Breaking News

ಬಾಗಲಕೋಟೆ: ಮಲಪ್ರಭಾ ನದಿಗೆ ಒಳಹರಿವು ಹೆಚ್ಚಳ, ಸೇತುವೆಗಳು ಜಲಾವೃತ, ಗ್ರಾಮದ ಜನರಿಗೆ ಆತಂಕ

ಕಳೆದ ಮೂರು ದಿನಗಳಿಂದ ಇಳಿಮುಖವಾಗಿದ್ದ ಮಲಪ್ರಭೆ ಪ್ರವಾಹ ಗಣೇಶನ ಹಬ್ಬದ ದಿನದಂದೇ ಮತ್ತೆ ಹೆಚ್ಚಾಗಿದೆ. ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಗೋವಿನಕೊಪ್ಪ ಸೇತುವೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಆತಂಕದ ವಾತಾವರಣ ಉಂಟಾಗಿದೆ.

ಬಾಗಲಕೋಟೆ ಜಿಲ್ಲೆಯಲ್ಲಿ ಮಲಪ್ರಭಾ ನದಿಗೆ ನೀರಿನ ಒಳ ಹರಿವು ಹೆಚ್ಚಾಗಿದೆ. ಇದರಿಂದ ನದಿ ತೀರದ ಪ್ರದೇಶದಲ್ಲಿರುವ ಗ್ರಾಮಗಳಿಗೆ ತೀವ್ರ ಆತಂಕ ಉಂಟಾಗಿದೆ.

ನವಿಲು ತೀಥ೯ ಜಲಾಶಯದಿಂದ 11 ಸಾವಿರ ಕ್ಯುಸೆಕ್‌ ನೀರನ್ನು ಹೊರಬಿಡಲಾಗಿದೆ. ಇದರಿಂದ ಗೋವಿನಕೊಪ್ಪ ಚಿಕ್ಕ ಸೇತುವೆ ಮತ್ತೆ ಜಲಾವೃತಗೊಂಡಿದೆ.

ಗೋವಿನಕೊಪ್ಪದಿಂದ ಕೊಣ್ಣೂರ ಸಂಪರ್ಕಿಸುವ ರಸ್ತೆ ಬಂದ್‌ ಆಗಿದೆ. ಹೊಸ ಸೇತುವೆ ಮೂಲಕ ಸಂಚಾರ ವ್ಯವಸ್ಥೆ ಮಾಡಲಾಗಿದೆ.

ಹುಬ್ಬಳ್ಳಿ ಸೋಲ್ಹಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿರೋ ಗೋವಿನಕೊಪ್ಪ ಸೇತುವೆ ಈಗ ಜಲಾವೃತಗೊಂಡಿದೆ. ಬಾದಾಮಿ ತಾಲೂಕಿನ ನದಿ ತೀರದ ಗ್ರಾಮಗಳಲ್ಲಿ ಮತ್ತೆ ಆತಂಕ ಶುರುವಾಗಿದೆ. ನದಿ ತೀರದ ಅಕ್ಕಪಕ್ಕದ ಹೊಲಗದ್ದೆಗಳಿಗೆ ಮಲಪ್ರಭಾ ನದಿ ನೀರು ಹರಿದಿದ್ದು, ಬೆಳೆ ನಷ್ಟವಾಗಿದೆ.

ಕಳೆದ ಮೂರು ದಿನಗಳಿಂದ ಇಳಿಮುಖವಾಗಿದ್ದ ಮಲಪ್ರಭೆ ಪ್ರವಾಹ ಗಣೇಶನ ಹಬ್ಬದ ದಿನದಂದೇ ಮತ್ತೆ ಹೆಚ್ಚಾಗಿದೆ. ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಗೋವಿನಕೊಪ್ಪ ಸೇತುವೆ ಸುತ್ತ ಮುತ್ತಲಿನ ಗ್ರಾಮಗಳಲ್ಲಿ ಆತಂಕದ ವಾತಾವರಣ ಉಂಟಾಗಿದೆ.

About vijay_shankar

Check Also

ಕುಟಕನಕೇರಿ ಗ್ರಾಮದಲ್ಲಿ ಶ್ರೀ ಹೊಳೆಹುಚ್ಚೇಶ್ವರ ಅದ್ದೂರಿ ಜಾತ್ರಾ ಮಹೋತ್ಸವ ಸಂಪನ್ನ

ಬದಾಮಿ : ತಾಲೂಕಿನ ಕುಟಕನಕೇರಿ ಗ್ರಾಮದಲ್ಲಿ ಶ್ರೀ ಹೊಳೆಹುಚ್ಚೇಶ್ವರ ೧೦ ನೇ ವರ್ಷದ ಜಾತ್ರಾ ಮಹೋತ್ಸ ಅದ್ದೂರಿಯಾಗಿ ಜರುಗಿತು, ಬೆಳಗಿನ …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.