Breaking News

ಕ್ರೈಂ ಸ್ಟೋರಿ

ಅಮೀನಗಡ ನಗರದ ಪೋಲಿಸ್ ಇಲಾಖೆಯಿಂದ ಕಳ್ಳತನವಾದ ೨೧ ಬೈಕ್ ವಶ ! ಪ್ರಕರಣ ಬೇದಿಸಿದ ಸಿಬ್ಬಂದಿಗೆ ಬಹುಮಾನ ಘೋಷಣೆ ಮಾಡಿದ ಎಸ್ ಪಿ ಸಿದ್ದಾರ್ಥ ಗೋಯಲ್

ಅಮೀನಗಡ ನಗರದ ಪೋಲಿಸ್ ಇಲಾಖೆಯಿಂದ ಕಳ್ಳತನವಾದ ೨೧ ಬೈಕ್ ವಶ ! ಪ್ರಕರಣ ಬೇದಿಸಿದ ಸಿಬ್ಬಂದಿಗೆ ಬಹುಮಾನ ಘೋಷಣೆ ಮಾಡಿದ ಎಸ್ ಪಿ ಸಿದ್ದಾರ್ಥ ಗೋಯಲ್

ಅಮೀನಗಡ : ರಾಯಚೂರು, ಯಾದಗಿರಿ,ಬಾಗಲಕೋಟೆ ಸೇರಿದಂತೆ ಹಲವು ಕಡೆ ಬೈಕ್ ಕಳ್ಳತನ ವ್ಯಾಪಕವಾಗಿ ನಡೆಯುತ್ತಿತ್ತು ಈ ವಿಚಾರದಲ್ಲಿ ಸದರಿ ದಿನಾಂಕ ೧೩/೦೪/೨೦೨೫ ರಂದು ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲೂಕಿನ ರಾಮಣ್ಣ ಈಳಗೇರ ತಮ್ಮ ಬೈಕ್ ಕಳ್ಳತನ ಪ್ರಕರಣವನ್ನು ಅಮೀನಗಡ ಠಾಣೆಯಲ್ಲ ಗುಣ್ಣಾ ನಂ, ೫೦/೨೦೨೫ ರ ಕಲಂ ೩೦ [_೨ ] ಬಿ ಎನ್ ಎಸ್ ಅಡಿಯಲ್ಲಿ ದಾಖಲು ಮಾಡಿದಾಗ ಠಾಣೆ ಕ್ರೈಂ ಪಿ,ಎಸ್,ಐ ಶ್ರೀ ವಾಯ್ ಎಚ್ ಪಠಾಣ …

Read More »

ನಿಟ್ ಪರೀಕ್ಷೆಯಲ್ಲಿ ಕಡಿಮೆ ಅಂಕ ಪಡೆದ ಕಾರಣ ಮಗಳನ್ನೆ ಒಡೆದು ಕೊಂದ ಪಾಪಿ ತಂದೆ

ನಿಟ್ ಪರೀಕ್ಷೆಯಲ್ಲಿ ಕಡಿಮೆ ಅಂಕ ಪಡೆದ ಕಾರಣ  ಮಗಳನ್ನೆ ಒಡೆದು ಕೊಂದ ಪಾಪಿ ತಂದೆ

ದೂರದ ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಒಂದು ಮನೆಯೊಳಗೆ NEET ಪರೀಕ್ಷೆಯಲ್ಲಿ ಕಡಿಮೆ ಅಂಕ ತೆಗೆದುಕೊಂಡಿದ್ದಕ್ಕಾಗಿ ಒಂದು ಪುಟ್ಟ ಬಾಲಕಿಯ ಕೊಲೆಯಾಗಿದೆ. ಅಲ್ಲಿ ಅಪ್ಪನ ಕೈಯಿಂದ ಬಿದ್ದ ಬಡಿಗೆಯ ಏಟಿಗೆ ಪ್ರಾಣಬಿಟ್ಟ 17ರ ಮಗು ಸಾಧನಾಳ ಚೀತ್ಕಾರ ಇನ್ನೂ ಮಾರ್ದನಿಸುತ್ತಿರುವ ಹಾಗೆ ಭಾಸವಾಗುತ್ತಿದೆ. ಇಡೀ ದಿನದ ಕೆಲಸ, ಸ್ನೇಹಿತರ ಹರಟೆ ಎಲ್ಲದರ ನಡುವೆ ಈ ಸುದ್ದಿ ಮನಸ್ಸಿನ ಮೂಲೆಯಲ್ಲೆಲ್ಲೋ ಚುಚ್ಚುತ್ತಲೇ ಇದೆ. ನಾವು ಕಟ್ಟುವ ಒಂದೊಂದು ‘ನಾಳೆ’ಗಳೂ ಎಂತಹ ಭಯಾನಕ ರೂಪ …

