Breaking News

ಸೂಪರ್ ಸುದ್ದಿಗಳು

ಸೌದಿ ಅರೇಬಿಯಾ: ರಂಮಜಾನ್ 2021 ರ ಮೊದಲ ಉಪವಾಸ ಏಪ್ರಿಲ್ 13 ಮಂಗಳವಾರ

ಸೌದಿ ಅರೇಬಿಯಾ: ರಂಜಾನ್ ಮೊದಲ ದಿನ ಏಪ್ರಿಲ್ 13, ಮಂಗಳವಾರ, ಸೌದಿ ಅರೇಬಿಯಾ ಚಂದ್ರನನ್ನು ನೋಡಲಾಗಿಲ್ಲ ಎಂದು ಚಂದ್ರನ ವೀಕ್ಷಣಾ ಸಮಿತಿ ಹೇಳಿದೆ. ಅದರಂತೆ, ಏಪ್ರಿಲ್ 12, ಸೋಮವಾರ, ಶಹಬಾನ್ 1442 ಹಿಜರಿಯ ಕೊನೆಯ ಮತ್ತು 30 ನೇ ದಿನವಾಗಿರುತ್ತದೆ, ಅಂದರೆ ಪೂರ್ವನಿಯೋಜಿತವಾಗಿ, ರಂಜಾನ್ ಮೊದಲ ದಿನ ಮಂಗಳವಾರ ಇರುತ್ತದೆ. ಇಸ್ಲಾಮಿಕ್ ಕ್ಯಾಲೆಂಡರ್ ಪ್ರಕಾರ ರಂಜಾನ್ ತಿಂಗಳ ಮೊದಲು ಶಹಬಾನ್ 29 ನೇ ದಿನವನ್ನು ಭಾನುವಾರ ಸೂಚಿಸುತ್ತದೆ. ರಂಜಾನ್ ಒಂದು …

Read More »

SDPI ವತಿಯಿಂದ ಬಾಬಾ ಜಗಜೀವನ್ ರಾಮ್ ಸಾಧನೆ ಸ್ಮರಣೆ ಕಾರ್ಯಕ್ರಮ

ಬೆಂಗಳೂರು: ಕಾರ್ಮಿಕ, ರೈಲ್ವೆ ಹಾಗೂ ಕೃಷಿ ಸಚಿವರಾಗಿ ಸೇವೆ ಸಲ್ಲಿಸಿ, ದೇಶಕ್ಕೆ ಬರಗಾಲ ಎದುರಾಗಿದ್ದ ಸಂದರ್ಭ ಕೃಷಿ ಚಟುವಟಿಕೆಗೆ ಹೆಚ್ಚಿನ ಪ್ರೋತ್ಸಾಹ ನೀಡಿದ್ದ “ಹಸಿರು ಕ್ರಾಂತಿಯ ಹರಿಕಾರ” ಮಾಜಿ ಉಪ ಪ್ರಧಾನಿ ಬಾಬು ಜಗಜೀವನ್ ರಾಮ್ ಅವರ ಸಾಧನೆಗಳನ್ನು ಸ್ಮರಿಸುವ ಕಾರ್ಯಕ್ರಮ ಎಸ್ಟಿಪಿಐ ಬೆಂಗಳೂರು ಜಿಲ್ಲಾ ಕಛೇರಿಯಲ್ಲಿ ನಡೆಯಿತು. ಪ್ರಾಸ್ತಾವಿಕವಾಗಿ ಮಾತನಾಡಿದ ಎಸ್‌ಡಿಪಿಐ ರಾಜ್ಯ ಪ್ರಧಾನ ಕಾರ್ಯದರ್ಶಿ ಅಪ್ಪರ್ ಕೂಡ್ಲಿಪೇಟೆ ಬಾಬುಜಗಜೀವನ್ ರವರು ಕೇವಲ ಉಪ ಪ್ರಧಾನಿ ಮಾತ್ರವಲ್ಲದೇ ಕೃಷಿ, …

