ಅಲೂರು:- ರಾಜ್ಯದ ಎಲ್ಲಾ ಮಸೀದಿಗಳು, ಮುಸ್ಲಿಮ್ ವಿದ್ಯಾ ಸಂಸ್ಥೆಗಳ ಬೆಳವಣಿಗೆಗಾಗಿ ಅಹೋರಾತ್ರಿ ಶ್ರಮಿಸುತ್ತಿದ್ದ ಕರ್ನಾಟಕ ರಾಜ್ಯ ವಕ್ಫ್ ಬೊರ್ಡ್ ಅಧ್ಯಕ್ಷರಾದ ಜನಾಬ್ ಡಾ.ಮುಹಮ್ಮದ್ ಯೂಸುಫ್ ಸಾಬ್ ಇಂದು ಬೆಳಗಿನ ಜಾವ 03.00ರ ಸಮಯದಲ್ಲಿ ಬೆಂಗಳೂರಿನಲ್ಲಿ ನಮ್ಮನ್ನಗಲಿದ್ದಾರೆ.ಅಲ್ಲಾಹು ಅವರಿಗೆ ಜನ್ನಾತುಲ್ ಫಿರ್ದೌಸ್ ಕರುಣಿಸಲಿ, ಸ್ವರ್ಗೋದ್ಯಾನದಲ್ಲಿ ಉನ್ನತ ಸ್ಥಾನಕರುಣಿಸಲಿ, ಅವರ ಮಗ್ಪಿರತ್ಗಾಗಿ ಎಲ್ಲಾ ಮಸೀದಿಗಳಲ್ಲಿ ಪ್ರಾರ್ಥನೆ ಮತ್ತು ಮಯ್ಯತ್ ನಮಾಝ್ ನಿರ್ವಹಿಸುವಂತೆ ಅಸ್ಸಯ್ಯದ್ ಜಾಬೀರ್ ತಂಙಳ್ ಅಲೂರು, ಟಿ.ಎಂ.ನಾಸೀರ್ ಇಂಪಾಲ್ ಚಿಕ್ಕಮಗಳೂರು, ರಾಜ್ಯ …
Read More »ರೈತರಿಗೆ ಪರಿಹಾರ ಪ್ಯಾಕೇಜ್ | ಮೊದಲ ಕಂತಿನ 666 ಕೋಟಿ ಹಣ ಕೋಟಿ ಬಿಡುಗಡೆ : ಬಿ.ಎಸ್.ವೈ
ಲಾಕ್ಡೌನ್ ಜಾರಿಯಿಂದ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದ ರೈತರಿಗೆ ರಾಜ್ಯ ಸರ್ಕಾರ ಪರಿಹಾರದ ಮೊತ್ತವಾಗಿ ಮೊದಲ ಕಂತಿನ 666 ಕೋಟಿ ಹಣವನ್ನು ಇಂದು ಬಿಡುಗಡೆ ಮಾಡಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರು ಮೆಕ್ಕೆಜೋಳ ಬೆಳೆದ ಪ್ರತಿಯೊಬ್ಬ ರೈತರ ಪ್ರತಿ ಹೆಕ್ಟೇರ್ಗೆ 5 ಸಾವಿರ ನೀಡುವುದಾಗಿ ಘೋಷಣೆ ಮಾಡಿದ್ದರು. ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಯಡಿಯೂರಪ್ಪ ಅವರು ಮೊದಲ ಕಂತಿನಲ್ಲೇ 666 ಕೋಟಿ ರೂ. ಬಿಡುಗಡೆ ಮಾಡಿ ಸಂಕಷ್ಟದಲ್ಲಿದ್ದ ಅನ್ನದಾತರ ರಕ್ಷಣೆಗೆ ಧಾವಿಸಿದ್ದಾರೆ. …
Read More »ತಲಕಾವೇರಿಯಲ್ಲಿ ಭೂಕುಸಿತ; 4 ಮಂದಿ ಕಣ್ಮರೆ
