Breaking News

ಸೂಪರ್ ಸುದ್ದಿಗಳು

ಆಧಾರ್ – ಪಿಎಎನ್ ಜೋಡಣೆಗೆ ಇದ್ದ ಗಡುವು ಜೂ.30 ಕ್ಕೆ ವಿಸ್ತರಣೆ

ನವದೆಹಲಿ: ಆದಾರ ಕಾರ್ಡ ಜೊತೆಗೆ ಪಿಎಎನ್ ಜೋಡಣೆಗೆ ನೀಡಲಾಗಿದ್ದ ಗಡುವನ್ನು ಕೇಂದ್ರ ಸರ್ಕಾರ ಜೂ.30 ವರೆಗೆ ವಿಸ್ತರಣೆ ಮಾಡಿದೆ. ಕೋವಿಡ್-19 ಸಾಂಕ್ರಾಮಿಕದ ಕಾರಣದಿಂದಾಗಿ ಆಧಾರ್ ಕಾರ್ಡ್ ಪಿಎಎನ್ ಜೋಡಣೆಗೆ ನೀಡಲಾಗಿದ್ದ ಗಡುವು ವಿಸ್ತರಣೆಗೆ ತೆರಿಗೆದಾರರಿಂದ ಮನವಿ ಬಂದಿದ್ದರಿಂದ ಗಡುವು ವಿಸ್ತರಣೆ ಮಾಡಲಾಗಿದೆ ಎಂದು ಐಟಿ ಇಲಾಖೆ ತಿಳಿಸಿದೆ. ತೆರಿಗೆದಾರರ ಸಂಕಷ್ಟವನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಸರ್ಕಾರ ಈ ಅಧಿಸೂಚನೆ ಹೊರಡಿಸಿದೆ ಎಂದು ನೇರ ತೆರಿಗೆಗಳ ಕೇಂದ್ರ ಮಂಡಳಿ (ಸಿಬಿಡಿಟಿ) ತನ್ನ ಹೇಳಿಕೆಯಲ್ಲಿ …

Read More »

ಅಮೆರಿಕಾದ ಜಿಲ್ಲಾ ನ್ಯಾಯಾಲಯದ ಜಡ್ಜ್ ಆಗಲಿರುವ ಭಾರತೀಯ ಮೂಲದ ರೂಪಾ ರಂಗ

ಭಾರತ ಮೂಲದ ಇಂಡಿಯನ್-ಅಮೆರಿಕನ್ ರೂಪಾ ರಂಗ ಪುಟ್ಟಗುಂಟಾ ಅವರನ್ನು ಫೆಡರಲ್ ನ್ಯಾಯಾಧೀಶರನ್ನಾಗಿ ನೇಮಿಸುವ ಉದ್ದೇಶವನ್ನು ಅಮೆರಿಕ ಅಧ್ಯಕ್ಷ ಜೋ ಬಿಡನ್ ವ್ಯಕ್ತಪಡಿಸಿ, ನಾಮನಿರ್ದೇಶನ ಮಾಡಿದ್ದಾರೆ. ನ್ಯಾಯಾಂಗದ 10 ಉನ್ನತ ಸ್ಥಾನಗಳಿಗೆ ಅಧ್ಯಕ್ಷರು ನಾಮನಿರ್ದೇಶನ ಮಾಡಿದ್ದು, ಅದರಲ್ಲಿ ಭಾರತೀಯ-ಅಮೆರಿಕನ್, ಆಫ್ರಿಕನ್-ಅಮೆರಿಕನ್ ಮತ್ತು ಮುಸ್ಲಿಂ ಅಮೆರಿಕನ್ ಅಭ್ಯರ್ಥಿಗಳು ಇದ್ದಾರೆ. 10 ಫೆಡರಲ್ ಸರ್ಕ್ಯೂಟ್ ಮತ್ತು ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರ ಹುದ್ದೆಗಳಿಗೆ ಮತ್ತು ಒಂದು ಕೊಲಂಬಿಯಾ ಜಿಲ್ಲೆಯ ಸುಪೀರಿಯರ್ ಕೋರ್ಟ್ ನ್ಯಾಯಾಧೀಶ ಹುದ್ದೆಗಳಿಗೆ ಅಭ್ಯರ್ಥಿಗಳನ್ನು …

