Breaking News

ರಾಜಕೀಯ ಸುದ್ದಿ

ಕೇಂದ್ರ ಸಚಿವ ಸಂಪುಟದಿಂದ ರಾಜ್ಯದ ಹಾಲಿ ಸಚಿವರಿಗಿಲ್ಲ ಗೇಟ್‌ಪಾಸ್..!

BB News Kannada : ನವದೆಹಲಿ : ಸುಮಾರು ಎರಡು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಕೇಂದ್ರ ಸಚಿವ ಸಂಪುಟ ಪುನರ್ರಚನೆ ಈಗ ಆಗುವ ಸಾಧ್ಯತೆಗಳಿವೆ. ಏಕೆಂದರೆ ಸಂಪುಟ ಪುನರ್ರಚನೆ ವೇಳೆ ಕೆಲ ಸಚಿವರನ್ನು ಕೈ ಬಿಡಲು ನಿರ್ಧರಿಸ ಲಾಗಿದ್ದು, ಅಂತಹವರಿಗೆ ಧನ್ಯವಾದ ಹೇಳಲೆಂದೇ ಇಂದು ಕೇಂದ್ರ ಸರ್ಕಾರದ `ಕೌನ್ಸಿಲ್ಸ್ ಆಫ್ ಮಿನಿಸ್ಟರ್ಸ್ ಸಭೆ’ ಕರೆಯಲಾಗಿದೆ.ಪ್ರಧಾನಿ ಮೋದಿ ಇಂದು ಸಂಜೆ ೪ ಗಂಟೆಗೆ ಕೌನ್ಸಿಲ್ಸ್ ಆಫ್ ಮಿನಿಸ್ಟರ್ಸ್ ಸಭೆ ಕರೆದಿದ್ದು ಆ …

Read More »

ಕೇಂದ್ರ ಸರ್ಕಾರದ ನಡೆ ಬರೆ ಜನರ ಕಣ್ಣೊರೆಸುವ ತಂತ್ರ- ರಾಹುಲ್ ಗಾಂಧಿ

ನವದೆಹಲಿ: ಕೋವಿಡ್ ಪೀಡಿತ ಜನರಿಗೆ ನೆರವು ನೀಡಲು ಮತ್ತು ಆರೋಗ್ಯ ಮೂಲಸೌಕರ್ಯಗಳನ್ನು ಹೆಚ್ಚಿಸಲು ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಘೋಷಿಸಿರುವ ಹಣಕಾಸು ಪ್ಯಾಕೇಜ್ ‘ಕಣ್ಣೊರೆಸುವ ತಂತ್ರ’ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಮಂಗಳವಾರ ಟೀಕಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ವಯನಾಡ್ ಸಂಸದ ಯಾವುದೇ ಕುಟುಂಬವು ಹಣಕಾಸು ಸಚಿವರ ಆರ್ಥಿಕ ಪ್ಯಾಕೇಜ್ ಅನ್ನು ಅವರ ಜೀವನ, ಆಹಾರ, ಔಷಧಿ ಮತ್ತು ಮಕ್ಕಳ ಶಿಕ್ಷಣಕ್ಕಾಗಿ ಖರ್ಚು ಮಾಡಲು ಸಾಧ್ಯವಿಲ್ಲ. …

Read More »