Read More »

ಹುಬ್ಬಳಿ-ದಾರವಾಡ ಯುವತಿಯ ನಗ್ನ ವಿಡಿಯೋ ವಾಟ್ಸಾಫ್ ಸ್ಟೇಟಸ್ಸ್ ಇಟ್ಟ ಭೂಪ ಅಂದರ್

ಹುಬ್ಬಳ್ಳಿ.17: ವ್ಯಕ್ತಿಯೋರ್ವ ಯುವತಿಗೆ ಮದುವೆಯಾಗೋದಾಗಿ ನಂಬಿಸಿ ಯುವತಿಯ ನಗ್ನ ಚಿತ್ರವನ್ನು ವಾಟ್ಸಾಪ್ ಸ್ಟೇಟಸ್ಗೆ ಇಟ್ಟು ವಿಕೃತಿ ಮೆರೆದಿರುವ ಪ್ರಕರಣ ಹುಬ್ಬಳ್ಳಿಯಲ್ಲಿ ಬೆಳಕಿಗೆ ಬಂದಿದೆ. ಸಾಂಧರ್ಬಿಕ ಚಿತ್ರ ಮಹಾರಾಷ್ಟ್ರದ ಶಿರಡಿ ಮೂಲದ ಶುಭಂ ಮಧುಕರ ಕೂಲೆ ಎಂಬಾತ ಧಾರವಾಡದ ನರ್ಸಿಂಗ್ ವ್ಯಾಸಂಗ ಮಾಡುತ್ತಿರುವ ತನಗಿಂತ 20 ವರ್ಷ ಕಿರಿಯ ಯುವತಿಯೊಂದಿಗೆ ವಾಟ್ಸಾಪ್ ಮೂಲಕ ಸ್ನೇಹ ಬೆಳೆಸಿದ್ದಾನೆ. ಆ ಬಳಿಕ ಸ್ನೇಹ ಪ್ರೀತಿಗೆ ತಿರುಗಿದ್ದು ಮದುವೆಯಾಗೋದಾಗಿ ನಂಬಿಸಿ ನಗ್ನವಾಗಿ ವಿಡಿಯೋ ಕಾಲ್ ಮಾಡಲು …

Read More »

ರಾಜ್ ಕುಂದ್ರಾ ಪ್ರಕರಣದ ಬೆನ್ನಲ್ಲೇ ಬಂಗಾಳದಲ್ಲಿ ಮತ್ತೊಂದು ಅಶ್ಲೀಲ ಚಿತ್ರ ಪ್ರಕರಣ; ಬಂಗಾಳಿ ನಟಿ ನಂದಿತಾ ದತ್ತಾ ಬಂಧನ

ಕೋಲ್ಕತ್ತಾ: ಅಶ್ಲೀಲ ಚಿತ್ರ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ ಬಂಧನ ಪ್ರಕರಣ ಹಸಿರಾಗಿರುವಂತೆಯೇ ಅತ್ತ ಪಶ್ಚಿಮ ಬಂಗಾಳಲ್ಲೂ ಇಂತಹುದೇ ಪ್ರಕರಣವೊಂದು ಬಯಲಾಗಿದ್ದು, ಬಂಗಾಳಿ ನಟಿ ನಂದಿತಾ ದತ್ತಾ ಮತ್ತು ಹಲವರನ್ನು ಪೊಲೀಸರು ಬಂಧಿಸಿದ್ದಾರೆ. ಮೂಲಗಳ ಪ್ರಕಾರ ನೀಲಿ ಚಿತ್ರ ನಿರ್ಮಾಣ ಆರೋಪದ ಮೇಲೆ ಬಂಗಾಳಿ ನಟಿ, ರೂಪದರ್ಶಿ ನಂದಿತಾ ದತ್ತ ಹಾಗೂ ಅವರ ಮ್ಯಾನೇಜರ್‌ ಮೈನಾಕ್ ಘೋಷ್‌ ಮತ್ತು ಇತರರನ್ನು ಪೊಲೀಸರು ಬಂಧಿಸಿದ್ದಾರೆ. ನಂದಿತಾ ದತ್ತ …