Read More »

ಬೆಳಗಾವಿಯಲ್ಲಿ ರಾಜ್ಯ ರೈತ ಸಂಘದಿಂದ ಬೃಹತ್ ಪ್ರತಿಭಟನೆ

ಬೆಳಗಾವಿ : ಕರ್ನಾಟಕ ರಾಜ್ಯ ರೈತ ಸಂಘದಿಂದ ಇಂದು ಬೆಳಗಾವಿ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಯುತ್ತಿದೆ, ಕೇಂದ್ರ ಸರಕಾರದ ಭೂ ಸುಧಾರಣೆ ಕಾಯ್ದೆ ತಿದ್ದುಪಡಿ ಹಾಗೂ ಕಾರ್ಮಿಕರ ಕಾಯ್ದೆ ತಿದ್ದುಪಡಿ ಮತ್ತು ರೈತ ವಿರೋದಿ ಕಾಯ್ದೆಯನ್ನು ಕೈ ಬಿಟ್ಟು ಸರಕಾರ ರೈತಪರವಾದ ಮಸೂದೆ ಜಾರಿ ತರಲು ರಾಜ್ಯಸಂಘದ ರಾಜ್ಯ ಅಧ್ಯಕ್ಷ ಬಸವರಾಜ್ ಕರಿಗಾರ ಬೃಹತ್ ರೈತ ಸಮಾವೇಶದ ಮೂಲಕ ಕೇಂದ್ರ ಸರಕಾರಕ್ಕೆ ಎಚ್ಚರಿಕೆ ನೀಡಿದರು. ಬೆಳಗಾವಿ ಬೃಹತ್ ಪ್ರತಿಭಟೆಯಲ್ಲಿ ರಾಜ್ಯ …

Read More »

ಬೆಂಗಳೂರಿನ IFSMN ಸಂಸ್ಥೆಯ ರಾಜ್ಯ ಉಪಾಧ್ಯಕ್ಷರಾಗಿ ಶ್ರೀ ಡಿ ಬಿ ವಿಜಯಶಂಕರ್ ಆಯ್ಕೆ

ಬೆಂಗಳೂರು: ಇದೆ ತಿಂಗಳ ಮಾರ್ಚ್ ೨೮ ರಂದು ಬೆಂಗಳೂರಿನ ಗಾಂಧಿ ಭವಣದಲ್ಲಿ ಭಾರತೀಯ ಸಣ್ಣ ಮತ್ತು ಮಧ್ಯಮ ಪತ್ರಿಕೆಗಳ ಒಕ್ಕೂಟ ಬೆಂಗಳೂರು ( IFSMN) ಇದರ ರಾಜ್ಯ ಉಪಾಧ್ಯಕ್ಷರಾಗಿ ಶ್ರೀ ಡಿ,ಬಿ,ವಿಜಯಶಂಕರ್ ಅವರು ಅಧಿಕೃತ ಅಧಿಕಾರವನ್ನು ರಾಷ್ಟ್ರೀಯ ಅಧ್ಯಕ್ಷ ಶ್ರೀ ಬಿ,ಜೆ,ವಿಜಯ್ ಹಾಗೂ ರಾಜ್ಯ ಅಧ್ಯಕ್ಷ ಶ್ರೀ ಜಿ,ರಮೇಶ್ ಹಾಗೂ ರಾಜ್ಯ ಪ್ರಧಾನ ಕಾರ್ಯದರ್ಶಿ ಡಿಸೋಜಾ ಅವರ ನೆತ್ರುತ್ವದಲ್ಲಿ ಅಧಿಕಾರ ಸ್ವೀಕರಿಸಿದರು. ರಾಜ್ಯದಲ್ಲಿ ಹೆಚ್ಚುತ್ಯಿರುವ ಪತ್ರಕರ್ತರ ಸಂಖ್ಯೆ ಹಾಗೂ ಅನೇಕ …

Read More »

ಕೋರ್ಟ್‌ಗೆ ಬರುವ ವೇಳೆ ಸಿ.ಡಿ ಯುವತಿ ಜೊತೆ ಕೆಪಿಸಿಸಿ ಕಾರ್ಯದರ್ಶಿ ಪ್ರತ್ಯಕ್ಷ, ನಲಪಾಡ್ ಕಾರು ಬೆಂಗಾವಲು?