ಅಕ್ಕಿ ಕೊಡಿ ಎಂದ ರೈತನಿಗೆ ‘ಸತ್ತೊಗು’ ಎಂದ ಆಹಾರ ಸಚಿವ ಉಮೇಶ್ ಕತ್ತಿ

ಪಡಿತರ ವ್ಯವಸ್ಥೆಯಲ್ಲಿ ನೀಡುತ್ತಿದ್ದ ಅಕ್ಕಿ ಕಡಿತಗೊಳಿಸಿರುವುದನ್ನು ಪ್ರಶ್ನಿಸಿದ್ದ ರೈತ ಸಂಘದ ಕಾರ್ಯಕರ್ತರೊಬ್ಬರಿಗೆ, ಆಹಾರ ಸಚಿವ ಉಮೇಶ್ ಕತ್ತಿ ಅವರು ‘ಸತ್ತು ಹೋಗು’ ಎಂದು ಹೇಳಿ ಉಡಾಫೆಯಿಂದ ವರ್ತಿಸಿರುವುದು ಸಾಮಾಜಿಕ ಜಾಲತಾಣದಲ್ಲಿ ವೈರಲಾಗಿದೆ. ರಾಜ್ಯ ರೈತ ಸಂಘದ ಅಬ್ಬಣಿ ಶಿವಪ್ಪ ರಾಜ್ಯದಲ್ಲಿ ಕೊರೊನಾ ತೀವ್ರ ರೀತಿಯಲ್ಲಿ ಹರಡುತ್ತಿದ್ದು, ರಾಜ್ಯ ಸರ್ಕಾರ ಈಗಾಗಲೆ ಲಾಕ್‌ಡೌನ್‌ ಹೇರಿದೆ. ಕಳೆದ ವರ್ಷ ಮಾಡಿದ ಲಾಕ್‌ಡೌನ್‌ನಿಂದಲೇ ಇನ್ನೂ ಚೇತರಿಸಿಕೊಳ್ಳದ ಜನರಿಗೆ ಮತ್ತೊಂದು ಲಾಕ್‌ಡೌನ್‌ ಹೇರಿರುವುದು ಆಹಾರದ ಪ್ರಶ್ನೆಯನ್ನೂ …

Read More »

ಏಪ್ರಿಲ್ 30ರೊಳಗೆ ಉಚಿತ ಮರಳು ನೀತಿ ಜಾರಿ-ಸಚಿವ ಮುರುಗೇಶ್ ನಿರಾಣಿ

ಜನಸಾಮಾನ್ಯರು ಕಡಿಮೆ ದರದಲ್ಲಿ ಮನೆಗಳನ್ನು  ಕಟ್ಟಿಸಿಕೊಳ್ಳಲು ಅನುಕೂಲವಾಗುವಂತೆ ಏಪ್ರಿಲ್ 30 ರಿಂದ ರಾಜ್ಯಾದ್ಯಂತ ಉಚಿತ ಮರಳು ನೀತಿ ಜಾರಿಗೆ ಬರಲಿದೆ ಎಂದು ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರುಗೇಶ್ ಆರ್.ನಿರಾಣಿ ಕಲಬುರಗಿಯಲ್ಲಿ ಪ್ರಕಟಿಸಿದ್ದಾರೆ. ಜನಸಾಮಾನ್ಯರಿಗೆ ಕೈಗೆಟುಕುವ ದರದಲ್ಲಿ ಮರಳು ವಿತರಣೆ ಮಾಡಬೇಕೆಂಬುದು ಸರ್ಕಾರದ ಪ್ರಮುಖ ಉದ್ದೇಶ ಹೀಗಾಗಿ ಇದೇ 30ರಿಂದ ಅನ್ವಯವಾಗುವಂತೆ ಉಚಿತ ಮರಳು ನೀತಿ ಜಾರಿಗೆ ತರುತ್ತಿದ್ದೇವೆ. ಜೊತೆಗೆ ಮರಳು ಅಕ್ರಮ ತಡೆಗಟ್ಟುವ ಉದ್ದೇಶದಿಂದ ಉಚಿತ ಮರಳು …

Read More »

ಅಪ್ಪ-ಮಗನ ನಿಜ ಬಣ್ಣ ಬಯಲಾಗಲಿದೆ: ಸಿಎಂ ಮತ್ತು ವಿಜಯೇಂದ್ರ ಬಗ್ಗೆ ಬಿಜೆಪಿ ಶಾಸಕ ಯತ್ನಾಳ್

ಮುಖ್ಯಮಂತ್ರಿಯ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ, “ಯತ್ನಾಳ್ ಅವರಷ್ಟು  ಹಗಲು ಕನಸು ಕಾಣುವ ವ್ಯಕ್ತಿ ಈ ಭೂಮಿ ಮೇಲೆ ಇಲ್ಲ” ಎಂದು ತಿರುಗೇಟು ನೀಡಿದ್ದಾರೆ. ಅಪ್ಪ- ಮಗನ ನಿಜ ಬಣ್ಣ ಬಯಲಾಗಲಿದೆ, ಮೇ 2 ರ ನಂತರ ಮುಖ್ಯಮಂತ್ರಿ ಯಡಿಯೂರಪ್ಪರ ಬದಲಾವಣೆ ಆಗುವುದು ಗ್ಯಾರಂಟಿ. ಮೇ 2ರ ನಂತರ ಯಾವ ಸಮಯದಲ್ಲಾದರೂ ಬದಲಾವಣೆ ಆಗುತ್ತಾರೆ ಎಂದು ಬಿಜಿಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬುಧವಾರ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಹೇಳಿದ್ದಾರೆ. …

Read More »

ಬಡ್ಡಿದರ ಕಡಿತಗೊಳಿಸಿ ‘ನಿನ್ನೆ’ ಆದೇಶ: ‘ಇಂದು’ ಯೂಟರ್ನ್ ಹೊಡೆದ ಕೇಂದ್ರ ಸರ್ಕಾರ‌!