Read More »

ಎರಡನೇ ಗಂಡನ ಮನೆಯಲ್ಲಿ ಯುವತಿ ಶವ ಪತ್ತೆ! ರೊಚ್ಚಿಗೆದ್ದ ಪೋಷಕರಿಂದ ನಡೆದೇ ಹೋಯ್ತು ಘೋರ ದುರಂತ

ಹುನಗುಂದ: ಮದುವೆಯಾಗಿದ್ದರೂ ಗಂಡನಿಂದ ದೂರವಾಗಿ ಪ್ರಿಯಕರನೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದ ಯುವತಿಯೊಬ್ಬಳು ಇಂದು ತನ್ನ ಪ್ರಿಯ ಗಂಡನ ಮನೆಯಲ್ಲೇ ದುರಂತ ಅಂತ್ಯಕಂಡಿದ್ದಾಳೆ. ಸಿಟ್ಟಿಗೆದ್ದ ಮೃತಳ ಪೋಷಕರು ಮಗಳ ಎರಡನೇ ಗಂಡನ ಮನೆಗೆ ಬೆಂಕಿ ಇಟ್ಟಿದ್ದಾರೆ. ಇಂತಹ ಘಟನೆ ಬಾಗಲಕೋಟೆ ಜಿಲ್ಲೆ ಹುನಗುಂದ ತಾಲೂಕಿನ ಕೆಲೂರಿನಲ್ಲಿ ಸಂಭವಿಸಿದ್ದು, ನೂರಾರು ಜನರ ಕಣ್ಣೆದುರಲ್ಲೇ ಮನೆ ಹೊತ್ತಿ ಉರಿದಿದೆ. ಗ್ರಾಮದಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಯುವತಿ ಬಸಮ್ಮ ಮಾದರ ಮತ್ತು ರಂಜಿತ್ ಕೊಂಚನವರ ಪರಸ್ಪರ ಪ್ರೀತಿಸುತ್ತಿದ್ದರು. …

Read More »

ಪತ್ನಿಯ ಗೆಳತಿಯರು ಮನೆಗೆ ಬರುತ್ತಿದ್ದಂತೆ ಅವರ ಬಟ್ಟೆ ಬಿಚ್ಚುತ್ತಿದ್ದ ಇದಕ್ಕೆ ಪತ್ನಿಯೇ ಸಾತ್ ನೀಡುತ್ತಿದ್ದಳು!

ಬೆಂಗಳೂರು: ಗಂಡನ ಅಣತಿಯಂತೆ ಫೇಸ್ಬುಕ್ನಲ್ಲಿ ಅಮಾಯಕ ಯುವತಿಯರ ಸ್ನೇಹ ಬೆಳೆಸುತ್ತಾಳೆ ಈ ಸುಂದರಿ. ಇದಾದ ಕೆಲವೇ ದಿನದಲ್ಲಿ ಮನೆಯಲ್ಲಿ ಹಬ್ಬ ಇದೆ ಊಟಕ್ಕೆ ಬನ್ನಿ ಎಂದು ನಯವಾಗಿ ಕರೆಯುತ್ತಾಳೆ. ಇವಳ ಆಹ್ವಾನಕ್ಕೆ ಓಗೊಟ್ಟು ಹೋದವರ ಲೈಫು ಕ್ಷಣಾರ್ಧದಲ್ಲಿ ಅಲ್ಲೋಲ-ಕಲ್ಲೋಲ ಆಗೋದು ಗ್ಯಾರಂಟಿ! ಚಂದ್ರಾಲೇಔಟ್ನಲ್ಲಿ ವಾಸವಿರುವ ಖತರ್ನಾಕ್ ದಂಪತಿ ಹೆಸರು ಕಾವ್ಯ ಮತ್ತು ಕೃಷ್ಣ. ರಾಜ್ಯ ರಾಜಧಾನಿ ಬೆಂಗಳೂರಲ್ಲಿ ಈ ದಂಪತಿ ಮಾಡುವ ಕೆಲಸ ಕೇಳಿದ್ರೆ ಶಾಕ್ ಆಗ್ತೀರಿ. ಸ್ನೇಹಿತರ ಮನೆಗೆ …