Read More »

ಕೇರಳದಲ್ಲಿ ಖಾಸಗಿ ಹೆಲಿಕಾಪ್ಟರ್ ಪತನ: ಉದ್ಯಮಿ ಯೂಸುಫ್ ಅಲಿ ಸಹಿತ 7 ಮಂದಿ ಸುರಕ್ಷಿತ

ಕೇರಳ ಮೂಲಕ ಬಹುರಾಷ್ಟ್ರೀಯ ಸಂಸ್ಥೆ ಲುಲು ಗ್ರೂಪ್ ಆಫ್ ಕಂಪೆನಿಯ ಮಾಲಕ ಯೂಸುಫ್ ಅಲಿ, ಅವರ ಪತ್ನಿ, ಮೂವರು ಸಿಬ್ಬಂದಿ ಸಹಿತ ಒಟ್ಟು 7 ಮಂದಿ ಪ್ರಯಾಣಿಸುತ್ತಿದ್ದ ಖಾಸಗಿ ಹೆಲಿಕಾಪ್ಟರ್ ಭಾನುವಾರ ಬೆಳಿಗ್ಗೆ ಕೊಚ್ಚಿಯಲ್ಲಿ ಪತಗೊಂಡಿದ್ದು, ಎಲ್ಲ ಪ್ರಯಾಣಿಕರು ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದಾರೆ. ಡಾ ಯೂಸುಫ್ ಅಲಿ ಸಹಿತ ಪ್ರಯಾಣಿಕರಿದ್ದ ಹೆಲಿಕಾಪ್ಟರ್ ಪನಂಗಾಡ್ ಎಂಬಲ್ಲಿನ ಕೇರಳ ಮೀನುಗಾರಿಕೆ ಹಾಗೂ ಸಮುದ್ರ ಅಧ್ಯಯನ ವಿಶ್ವವಿದ್ಯಾಲಯದ ಆವರಣದ ಔಗು ಪ್ರದೇಶದಲ್ಲಿ ಏಕಾಏಕಿ ಭೂಸ್ಪರ್ಶ …

Read More »

ಹೇಗಿದೆ ನೋಡಿ ಆರೋಗ್ಯ ಸಿಬ್ಬಂದಿ ಕೋವಿಡ್ ಟೆಸ್ಟ್ ಕಳ್ಳಾಟ…!

ಬೆಂಗಳೂರು: ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸೋಂಕು ನಿಯಂತ್ರಣಕ್ಕೆ ಹೆಚ್ಚು ಹೆಚ್ಚು ಕೋವಿಡ್ ಟೆಸ್ಟ್ ಗಳನ್ನು ಮಾಡುವಂತೆ ಕೇಂದ್ರ ಸರ್ಕಾರ ಆದೇಶ ನೀಡಿರುವ ಬೆನ್ನಲ್ಲೇ ರಾಜ್ಯ ಸರ್ಕಾರಗಳು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಪ್ರತಿದಿನ ಟಾರ್ಗೆಟ್ ನೀಡುತ್ತಿದ್ದು, ಇದೀಗ ಕೋವಿಡ್ ಟೆಸ್ಟ್ ನಲ್ಲೇ ಆರೋಗ್ಯ ಸಿಬ್ಬಂದಿ ಕಳ್ಳಾಟ ನಡೆಸುತ್ತಿರುವ ಪ್ರಕರಣ ಬೆಳಕಿಗೆ ಬಂದಿದೆ. ಸಂಗ್ರಹಿಸುವ ಬದಲು ಖಾಲಿ ಕಡ್ಡಿಯನ್ನು ಲಿಕ್ವಿಡ್ ಬಾಟಲ್ ಗೆ ಹಾಕಿ ಅದನ್ನು ಲ್ಯಾಬ್ ಗೆ …

Read More »