ಸಣ್ಣ ಉಳಿತಾಯಗಳ ಮೇಲಿನ ಬಡ್ಡಿದರದಲ್ಲಿ ಬುಧವಾರ ಭಾರೀ ಕಡಿತವನ್ನು ಕೇಂದ್ರ ಸರ್ಕಾರ ಪ್ರಕಟಿಸಿತ್ತು. ಇದರ ಬೆನ್ನಲ್ಲೇ ಆ ಆದೇಶವನ್ನು ಇಂದು ಬೆಳಿಗ್ಗೆಯೇ ಹಿಂಪಡೆದುಕೊಂಡಿದೆ. ರಾಷ್ಟ್ರೀಯ ಉಳಿತಾಯ ಪ್ರಮಾಣಪತ್ರಗಳು ಅಥವಾ ಎನ್‌ಎಸ್‌ಸಿ ಮತ್ತು ಸಾರ್ವಜನಿಕ ಭವಿಷ್ಯ ನಿಧಿ ಅಥವಾ ಪಿಪಿಎಫ್ ಸೇರಿದಂತೆ ಸಣ್ಣ ಉಳಿತಾಯ ಯೋಜನೆಗಳ ಮೇಲಿನ ಬಡ್ಡಿದರಗಳ ಕಡಿತವನ್ನು ಸರ್ಕಾರ ನಿನ್ನೆ ಘೋಷಿಸಿತ್ತು. ಇಂದು ಬೆಳಿಗ್ಗೆ ಟ್ವೀಟ್ ಮಾಡಿರುವ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್, “ಭಾರತ ಸರ್ಕಾರದ ಸಣ್ಣ ಉಳಿತಾಯ …

Read More »

ಸಿಡಿ ಪ್ರಕರಣದ ಕುರಿತು ನನ್ನನ್ನು ಏನೂ ಕೇಳಬೇಡಿ: ಮಾಜಿ ಸ್ಪೀಕರ್ ರಮೇಶ್ ಕುಮಾರ್

ಕೋಲಾರ: ಸಿಡಿ ಪ್ರಕರಣಕ್ಕೂ ನನಗೂ ಸಂಬಂಧವಿಲ್ಲ, ನನ್ನನ್ನು ಏನೂ ಕೇಳಬೇಡಿ. ಈ ವಿಚಾರದಲ್ಲಿ ಹೆಚ್ಚು ಆಸಕ್ತಿ ಇಲ್ಲ ಅದು ಕಾನೂನು ರೀತಿ ನಡೆಯುತ್ತದೆ ಎಂದು ಮಾಜಿ ಸ್ಪೀಕರ್ ರಮೇಶ್ ಕುಮಾರ್ ತಿಳಿಸಿದರು. ಕೋಲಾರದ ನಿರ್ಮಿತಿ ಕೇಂದ್ರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹೆಚ್ಚು ಆಸಕ್ತಿಯಿಂದ ವ್ಯಾಖ್ಯಾನ ಮಾಡೋದು ನನ್ನ ಯೋಗ್ಯತೆ, ಗೌರವಕ್ಕೆ ಒಳ್ಳೆಯದಲ್ಲ. ಕಾಂಗ್ರೆಸ್ ಆದರೂ ಆಗ್ರಹ ಮಾಡಬಹುದು, ಯಾರಾದರು ಮಾಡಬಹುದು. ಅಧಿವೇಶನದ ಸಮಯದಲ್ಲಿ ನ್ಯಾಯವಾಗಿ ಮಾತನಾಡಿದ್ದೇನೆ ಎಂದರು. ಸಿಡಿ ಸಂತ್ರಸ್ತೆ …

Read More »

ರಾಜಾಹುಲಿ ವಿರುದ್ಧ ತೊಡೆ ತಟ್ಟಿದ ಈಶ್ವರಪ್ಪ.!