ಬೆಂಗಳೂರು: ನ್ಯಾಯಾಲಯದಲ್ಲಿ ಯುವತಿಯನ್ನು ಹಾಜರುಪಡಿಸಿದ ವೇಳೆ ಕೆಪಿಸಿಸಿ ಕಾನೂನು ಘಟಕದ ಪ್ರಧಾನ ಕಾರ್ಯದರ್ಶಿ ಸೂರ್ಯ ಮುಕುಂದರಾಜ್ ಇರುವುದು ಬೆಳಕಿಗೆ ಬಂದಿದೆ. ಯುವತಿ ಕಾರು ಹತ್ತುವ ಸಂದರ್ಭದಲ್ಲಿ ಮುಕುಂದರಾಜ್ ಯುವತಿ ಕಾರು ಹತ್ತುವಾಗ ಕಾರಿನ ಬಾಗಿಲ ಬಳಿಗೆ ಬರುವುದು ವಿಡಿಯೊವೊಂದರಲ್ಲಿ ಸೆರೆಯಾಗಿದೆ. ಇದನ್ನು ಬಿಜೆಪಿ ಕರ್ನಾಟಕ ಪ್ರಶ್ನಿಸಿ ದ್ವೀಟ್ ಮಾಡಿದೆ. ಬಿಜೆಪಿ ಕರ್ನಾಟಕ ಟೈಟ್: ‘ಸಿ.ಡಿ ಪ್ರಕರಣ ಕರ್ನಾಟಕ ಕಾಂಗ್ರೆಸ್ ಪ್ರಾಯೋಜಿತ ಎಂದು ಸಾಬೀತಾಗುತ್ತಿದೆ. ಕೆಪಿಸಿಸಿ ಕಾನೂನು ಘಟಕದ ಪ್ರಧಾನ ಕಾರ್ಯದರ್ಶಿ …

Read More »

ಸರ್ಕಾರಿ ಬಸ್ ನೌಕರರ ಮುಷ್ಕರ: ಖಾಸಗಿ ಬಸ್‌ಗಳ ಜತೆ ಕೈಜೋಡಿಸಲು ರಾಜ್ಯ ಸರ್ಕಾರ ಸಿದ್ದ

ಬೆಂಗಳೂರು: ವಿವಿಧ ಬೇಡಿಕೆಗಳನ್ನು ಇರಿಸಿಕೊಂಡು ಸಾರಿಗೆ ನೌಕರರು ಮುಷ್ಕರಕ್ಕೆ ಮುಂದಾಗಿರುವ ಹಿನ್ನೆಲೆಯಲ್ಲಿ ಖಾಸಗಿ ಬಸ್ ಆಪರೇಟರ್‌ಗಳನ್ನು ಮುಂದಿರಿಕೊಂಡು ಟಕ್ಕರ್‌ ನೀಡಲು ಸರ್ಕಾರ ಮುಂದಾಗಿದೆ. ಏಪ್ರಿಲ್ 7 ರಂದು ಸರ್ಕಾರಿ ಬಸ್ ನೌಕರರು ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಸರ್ಕಾರಿ ಖಾಸಗಿ ಬಸ್‌ಗಳ ಜತೆ ಕೈಜೋಡಿಸಲು ಸಿದ್ಧವಾಗಿದೆ. ರಾಜ್ಯದಲ್ಲಿ 10 ಸಾವಿರ ಖಾಸಗಿ ಬಸ್ ಹಾಗೂ 1 ಲಕ್ಷ ಟ್ಯಾಕ್ಸಿಗಳಿದ್ದು, ಒಂದೊಮ್ಮೆ ಬಸ್‌ಗಳನ್ನು ನಿಲ್ಲಿಸಿದ್ದೇ ಆದಲ್ಲಿ ಈ ಖಾಸಗಿ ಬಸ್‌ಗಳು ಸಂಚರಿಸಲಿವೆ …