ಈ ವರ್ಷ ಬೇಸಿಗೆ ರಜೆ ಕೊಡಲ್ಲ, ಮುಂದಿನ ಶೈಕ್ಷಣಿಕ ವರ್ಷದಲ್ಲಿ ಬದಲಾವಣೆ – ಇಲ್ಲಾ ಡಾ. ಸಿ. ಎನ್. ಅಶ್ವತ್ಥನಾರಾಯಣ

ಬೆಂಗಳೂರು: ಕೋವಿಡ್ ಕಾರಣಕ್ಕೆ ಪ್ರಸಕ್ತ ನಡೆಯುತ್ತಿರುವ ಪರೀಕ್ಷೆ ಹಾಗೂ ಶೈಕ್ಷಣಿಕ ಚಟುವಟಿಕೆಗಳು ನಿಲ್ಲುವುದಿಲ್ಲ. ನಿಗದಿತ ವೇಳಾಪಟ್ಟಿಯಂತೆ ಎಲ್ಲವೂ ಮುಂದುವರಿಯುತ್ತವೆ ಎಂದು ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದರು. ಬೆಂಗಳೂರಿನಲ್ಲಿ ಶನಿವಾರದಂದು ಸಂಸ್ಕೃತ ವಿಶ್ವವಿದ್ಯಾಲಯದ 8ನೇ ಘಟಿಕೋತ್ಸವದಲ್ಲಿ ಪಾಲ್ಗೊಂಡ ನಂತರ ಸುದ್ದಿಗಾರರ ಜತೆ ಮಾತನಾಡಿದ ಅವರು, “ವಿಶ್ವವಿದ್ಯಾಲಯದ ಮಟ್ಟದಲ್ಲಿ ಪದವಿ, ಸ್ನಾತಕೋತ್ತರ ಪದವಿ ಹಾಗೂ ಎಂಜಿನಿಯರಿಂಗ್, ಡಿಪ್ಲೋಮೋ ಸೇರಿದಂತೆ ಉನ್ನತ ಶಿಕ್ಷಣ ವ್ಯಾಪ್ತಿಗೆ ಬರುವ ಯಾವುದೇ ವಿಭಾಗದ …

Read More »

ನಾಲ್ಕನೇ ದಿನಕ್ಕೆ ಕಾಲಿಟ್ಟ ಸಾರಿಗೆ ನೌಕರರ ಮುಷ್ಕರ

ಬೆಂಗಳೂರು: ವೇತನ ಹೆಚ್ಚಳಕ್ಕೆ ಆಗ್ರಹಿಸಿ, ಆರನೇ ವೇತನ ಆಯೋಗದ ಶಿಫಾರಸು ಜಾರಿಗೆ ಒತ್ತಾಯಿಸಿ ರಾಜ್ಯ ರಸ್ತೆ ಸಾರಿಗೆ ಇಲಾಖೆಯ ನಾಲ್ಕು ನಿಗಮಗಳ ನೌಕರರು ನಡೆಸುತ್ತಿರುವ ಮುಷ್ಕರ ಶನಿವಾರ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಇಂದು ಸಹ ಪ್ರಯಾಣಿಕರ ಪರದಾಟ ಮುಂದುವರಿದಿದೆ. ಹಲವು ಕಡೆಗಳಲ್ಲಿ ಓಡಾಟಕ್ಕೆ ಖಾಸಗಿ ಬಸ್ಸುಗಳು ಸಿಗುತ್ತಿಲ್ಲ ಎಂದು ಪ್ರಯಾಣಿಕರು ಹೇಳುತ್ತಿದ್ದಾರೆ. ಬೆಂಗಳೂರಿನಲ್ಲಿ ಯಾವಾಗಲೂ ಗಿಜಿಗಿಡುತ್ತಿದ್ದ ಕೆ ಆರ್ ಮಾರುಕಟ್ಟೆ, ಮೆಜೆಸ್ಟಿಕ್ ನಲ್ಲಿ ಇಂದು ಖಾಲಿ ಖಾಲಿಯ ವಾತಾವರಣ. ಹಲವು …