ಮಡಿಕೇರಿ ಆ.06-ಜಿಲ್ಲೆಯ ಭಾಗಮಂಡಲ ವ್ಯಾಪ್ತಿಯ ತಲಕಾವೇರಿಯಲ್ಲಿ ಬುಧವಾರ ತಡರಾತ್ರಿ ಸುರಿದ ಮಳೆಗೆ ತಲಕಾವೇರಿಯ ಬ್ರಹ್ಮಗಿರಿ ಬೆಟ್ಟದ ಒಂದು ಭಾಗ ಜರಿದು ತಲಕಾವೇರಿಯ ದೇವಸ್ಥಾನದ ಅರ್ಚಕರುಗಳ ಎರಡು ಮನೆ ಮೇಲೆ ಬಿದ್ದಿದೆ. ಜಿಲ್ಲಾ ಪ್ರಕೃತಿ ವಿಕೋಪ ನಿರ್ವಹಣಾ ತಂಡದ ತಕ್ಷಣ ಕಾರ್ಯಾಚರಣೆ ತಂಡವು ಸ್ಥಳಕ್ಕೆ ಧಾವಿಸಿ ಕಾರ್ಯಾಚರಣೆ ಕೈಗೊಂಡಿದ್ದು, ಅವರು ನೀಡಿರುವ ಪ್ರಾಥಮಿಕ ಮಾಹಿತಿ ಪ್ರಕಾರ ಎರಡು ಮನೆಗಳ ಪೈಕಿ ಒಬ್ಬರು ಅರ್ಚಕರು ಹೊಸ ಮನೆ ನಿರ್ಮಿಸಿಕೊಂಡು ಕುಟುಂಬದೊಂದಿಗೆ ಭಾಗಮಂಡಲದಲ್ಲಿ ನೆಲೆಸಿರುತ್ತಾರೆ. ತಲಕಾವೇರಿಯ …
Read More »ಮೈದುಂಬಿದ ಘಟಪ್ರಭೆ: ಮಿರ್ಜಿ-ಮಹಾಲಿಂಗಪುರ ರಸ್ತೆ ಸಂಪರ್ಕ ಕಡಿತ
ಬಾಗಲಕೋಟೆ: ಬೆಳಗಾವಿ ಜಿಲ್ಲೆಯಲ್ಲಿ ಕಳೆದೆರಡು ದಿನಗಳಿಂದ ಸುರಿಯುತ್ತಿರುವ ವ್ಯಾಪಕ ಮಳೆಯಿಂದ ಘಟಪ್ರಭಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಇದರಿಂದ ಮುಧೋಳ ತಾಲ್ಲೂಕಿನ ಮಿರ್ಜಿ- ಮಹಲಿಂಗಪುರ ನಡುವಿನ ಘಟಪ್ರಭಾ ನದಿಯ ಹಳೆ ರಸ್ತೆಯ ಸೇತುವೆ ಜಲಾವೃತವಾಗಿದೆ. ಮಿರ್ಜಿ, ಚನಾಳ, ಮಲ್ಲಾಪುರ ಒಂಟಗೋಡಿ ಗ್ರಾಮಗಳಿಂದ ಮಹಾಲಿಂಗಪುರ ಪಟ್ಟಣಕ್ಕೆ ರಸ್ತೆ ಸಂಪರ್ಕ ಕಡಿತಗೊಂಡಿದೆ. ಸೇತುವೆ ಮೇಲೆ ಐದು ಅಡಿಯಷ್ಟು ನೀರು ಹರಿಯುತ್ತಿದೆ.
Read More »ಗೋವಾ- ಕರ್ನಾಟಕ ನಡುವಿನ ಘಾಟಿಯಲ್ಲಿ ಭೂ ಕುಸಿತ: ರೈಲು ಸಂಚಾರ ವ್ಯತ್ಯಯ
ಪಣಜಿ: ಭಾರಿ ಮಳೆಯಿಂದಾಗಿ ಗೋವಾ- ಕರ್ನಾಟಕ ನಡುವಿನ ಘಾಟಿಯಲ್ಲಿ ಎರಡು ಪ್ರತ್ಯೇಕ ಭೂ ಕುಸಿತ ಸಂಭವಿಸಿದ್ದು, ರೈಲು ಮತ್ತು ರಸ್ತೆ ಸಂಚಾರದಲ್ಲಿ ವ್ಯತ್ಯಯ ಉಂಟಾಯಿತು. ಭೂಕುಸಿತದಿಂದಾಗಿ, ಬುಧವಾರ ಮುಂಜಾನೆ ಗೋವಾದ ಮಡಗಾಂವ್ ರೈಲ್ವೆ ನಿಲ್ದಾಣವನ್ನು ತಲುಪಬೇಕಿದ್ದ ಹಜ್ರತ್ ನಿಜಾಮುದ್ದೀನ್ ರೈಲು ಕ್ಯಾಸಲ್ ರಾಕ್ ರೈಲ್ವೆ ನಿಲ್ದಾಣಕ್ಕೆ ತೆರಳಿದೆ. ಅಲ್ಲಿಂದ ನಿಗದಿತ ಪ್ರದೇಶಗಳಿಗೆ ತೆರಳಲು ಪ್ರಯಾಣಿಕರಿಗೆ ವಿಶೇಷ ಬಸ್ ಸೌಕರ್ಯ ಕಲ್ಪಿಸಲಾಗಿತ್ತು. ಚೋರ್ಲಾ ಘಾಟ್ ಪ್ರದೇಶದಲ್ಲಿ ಸಂಭವಿಸಿದ ಮತ್ತೊಂದು ಭೂಕುಸಿತವು ಗೋವಾ ಮತ್ತು …
Read More »