ಬೆಂಗಳೂರು : ಸಿಎಂ ಯಡಿಯೂರಪ್ಪ ಅವರ ವಿರುದ್ಧವೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆಎಸ್ ಈಶ್ವರಪ್ಪ ಸಿಡಿದೆದ್ದಿದ್ದಾರೆ. ತಮ್ಮ ಇಲಾಖೆಯ ಕುರಿತಂತೆ ಸಿಎಂ ಹಸ್ತ ಕ್ಷೇಪದ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಗೆ ಪತ್ರ ಬರೆದು ಮನವಿ ಮಾಡಿದ್ದಾರೆ. ಈ ಕುರಿತು ಸಿಎಂ ಯಡಿಯೂರಪ್ಪ ವಿರುದ್ಧವೆ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರಿಗೆ ಪತ್ರದ ಮೂಲಕ ದೂರು ನೀಡಿರುವ ಅವರು, ತಮ್ಮ …

Read More »

ರಮೇಶ್ ಜಾರಕಿಹೊಳಿ ಬಂಧನದ ವಿಚಾರ ಎಸ್‌ಐಟಿಗೆ ಬಿಟ್ಟಿದ್ದು.- ಬೊಮ್ಮಾಯಿ

ಬೆಂಗಳೂರು: ಸಿಡಿ ಪ್ರಕರಣದಲ್ಲಿ ಎಸ್‌ಐಟಿ ಪೊಲೀಸರಿಗೆ ಸಂಪೂರ್ಣ ಸ್ವಾತಂತ್ರ್ಯ ಕೊಡಲಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಸ್‌ಐಟಿ ಅಧಿಕಾರಿಗಳು ಕಾನೂನಿನಡಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಪ್ರತಿಭಟನೆ, ಟ್ವಿಟ್, ಟೀಕೆಗಳು ಯಾವುದೂ ಎಸ್ ಐಟಿ ತನಿಖೆ ಮೇಲೆ ಪ್ರಭಾವ ಬೀರುವುದಿಲ್ಲ. ರಮೇಶ್ ಜಾರಕಿಹೊಳಿಯನ್ನು ವಶಕ್ಕೆ ಪಡೆಯಬೇಕೋ ಬೇಡವೋ ಎಂಬುದನ್ನು ಎಸ್ ಐಟಿ ನಿರ್ಧರಿಸುತ್ತದೆ. ಕಾನೂನು ಮತ್ತು ಗೃಹ ಸಚಿವನಾದರೂ ಎಸ್ ಐಟಿ ತನಿಖೆ ವಿಷಯದಲ್ಲಿ …

Read More »

’ಸಿಖ್ಖರನ್ನು ದಾರಿ ತಪ್ಪಿಸಲಾಗುತ್ತಿದೆ’- ರಾಜ್ಯಸಭೆಯಲ್ಲಿ ಕೃಷಿ ಕಾನೂನನ್ನು ಮತ್ತೆ ಸಮರ್ಥಿಸಿದ ಮೋದಿ

ಪ್ರಧಾನಿ ಮೋದಿ ತಮ್ಮ ಸರ್ಕಾರ ಜಾರಿಗೆ ತಂದಿರುವ ಹೊಸ ಕೃಷಿ ಕಾನೂನನ್ನು ಸೋಮವಾರ (ಇಂದು) ರಾಜ್ಯಸಭೆಯಲ್ಲಿ ಮತ್ತೆ ಸಮರ್ಥಿಸಿಕೊಂಡಿದ್ದಾರೆ. ರಾಜ್ಯ ಸಭೆಯಲ್ಲಿ ಮಾತನಾಡಿದ ಪ್ರಧಾನಿ ಕನಿಷ್ಠ ಬೆಂಬಲ ಬೆಲೆ(ಎಂಎಸ್‌ಪಿ) ಇತ್ತು, ಎಂಎಸ್‌ಪಿ ಇದೆ ಮತ್ತು ಎಂಎಸ್‌ಪಿ ಇದ್ದೇ ಇರುತ್ತದೆ ಎಂದು ಹೇಳಿದ್ದಾರೆ. ರೈತರ ಹೋರಾಟಕ್ಕೆ ಜಾಗತಿಕ ಬೆಂಬಲ ವ್ಯಕ್ತವಾಗುತ್ತಿರುವುದನ್ನು ಉಲ್ಲೇಖಿಸಿರುವ ಮೋದಿ, ಅದನ್ನು ’ವಿದೇಶಿ ವಿನಾಶಕಾರಿ ಸಿದ್ದಾಂತ’ ಎಂದು ಹೇಳಿದ್ದು, “ಈ ವಿದೇಶಿ ವಿನಾಶಕಾರಿ ಸಿದ್ಧಾಂತದಿಂದ ದೇಶವನ್ನು ಉಳಿಸಬೇಕಾಗಿದೆ” ಎಂದಿದ್ದಾರೆ. …

Read More »