Read More »

ಕೋರ್ಟ್ ತೀರ್ಪು ಕೊಡುವ
ಪೂರ್ವದಲ್ಲಿ ಮಠದ ಆಸ್ತಿ ಮಠಕ್ಕೆ ಬಿಡಬೇಕು- ದಿಂಗಾಲೇಶ್ವರ
ಸ್ವಾಮೀಜಿ

ಹುಬ್ಬಳ್ಳಿ- ಮೂರುಸಾವಿರ ಮಠ ಮರಳಿ ಪಡೆಯಲು ನಮ್ಮ ಹೋರಾಟ ನಿರಂತರವಾಗಿರಲಿದೆ. ಇದರಿಂದ ಹಿಂದೆ ಸರಿಯುವ ಮಾತು ಇಲ್ಲ ಎಂದು ಬಾಲೆಹೊಸೂರು ಮಠದ ದಿಂಗಾಲೇಶ್ವರ ಸ್ವಾಮೀಜಿ ಹೇಳಿದರು. ನಗರದಲ್ಲಿಂದು ಮಾತನಾಡಿದ ಅವರು, ವಿಷಯ ಕುರಿತಂತೆ ಮಠಗಳ ಆಸ್ತಿ ಉಳಿಸುವ ಉದ್ದೇಶದಿಂದ ಅಖಿಲ ಭಾರತ ವೀರಶೈವ ಮಹಾಸಭೆ ಶಂಕರ್ ಬಿದರಿ ನೇತೃತ್ವದಲ್ಲಿ ಸಮಿತಿ ರಚನೆ ಮಾಡಿದೆ. ಈ ಸಮಿತಿ ಮೂರುಸಾವಿರ ಮಠದ ಆಸ್ತಿ ಮರಳಿ ಕೊಡಿಸುವ ಕೆಲಸ, ಮಾಡಬೇಕು ಎಂದು ಒತ್ತಾಯಿಸಿದರು. ಕೆ …

Read More »

ಸಾರಿಗೆ ನೌಕರರ ಮುಷ್ಕರ: ಖಾಸಗಿ ಬಸ್ಸುಗಳ ಓಡಾಟ ಜೊರ್

ಬೆಂಗಳೂರು: ವೇತನ ಪರಿಷ್ಕರಣೆಯ ತಮ್ಮ ಬೇಡಿಕೆಗಳನ್ನು ಕೂಡಲೇ ಈಡೇರಿಸುವಂತೆ ಆಗ್ರಹಿಸಿ ರಾಜ್ಯ ಸರ್ಕಾರದ ವಿರುದ್ಧ ಕೆಎಸ್ ಆರ್ ಟಿಸಿ, ಬಿಎಂಟಿಸಿ ಸೇರಿದಂತೆ ರಾಜ್ಯ ರಸ್ತೆ ಸಾರಿಗೆಯ ನಾಲ್ಕು ನಿಗಮಗಳ ನೌಕರರು ಬುಧವಾರದಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸುತ್ತಿದ್ದಾರೆ. ಇದರಿಂದಾಗಿ ಇಂದು ರಾಜ್ಯ ರಸ್ತೆ ಸಾರಿಗೆಗಳು ಬಹುತೇಕ ಕಡೆಗಳಲ್ಲಿ ರಸ್ತೆಗಿಳಿದಿಲ್ಲ. ಇದರ ಪರಿಣಾಮ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇಂದು ಬಸ್ ಸಂಚಾರ ಸ್ತಬ್ಧವಾಗಿದೆ. ಜನರು ದಿನನಿತ್ಯದ ವಹಿವಾಟುಗಳಿಗೆ, ಕಾರ್ಯಗಳಿಗೆ ಬಸ್ ಗಳನ್ನೇ …

Read More »

