking News

vijay_shankar

ಮಾದರಿ ಕೊಡದಿದ್ದರೂ ಬಂತು ಪಾಸಿಟಿವ್ ವರದಿ!

ಬೆಂಗಳೂರು: ಕೋವಿಡ್‌ಗೆ ಪರೀಕ್ಷೆಗೆ ನೀವು ಮಾದರಿ ಕೊಡದೇ ಇದ್ದರೂ, ನಿಮಗೆ ಕೋವಿಡ್‌ ಪಾಸಿಟಿವ್‌ ಬಂದಿದೆ ಎಂದು ಬಿಬಿಎಂಪಿಯಿಂದ ಕರೆ ಬಂದರೆ ಹೇಗಿರುತ್ತದೆ! ನಗರದಲ್ಲಿ ಮೂವರು ಯುವತಿಯರು ಇಂತಹ ಸಂದಿಗ್ಧ ಎದುರಿಸುತ್ತಿದ್ದಾರೆ. ‘ಕೋವಿಡ್‌ ಪರೀಕ್ಷೆಗೆ ನಾನು ಗಂಟಲು ದ್ರವ ನೀಡಿರಲಿಲ್ಲ. ಆರ್‌ಟಿ-ಪಿಸಿಆರ್ ಪರೀಕ್ಷೆಯನ್ನು ಮಾಡಿಸಿಕೊಂಡಿರಲಿಲ್ಲ. ಆದರೆ, ನಿಮಗೆ ಕೊರೊನಾ ಪಾಸಿಟಿವ್ ಆಗಿದೆ ಬಿಬಿಎಂಪಿಯಿಂದ ಎಂದು ಹಲವರು ಕರೆ ಮಾಡುತ್ತಿದ್ದಾರೆ. ಮಾನಸಿಕವಾಗಿ ಹಿಂಸೆ ಆಗುತ್ತಿದೆ’ ಎಂದು ವಾಣಿ ನಂಜೇಗೌಡ ‘ಪ್ರಜಾವಾಣಿ’ ತಿಳಿಸಿದರು. ‘ಸೆ.24ರಂದು ನಾನು …

Read More »

80 ವರ್ಷ ಮೇಲ್ಪಟ್ಟ ಪಿಂಚಣಿದಾರರು ಆನ್‌ ಲೈನ್‌ ನಲ್ಲಿ ಜೀವನ ಪ್ರಮಾಣ ಪತ್ರ ಪಡೆಯುವುದು ಹೇಗೆ.? ಇಲ್ಲಿದೆ ಸಂಪೂರ್ಣ ಮಾಹಿತಿ

ನಿವೃತ್ತಿ ಬಳಿಕ ಪಿಂಚಣಿ ಪಡೆಯುತ್ತಿರುವವರೆಲ್ಲ ನವೆಂಬರ್ 30ರ ಒಳಗಾಗಿ ಜೀವನ ಪ್ರಮಾಣ ಪತ್ರವನ್ನು ಸಲ್ಲಿಸಬೇಕಿತ್ತು. 80 ವರ್ಷ ಮೇಲ್ಪಟ್ಟವರು ಆನ್ ಲೈನ್ ನಲ್ಲೇ ಪ್ರಮಾಣಪತ್ರ ಸಲ್ಲಿಕೆ ಮಾಡಲು ಅವಕಾಶ ಕಲ್ಪಿಸಲಾಗಿದೆ. ಆದರೆ ಕೊರೊನಾ ಹಿನ್ನಲೆಯಲ್ಲಿ ಇದೀಗ ಜೀವನ ಪ್ರಮಾಣ ಪತ್ರ ಸಲ್ಲಿಕೆ ಅವಧಿಯನ್ನು ಡಿಸೆಂಬರ್‌ 31, 2020 ರ ವರೆಗೆ ವಿಸ್ತರಿಸಲಾಗಿದೆ. ಆಧಾರ್ ಮೂಲಕ ಆನ್ ಲೈನ್ ನಲ್ಲಿ ಡಿಜಿಟಲ್ ಲೈಫ್ ಸರ್ಟಿಫಿಕೇಟ್ ಅನ್ನು ಪಿಂಚಣಿದಾರರು ಪಡೆದುಕೊಳ್ಳಬಹುದು. ಅದನ್ನು ಸಲ್ಲಿಕೆ …

Read More »

ಬಾಹ್ಯಾಕಾಶ ಕೇಂದ್ರದಿಂದಲೇ ಗಗನಯಾತ್ರಿ ಮಾಡಲಿದ್ದಾರೆ ಮತದಾನ..!