Read More »

ಮೊಬೈಲಿನಲ್ಲಿ ಮಾತಾಡದಂತೆ ಹೇಳಿದ್ದಕ್ಕೆ ಪತಿ ಹತ್ಯೆಗೆ ಸುಪಾರಿ ನೀಡಿದ ಪತ್ನಿ

ಕಾರವಾರ : ಪ್ರತಿ ದಿನ ಮನೆಯಲ್ಲಿ ಮೊಬೈಲ್ ನಲ್ಲಿ ಮಾತನಾಡುತ್ತಾ ಹರಟುತ್ತಿದ್ದ ಪತ್ನಿಗೆ ಬುದ್ಧಿ ಹೇಳಿದ್ದಕ್ಕೆ ಪತಿಯನ್ನೇ ಕೊಲ್ಲಲು 30 ಸಾವಿರ ಸುಪಾರಿ ನೀಡಿ ಹತ್ಯೆ ಪ್ರಯತ್ನದ ವೇಳೆ ಪತ್ನಿ ಸಿಕ್ಕಿಬಿದ್ದ ಘಟನೆ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯಲ್ಲಿ ನಡೆದಿದೆ. ಸರಸ್ವತಿ ಸುತಾರ ಪತಿಯ ಕೊಲೆಗೆ ಸುಪಾರಿ ನೀಡಿದ ಪತ್ನಿ. ಈಕೆ ದಾಂಡೇಲಿಯ ಅಂಕುಷ ರಾಮಾ ಸುತಾರ ಎಂಬುವವನನ್ನು ಆರು ವರ್ಷದ ಹಿಂದೆ ಮದುವೆಯಾಗಿದ್ದು, ಹಲವು ವರ್ಷಗಳಿಂದ ಮಕ್ಕಳಾಗಿರಲಿಲ್ಲ. ಹೀಗಾಗಿ …

Read More »

ಆಸ್ಪತ್ರೆಯೊಳಗೇ ರೋಗಿಯ ಸಜೀವ ದಹನಕ್ಕೆ ಪ್ರಯತ್ನ!

ಭೋಪಾಲ್​: ದುಷ್ಕರ್ಮಿಯೊಬ್ಬ ಆಸ್ಪತ್ರೆಯೊಳಗೆ ಬಂದು ಅಲ್ಲಿ ದಾಖಲಾಗಿದ್ದ ರೋಗಿಗೆ ಬೆಂಕಿ ಹಚ್ಚಿ ಸಜೀವ ದಹನ ಮಾಡಲು ಪ್ರಯತ್ನಿಸಿರುವ ಘಟನೆ ಮಧ್ಯಪ್ರದೇಶದ ಸಾಗರ ಜಿಲ್ಲೆಯಲ್ಲಿ ನಡೆದಿದೆ. ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿರುವ ದೃಶ್ಯವನ್ನಾಧರಿಸಿ ಆರೋಪಿಯನ್ನು ಬಂಧಿಸಲಾಗಿದೆ. ಸಾಗರ ಜಿಲ್ಲಾಸ್ಪತ್ರೆಯಲ್ಲಿ ಇಂತದ್ದೊಂದು ಘಟನೆ ಗುರುವಾರದಂದು ನಡೆದಿದೆ. ದಾಮೋದರ್ ಕೋರಿ ಹೆಸರಿನ ವ್ಯಕ್ತಿಗೆ ಮಿಲನ್ ರಾಜಕ್ ಹೆಸರಿನ ವ್ಯಕ್ತಿ ಈ ಹಿಂದೆ ಹೊಡೆದು ಗಾಯಗೊಳಿಸಿದ್ದ. ಆ ಹಿನ್ನೆಲೆಯಲ್ಲಿ ಆಸ್ಪತ್ರೆ ಸೇರಿದ್ದ ದಾಮೋದರ್ ಚಿಕಿತ್ಸೆ ಪಡೆಯುತ್ತಿದ್ದ. ಆದರೆ ಆಸ್ಪತ್ರೆಗೂ …