ರಾಜ್ಯ ರಸ್ತೆ ಸಾರಿಗೆ ನೌಕರರ ಮುಷ್ಕರ: ಹಲವು ಜಿಲ್ಲೆಗಳಲ್ಲಿ ಬಸ್ ಸಂಚಾರ ಸ್ಥಗಿತ, ಪ್ರಯಾಣಿಕರ ಪರದಾಟ

ಬೆಂಗಳೂರು: ತಮ್ಮ ಬೇಡಿಕೆಗಳನ್ನು ಕೂಡಲೇ ಈಡೇರಿಸುವಂತೆ ಆಗ್ರಹಿಸಿ ರಾಜ್ಯ ಸರ್ಕಾರದ ವಿರುದ್ದ ಕೆಎಸ್ ಆರ್ ಟಿಸಿ, ಬಿಎಂಟಿಸಿ ಸೇರಿದಂತೆ ರಾಜ್ಯ ರಸ್ತೆ ಸಾರಿಗೆಯ ನಾಲ್ಕು ನಿಗಮಗಳ ನೌಕರರು ಬುಧವಾರದಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸುತ್ತಿದ್ದಾರೆ. ಇದರಿಂದಾಗಿ ಇಂದು ರಾಜ್ಯ ರಸ್ತೆ ಸಾರಿಗೆಗಳು ಬಹುತೇಕ ಕಡೆಗಳಲ್ಲಿ ರಸ್ತೆಗಿಳಿದಿಲ್ಲ. ಇದರ ಪರಿಣಾಮ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇಂದು ಬಸ್ ಸಂಚಾರ ಸ್ತಬ್ಧವಾಗಿದೆ. ಜನರು ದಿನನಿತ್ಯದ ವಹಿವಾಟುಗಳಿಗೆ, ಕಾರ್ಯಗಳಿಗೆ ಬಸ್ ಗಳನ್ನೇ ಸಂಚಾರಕ್ಕೆ ನಂಬಿಕೊಂಡಿದ್ದವರು …

Read More »

ಕೆಲಸದ ಕೊಡಿಸುವುದಾಗಿ ನಂಬಿసి ಮಹಿಳೆಯೋರ್ವಳ ಬೆತ್ತಲೆ ವಿಡಿಯೋ ಹರಿಬಿಟ್ಟ ವಿವಿ ಗ್ರಂಥಾಲಯ ಅಧೀಕ್ಷಕ

ಕಲಬುರಗಿ: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ಯುವತಿಯೊಂದಿಗಿನ ರಾಸಲೀಲೆ ಸಿಡಿ ಪ್ರಕರಣದ ತನಿಖೆ ಇಡೀ ರಾಜ್ಯವಲ್ಲದೇ ದೇಶದಲ್ಲಿಯೇ ಬಿಸಿ ಬಿಸಿ ಚರ್ಚೆಯಾಗಿರುವ ಸಂದರ್ಭದಲ್ಲಿಯೇ ಗುಲಬರ್ಗಾ ವಿಶ್ವವಿದ್ಯಾಲಯದ ಗ್ರಂಥಾಲಯ ಅಧೀಕ್ಷಕನೊಬ್ಬ ಕೆಲಸ ಕೊಡಿಸುವುದಾಗಿ ನಂಬಿಸಿ ಮಹಿಳೆಯೊಬ್ಬಳ ಅಶ್ಲೀಲ ವಿಡಿಯೋ ತರಿಸಿ ಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟ ಘಟನೆ ನಡೆದಿದೆ. ಗುಲಬರ್ಗಾ ವಿವಿ ಗ್ರಂಥಾಲಯ ಅಧೀಕ್ಷಕ ಶರಣಪ್ಪ ಮಾಕುಂಡಿ ಕಿರುಕುಳ ನೀಡಿದ ಬಂಧಿತ ಆರೋಪಿ. ಮಹಿಳೆಗೆ ಬೆತ್ತಲಾಗಿ ವಿಡಿಯೋ ಮಾಡಿ ಹಾಕಿದರೆ …

Read More »