ಅಮೆರಿಕ ಅಧ್ಯಕ್ಷೀಯ ಚುನಾವಣೆ ಹತ್ತಿರ ಬರುತ್ತಿದ್ದಂತೆ ಎಲ್ಲೆಡೆ ಈ ಸುದ್ದಿಯೇ ಜೋರಾಗಿದೆ. ಅಮೆರಿಕ ಗಗನಯಾತ್ರಿಗಳು ಹೇಗೆ ಮತ ಹಾಕುತ್ತಾರೆ ಎಂಬ ಪ್ರಶ್ನೆಗೆ ಇಲ್ಲಿದೆ ಉತ್ತರ. ಗಗನಯಾತ್ರಿಗಳು ಮಿಕ್ಕ ಪ್ರಜೆಗಳಂತೆ ಮತ ಹಾಕಲು ಸರತಿ ಸಾಲಿನಲ್ಲಿ ನಿಲ್ಲಬೇಕಿಲ್ಲ. ಅವರ ತಾತ್ಕಾಲಿಕ ಮನೆಯಾದ ಅಂತಾರಾಷ್ಟ್ರೀಯ ಬಾಹ್ಯಾಕಾಶ ಕೇಂದ್ರದಿಂದಲೇ ಮತ ಚಲಾವಣೆ ಮಾಡಬಹುದಾಗಿದೆ. ಈ ಬಾರಿಯ ಅಧ್ಯಕ್ಷೀಯ ಚುನಾವಣೆಯ ಮತದಾನದ ವೇಳೆ, ನಾಸಾ ಗಗನಯಾತ್ರಿ ಕೇಟ್ ರುಬಿನ್ಸ್‌ ತಮ್ಮಿಬ್ಬರು ಸಹೋದ್ಯೋಗಿಗಳೊಂದಿಗೆ ಅಂತಾರಾಷ್ಟ್ರೀಯ ಬಾಹ್ಯಾಕಾಶ ಕೇಂದ್ರದಲ್ಲಿ …

Read More »

ಕೊರೊನಾ ಪುರುಷರನ್ನೇ ಹೆಚ್ಚು ಕಾಡುವುದಕ್ಕೆ ಈ ಕಾರಣ

ಕೊರೊನಾ ಮಹಿಳೆಯರಿಗಿಂತ ಪುರುಷರನ್ನು ಹೆಚ್ಚು ಬಾಧಿಸುತ್ತಿದೆಯೇ..? ಹೌದು ಎನ್ನುತ್ತವೆ ಇತ್ತೀಚಿನ ಸಂಶೋಧನೆಗಳು. ಕೋವಿಡ್ ನಲ್ಲಿ ಪುರುಷರ ಸಾವಿನ ಪ್ರಮಾಣವೂ ಹೆಚ್ಚಿದೆ ಎಂಬ ಮಾಹಿತಿಯನ್ನು ಸಂಶೋಧಕರು ನೀಡಿದ್ದಾರೆ. ಇ.ಎಸ್.ಸಿ.ಎಂ.ಐ.ಡಿ. ಸೆಪ್ಟೆಂಬರ್ ಕಾನ್ಫರೆನ್ಸ್ ನಲ್ಲಿ ಬಿಡುಗಡೆ ಮಾಡಿದ ದಾಖಲೆಗಳ ಪ್ರಕಾರ ಕೋವಿಡ್ ಗೆ ತುತ್ತಾಗುವ ಪ್ರಮಾಣ ಮಹಿಳೆಯರಿಗಿಂತ ಪುರುಷರಲ್ಲಿ ಶೇ.62 ರಷ್ಟು ಹೆಚ್ಚಿದೆ. ಅಲ್ಲದೇ ಸಾವಿನ ಪ್ರಮಾಣವೂ ಹೆಚ್ಚಿದೆ ಎಂದು ವರದಿ ಹೇಳಿದೆ. ಈ ಹಿಂದೆ ಬಿಡುಗಡೆಯಾದ ಅಧ್ಯಯನ ವರದಿಯಲ್ಲಿ‌ ಪುರುಷರು ಹಾಗೂ …

Read More »

ಪವರ್ ಟಿವಿ ಸ್ಥಗಿತಕ್ಕೆ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ.

ಬೆಂಗಳೂರು:- ಕರ್ನಾಟಕ ಬಂದ್ ನಡೆದ ದಿನವೇ ಪೊಲೀಸರ ದಾಳಿಯಿಂದ ಸ್ಥಗಿತಗೊಂಡಿದ್ದ ಪ್ರಾದೇಶಿಕ ಸುದ್ದಿ ವಾಹಿನಿ-ಪವರ್ ಟಿವಿ ಕಾರ್ಯಾರಂಭ ಮಾಡಲಿಲ್ಲ. ಸೋಮವಾರ ಸಂಜೆ ಸುದ್ದಿಯನ್ನು ಭಿತ್ತಿರಿಸುತ್ತಿದ್ದ ವಾಹಿನಿಯನ್ನು ಹಾಗೂ ಅದರ ಸಾಮಾಜಿಕ ಜಾಲತಾಣಗಳ ಖಾತೆಗಳನ್ನು ಏಕಕಾಲಕ್ಕೆ ಸ್ಥಗಿತಗೊಳಿಸಲಾಗಿದೆ. ರಾಜ್ಯದ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರ ಪುತ್ರ ಬಿ. ವೈ. ವಿಜಯೇಂದ್ರ ಕುರಿತಾದ ಹಗರಣದ ಸುದ್ದಿಯನ್ನು ಪವರ್ ಟಿವಿ ಎರಡು ತಿಂಗಳ ಹಿಂದೆಯೇ ಪ್ರಸಾರ ಮಾಡುವ ಸುಳಿವು ನೀಡಿತ್ತು. ಆದರೆ, ಡ್ರಗ್ …