Read More »

ಮದ್ಯ ಸೇವಿಸಲು ಹಣ ಕೊಡಲಿಲ್ಲ ಎಂದು ಹೆಂಡತಿಯ ಹತ್ಯೆ

ಬೆಂಗಳೂರು : ಮದ್ಯ ಸೇವಿಸಲು ಹಣ ನೀಡಲು ನಿರಾಕರಿಸಿದ ಕಾರಣಕ್ಕೆ ಪತ್ನಿ ತಲೆ ಮೇಲೆ ಸೀಮೆಂಟ್​ ಇಟ್ಟಿಗೆ ಎತ್ತಿಹಾಕಿ ಹತ್ಯೆ ಮಾಡಿ ಪತಿ ಪರಾರಿಯಾಗಿದ್ದಾನೆ. ಹೆಣ್ಣೂರಿನಲ್ಲಿ ಶೆಡ್​ನಲ್ಲಿ ನೆಲೆಸಿದ್ದ ಕೂಲಿ ಕಾರ್ಮಿಕೆ ಮಲ್ಲಿಕಮ್ಮ ಮೃತರು. ಆರೋಪಿ ವೀರೇಶ್​ ತಲೆಮರೆಸಿಕೊಂಡಿದ್ದು, ಬಂಧನಕ್ಕೆ ಬಲೆ ಬೀಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಯಾದಗಿರಿ ಜಿಲ್ಲೆ ಸುರಪುರ ತಾಲೂಕಿನ ಲಕ್ಷ್ಮೀಪುರ ಮೂಲದ ಮಲ್ಲಿಕಮ್ಮ ಅವರ ಮೊದಲ ಪತಿ ಮೃತಪಟ್ಟಿದ್ದ. ಆನಂತರ ಕೂಲಿ ಅರಸಿ ಬೆಂಗಳೂರಿಗೆ ಬಂದಿದ್ದ ಆಕೆ, …

Read More »

ಬೆಡ್ ಬ್ಲಾಕಿಂಗ್ ದಂಧೆ: ರೂಮ್‌ ನೌಕರ ಸೇರಿ ಇಬ್ಬರ ಬಂಧನ

ಬೆಂಗಳೂರು: ಕೊರೊನಾ ಸೋಂಕಿತರ ಹೆಸರಿನಲ್ಲಿ ಹಾಸಿಗೆ ಬ್ಲಾಕ್ ಮಾಡಿಸಿ ಮಾರಾಟ ಮಾಡುತ್ತಿದ್ದ ಆರೋಪದಡಿ ವಾರ್‌ ರೂಮ್ ನೌಕರ ಸೇರಿದಂತೆ ಇಬ್ಬರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ವಾರ್‌ ರೂಮ್ ನೌಕರ ವರುಣ್ ಹಾಗೂ ಆತನ ಸ್ನೇಹಿತ ಯಶವಂತ ಬಂಧಿತರು. ಗುಣಮುಖವಾಗುತ್ತಿದ್ದ ಹಾಗೂ ಮೃತರಾಗುತ್ತಿದ್ದ ಕೊರೊನಾ ಸೋಂಕಿತರ ಹಾಸಿಗೆಗಳ ಬಗ್ಗೆ ವರುಣ್ ಮಾಹಿತಿ ಪಡೆಯುತ್ತಿದ್ದ. ಜೊತೆಗೆ, ಹಾಸಿಗೆ ಬೇಕೆಂದು ಹೇಳಿ ವಾರ್ ರೂಮ್‌ಗೆ ಕರೆ ಮಾಡುತ್ತಿದ್ದ ಸೋಂಕಿತರ ಮಾಹಿತಿಯನ್ನೂ ದಾಖಲಿಸಿಕೊಳ್ಳುತ್ತಿದ್ದ’ ಎಂದು ಸಿಸಿಬಿ ಮೂಲಗಳು …

Read More »