Read More »

ಹೊರರಾಜ್ಯ ಪ್ರಯಾಣಿಕರಿಗೆ ಆರ್‌ಟಿ-ಪಿಸಿಆರ್ ಪರೀಕ್ಷೆ ಕಡ್ಡಾಯ: ಸಚಿವ ಸುಧಾಕರ್

ಭಾರತದ ಯಾವುದೇ ರಾಜ್ಯದಿಂದ ಬೆಂಗಳೂರಿಗೆ ಬರುವ ಪ್ರಯಾಣಿಕರು ಆರ್‌ಟಿ-ಪಿಸಿಆರ್ ಪರೀಕ್ಷೆಯನ್ನು ಮಾಡಿಸಿರಬೇಕು ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ. ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿಗೆ ಬರುವ ಅಂತರ್‌ರಾಜ್ಯ ಪ್ರಯಾಣಿಕರು ಕೊರೊನಾ ನಕಾರಾತ್ಮಕತೆಯ ಪ್ರಮಾಣ ಪತ್ರ ಹೊಂದಿರಬೇಕು ಎಂದು ಹೇಳಿದ್ದಾರೆ. ಈ ಹಿಂದೆ ಕೇರಳ, ಮಹಾರಾಷ್ಟ್ರ, ಪಂಜಾಬ್ ಮತ್ತು ಚಂಡೀಗಢ್‌ನಿಂದ ಬರುವ ಪ್ರಯಾಣಿಕರಿಗೆ ಆರ್‌ಟಿ-ಪಿಸಿಆರ್ ಪರೀಕ್ಷೆಯನ್ನು ರಾಜ್ಯ ಸರ್ಕಾರ ಕಡ್ಡಾಯಗೊಳಿಸಿತ್ತು. ಬೆಂಗಳೂರಿನಲ್ಲಿ ದಾಖಲಾಗಿರುವ 60% ಪ್ರಕರಣಗಳು ಅಂತರರಾಜ್ಯ ಪ್ರಯಾಣದ ಇತಿಹಾಸವನ್ನು …

Read More »

ಇಂದು ವಿಶ್ವ ಜಲ ದಿನ : ರಕ್ಷಿಸಿ ಜಲ-ಸಂರಕ್ಷಿಸಿ ಜೀವ ಸಂಕುಲ

ಮಾನವ ಹಾಗೂ ಪ್ರಾಣಿ-ಪಕ್ಷಿ ಸಂಕುಲ ಆಹಾರವಿಲ್ಲದೆ ಹಲವಾರು ದಿನ ಗಳು ಬದುಕಬಹುದು. ಆದರೆ, ಕುಡಿಯುವ ನೀರಿಲ್ಲದೆ ಒಂದು ದಿನ ಬದುಕುವುದೂ ಅತೀ ಕಷ್ಟದ ಮಾತು. ತಿನ್ನಲು ಆಹಾರವಿಲ್ಲದಿದ್ದರೂ ಸಹ ಕುಡಿಯುವ ನೀರು ನಮ್ಮ ಜೀವವನ್ನು ಹಲವು ದಿನಗಳ ಕಾಲ ಉಳಿಸುವ ಸಂಜೀವಿನಿಯೇ ಸರಿ. ಈ ಸತ್ಯ ಸಂಗತಿಯಿಂದಾಗಿಯೇ, ಪ್ರತೀ ಜೀವ ಸಂಕುಲಕ್ಕೆ ನೀರು ಎಂಬುದು ಪ್ರಕೃತಿ ನೀಡಿರುವ ಜೀವಹನಿ, ಅಮೃತ. ನಿಸರ್ಗದತ್ತವಾಗಿ ದೊರಕುವ ಜಲದ ಪ್ರಾಮುಖ್ಯತೆ, ಮಹತ್ವ, ಅಗತ್ಯತೆ ಹಾಗೂ …