Read More »

ಕೇಂದ್ರ ಸರ್ಕಾರದಿಂದ ಅನ್ ಲಾಕ್ 5.0 ಮಾರ್ಗಸೂಚಿ ಬಿಡುಗಡೆ : ಅ.15 ರಿಂದ ಚಿತ್ರಮಂದಿರ ಓಪನ್

ಡಿಜಿಟಲ್ ಡೆಸ್ಕ್ : ಕೊರೊನಾ ಆರ್ಭಟದ ನಡುವೆಯೇ ಕೇಂದ್ರ ಸರ್ಕಾರ ಅನ್ ಲಾಕ್ 5.0 ಮಾರ್ಗಸೂಚಿ ಪ್ರಕಟ ಮಾಡಿದೆ. ಅನ್ ಲಾಕ್ 5.0 ಮಾರ್ಗಸೂಚಿ ಪ್ರಕಾರ ಅ.15 ರಿಂದ ಚಿತ್ರಮಂದಿರ ತೆರೆಯಲು ಅವಕಾಶ ನೀಡಲಾಗಿದ್ದು, 50 % ವೀಕ್ಷಕರಿಗೆ ಮಾತ್ರ ಚಿತ್ರಮಂದಿರಕ್ಕೆ ಪ್ರವೇಶ ನೀಡಲು ಅವಕಾಶ ಕಲ್ಪಿಸಲಾಗಿದೆ. ಇದರ ಜೊತೆಗೆ ಶಾಲಾ ಕಾಲೇಜು, ಕೋಚಿಂಗ್ ಸಂಸ್ಥೆಗಳನ್ನು ತೆರೆಯುವ ಬಗ್ಗೆ ರಾಜ್ಯ ಸರ್ಕಾರವೇ ತೀರ್ಮಾನ ಕೈಗೊಳ್ಳಲಿದೆ. ಕ್ರೀಡಾಪಟುಗಳ ತರಬೇತಿಗಾಗಿ ಬಳಸಲಾಗುವ ಈಜುಕೊಳಗಳನ್ನು ಅಕ್ಟೋಬರ್ 15 ರಿಂದ ತೆರೆಯಲು …

Read More »

ನಡುರಾತ್ರಿಯಲ್ಲಿನ ಪೊಲೀಸರ ಕಾರ್ಯವನ್ನು ಬಯಲಿಗೆಳೆದ ದಿಟ್ಟ ‘ಪತ್ರಕರ್ತೆ’

ಉತ್ತರ ಪ್ರದೇಶದ ಹತ್ರಾಸ್ ನಲ್ಲಿ ನಡೆದ ದಲಿತ ಯುವತಿಯ ಮೇಲಿನ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣ ಈಗ ದೇಶದಾದ್ಯಂತ ದೊಡ್ಡ ಸದ್ದು ಮಾಡುತ್ತಿದೆ. ಸ್ವತಃ ಪ್ರಧಾನಿ ನರೇಂದ್ರ ಮೋದಿಯವರೇ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಕರೆ ಮಾಡಿ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸುವಂತೆ ಸೂಚಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಯೋಗಿ ಆದಿತ್ಯನಾಥ್ ಈಗ ವಿಶೇಷ ತನಿಖಾ ತಂಡವನ್ನು ರಚಿಸಿದ್ದು, ಏಳು ದಿನಗಳೊಳಗಾಗಿ ವರದಿಯನ್ನು ನೀಡುವಂತೆ ಸೂಚಿಸಿದ್ದಾರೆ. ಇದರ ಮಧ್ಯೆ …

Read More »

ಸಹಾಯಕ ಕೃಷಿ ಅಧಿಕಾರಿ ಬಸವರಾಜ ಭಜಂತ್ರಿ ಅವರಿಗೆ ಅದ್ದೂರಿ ಬಿಳ್ಕೋಡುಗೆ ಮತ್ತು ಸನ್ಮಾನ ಸಮಾರಂಭ.

ರೋಣ : ತಾಲ್ಲೂಕಿನ ಉಪ ಕೃಷಿ ನಿರ್ದೇಶಕರು ೨ ಕಾರ್ಯಾಲಯ ರೋಣ ಸದರಿ ಇಲಾಖೆಯ ವತಿಯಿಂದ ಇಂದು ತಾಲೂಕಿನ RSK ಹೊಳೆ ಆಲೂರು ನಗರದಲ್ಲಿ ಸಹಾಯಕ ಕೃಷಿ ಅಧಿಕಾರಿಗಿ ಸೇವೆ ಸಲ್ಲಿಸುತ್ತಿದ್ದ ಶ್ರೀ ಬಸವರಾಜ,ಭಜಂತ್ರಿ ಅವರು ಇಂದು ತಮ್ಮ ಉದ್ದೆಯಿಂದ ನಿವೃತ್ತಿ ಹೊಂದಿದರು ೧೯೮೬ ರಿಂದ ಗಂಗಾವತಿ ತಾಲೂಕಿನ ಆನೆಗುಂದಿ ಗ್ರಾಮದಲ್ಲಿ ಗ್ರಾಮ ಸೇವಕರಾಗಿ ಸುಧೀರ್ಘ ೧೧ ವರ್ಷ ಕೆಲಸ ಮಾಡಿ ಅಲ್ಲಿಂದ ಯಲಬುರ್ಗಾ ತಾಲ್ಲೂಕಿನಲ್ಲಿ ೧೬ ವರ್ಷ ಸೇವೆ …

Read More »

ಸರಳ ಸಮಾರಂಭದ ಮೂಲಕ ಮಹೇಶ್ ಜಕ್ಕಲಿ ಅವರಿಗೆ ಅತ್ಯುತ್ತಮ ಕಾರ್ಯನಿರ್ವಹಣ ರಾಜ್ಯ ಪ್ರಶಸ್ತಿ ಪ್ರದಾನ ಸಮಾರಂಭ

ಹನುಮನಾಳ: ೧೯೮೧ ರಿಂದ ಕುಷ್ಟಗಿ ತಾಲೂಕಿನ ಹನುಮನಾಳ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿದ ಶ್ರಿಯುತ ಮಹೇಶ್ ಜಕ್ಕಲಿ ಅವರಿಗೆ ಇಂದು ಅವರ ಸಂಘದಲ್ಲಿ ಸರಳ ಸಮಾರಂಭದ,ಮೂಲಕ ಸಂಘಧ ಅಧ್ಯಕ್ಷ ಅಡೆವೆಪ್ಪ ಗೌಡರ ಹಾಗೂ ಪತ್ರಿಕೆ ಸಂಪಾದಕ ಡಿ,ಬಿ, ವಿಜಯಶಂಕರ್ ಅವರ ನೇತೃತ್ವದಲ್ಲಿ ಇಂದು ಪ್ರಶಸ್ತಿ ಪ್ರದಾನ ಮಾಡಲಾಯಿತು ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಅಡಿವೆಪ್ಪ ಗೌಡರ್ ೧೯೮೧ ರಿಂದ ಸಂಘದಲ್ಲಿ ಸುಧೀರ್ಘ ೩೫ ವರ್ಷ …

Read More »

ಉತ್ತರ ಕರ್ನಾಟಕದ ರೈತ ಹಾಗೂ ಕಬ್ಬು ಬೆಳೆಗಾರರ ಸಂಘ ಪ್ರತಿಭಟನೆ

ಬೆಳಗಾವಿ: ರಾಜ್ಯ ಸರಕಾರದ ಭೂ ಸುಧಾರಣೆ ತಿದ್ದುಪಡಿ ಮಸೂದೆ ಹಾಗೂ ಕೇಂದ್ರ ಸರಕಾರದ ಕೃಷಿ ಮತ್ತು ಕಾರ್ಮಿಕ ಸಂಬಂಧಿತ ಕಾಯ್ದೆ ವಿರೋಧಿಸಿ ಸೋಮವಾರ ರೈತ ಸಂಘಟನೆಗಳು ರಸ್ತೆ ತಡೆ ನಡೆಸಿ ಪ್ರತಿಭಟನೆ ಹಮ್ಮಿಕೊಂಡಿದ್ದರು. ರೈತ, ಕಾರ್ಮಿಕ ವಿರೋಧಿ ವಿಧೇಯಕಗಳನ್ನು ಜಾರಿಗೊಳಿಸುತ್ತಿರುವ ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ವಿರುದ್ಧ ರೈತಪರ ಸಂಘಟನೆಗಳು, ಕಾರ್ಮಿಕ, ದಲಿತ ಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್‌ಗೆ ಬೆಳಗಾವಿ ಸೇರಿದಂತೆ ರಾಜ್ಯಾದ್ಯಂತ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. …

Read More »