Read More »

ರೈತರ ಯುವ ನಾಯಕ ಆನಂದ ಜಕಾತಿ ಅವರ ಹೋರಾಟ ಇದು ಅಂತ್ಯ ಅಲ್ಲ ಆರಂಭ ಎಚ್ಚರಿಕೆ

ಉತ್ತರ ಕರ್ನಾಟಕ ರಾಜ್ಯ ಹಾಗೂ ಕಬ್ಬು ಬೆಳೆಗಾರರ ಜಿಲ್ಲಾ ಅಧ್ಯಕ್ಷ ಆನಂದ ಜಕಾತಿ ಅವರ ರೈತರ ಪರವಾದ ದೊಡ್ಡ ಹೋರಾಟಕ್ಕೆ ಸುಳಿವು ಕೊಟ್ಟರುಉತ್ತರ ಕರ್ನಾಟಕದಲ್ಲಿ ಅಸಂಖ್ಯಾತ ರೈತರ ಸ್ಥಿತಿ ಚಿಂತಾ ಜನಕವಾಗಿದೆ, ಅದರಲ್ಲೂ ಉತ್ತರ ಕರ್ನಾಟಕ ಬಾಗಲಕೋಟೆ ಜಿಲ್ಲೆಯ ರೈತರ ಸ್ಥಿತಿ ಇದುವರೆಗೂ ಸರಕಾರ ಸೂಕ್ತ ರಕ್ಷಣೆ ಹಾಗೂ ಅವರಿಗೆ ಸೂರು ಕಲ್ಪಿಸುವಲ್ಲಿ ಸಂಪೂರ್ಣವಾಗಿ ನಿರ್ಲಕ್ಷ್ಯ ಮಾಡಿದೆ ,ಇದನ್ನು ನಾನೊಬ್ಬ ಜಿಲ್ಲಾ ಈ ರೈತ ಸಂಘದ ಅಧ್ಯಕ್ಷನಾಗಿ ಖಂಡಿಸುತ್ತೇನೆ, ಇದರ …

Read More »

ನಾಲ್ವರು ಯುವಕರ ಜೊತೆ ಓಡಿ ಹೋಗಿದ್ದ ಯುವತಿ ಲಕ್ಕಿ ಡ್ರಾ ಮೂಲಕ ಒಬ್ಬನ ಪಾಲು..!

ಒಬ್ಬಳೇ ಯುವತಿ ನಾಲ್ವರು ಯುವಕರ ಜೊತೆ ಓಡಿಹೋಗಿದ್ದು, ಸಿಕ್ಕಿ ಬಿದ್ದ ವೇಳೆ ಯಾರಿಗೆ ಹುಡುಗಿಯನ್ನು ಕೊಟ್ಟು ಮದುವೆ ಮಾಡೋದು ಎಂಬುದೇ ದೊಡ್ಡ ತಲೆನೋವಾಗಿ ಪರಿಗಣಿಸಿದೆ. ಆಗ ಗ್ರಾಮದ ಸದಸ್ಯರೆಲ್ಲಾ ಪಂಚಾಯ್ತಿಗೆ ಕುಳಿತು ತೀರ್ಮಾನಿಸಿದಾಗ ಹೊಳೆದದ್ದೇ ಲಕ್ಕಿ ಡ್ರಾ.. ಇಂತಹ ಲಕ್ಕಿ ಡ್ರಾ ಮೂಲಕ ಒಬ್ಬಳೇ ಯುವತಿಯನ್ನು ನಾಲ್ವರು ಯುವಕರಲ್ಲಿ ಒಬ್ಬರಿಗೆ ಆಯ್ಕೆ ಮಾಡಿ ಮದುವೆ ಮಾಡಿರುವಂತ ವಿಚಿತ್ರ ಘಟನೆಯೊಂದು ಉತ್ತರ ಪ್ರದೇಶದಲ್ಲಿ ನಡೆದಿದೆ. ಹೌದು.. ನಾಲ್ಕು ಮಂದಿ ಯುವಕರಿಗೆ ಒಬ್ಬಳು …

Read More »