Breaking News

ಸೂಪರ್ ಸುದ್ದಿಗಳು

ಪಂಚಾಯತ ಸಿಬ್ಬಂದಿಯ ಪತ್ನಿಯನ್ನೇ ಮಂಚಕ್ಕೆ ಕರೆದ ಭೂಪ ಹೆಂಡ್ತಿ ಮೆಂಬರ್, ಗಂಡನ ದರ್ಬಾರ್.!!

ಗದಗ: ತುಂಬು ಸಂಸಾರ, ಜೀವನ ನಿರ್ವಹಣೆಗೆ ಗ್ರಾಮ ಪಂಚಾಯತ್ನಲ್ಲಿ ಒಂದು ಕೆಲಸ. ಈ ನಡುವೆ ಆರೋಗ್ಯ ಸರಿಯಿಲ್ಲ ಎಂದು ತಿಂಗಳ ಕಾಲ ರಜೆ ಹಾಕಿದ್ದನ್ನೇ ನೆಪ ಮಾಡಿಕೊಂಡು ಅಮಾಯಕ ವ್ಯಕ್ತಿಯನ್ನ ಕೆಲಸದಿಂದ ತೆಗೆದಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಅಲ್ಲದೇ ನನ್ನ ಗಂಡನನ್ನು ಮತ್ತೆ ಕೆಲಸಕ್ಕೆ ತಗೋಳಿ ಎಂದು ಮನವಿ ಮಾಡಿಕೊಂಡರೇ ಪ್ರಭಾವಿ ವ್ಯಕ್ತಿವೋರ್ವ ಪಂಪ್ ಆಪರೇಟರನ ಪತ್ನಿಯನ್ನೇ ಮಂಚಕ್ಕೆ ಕರೆದಿದ್ದಾನೆ ಎನ್ನಲಾದ ಆಡಿಯೋವೊಂದು ವೈರಲ್ ಆಗಿದೆ. ಹೌದು, ಗದಗ ತಾಲೂಕಿನ ಹುಯಿಲಗೋಳ …

Read More »

ಮನೆಯಲ್ಲೇ ರಂಜಾನ್ ಪ್ರಾರ್ಥನೆ; ಅಮೀನಗಡದಲ್ಲಿ ಸರಳ ರಂಜನ್ ಹಬ್ಬ ಆಚರಣೆ

ಕೊರೊನಾ ಎರಡನೇ ಅಲೆಯ ಭೀಕರತೆಯ ನಿಯಂತ್ರಣಕ್ಕೆ ಸರ್ಕಾರ ಲಾಕ್ಡೌನ್ ವಿಧಿಸಿದ್ದು ಸರ್ಕಾರದ ಮಾರ್ಗಸೂಚಿಯಂತೆ ಬಾಗಲಕೋಟೆ ಜಿಲ್ಲೆಗಳು ಸೇರಿದಂತೆ ಅಮೀನಗಡ, ಪಟ್ಟಣದ, ಸೂಳೇಭಾವಿ ಗ್ರಾಮದ, ಮುಸ್ಲಿಮರು ಇಂದು (ಶುಕ್ರವಾರ) ಸರಳವಾಗಿ ಈದ್ ಉಲ್ ಫಿತರ್ ಆಚರಿಸಿದ್ದಾರೆ. ಮುಂಜಾನೆ ಬೇಗ ಎದ್ದು ಸ್ನಾನ ಮಾಡಿ, ಹೊಸ ಬಟ್ಟೆ ತೊಟ್ಟು, ಬಟ್ಟೆಗೆ ಅತ್ತರ್ ಹಾಕಿ ಮನೆಯಲ್ಲಿ ಮಾಡಿದ ಸಿಹಿ ಸವಿದು ಎಲ್ಲಾ ಮುಸ್ಲಿಮರು ಒಟ್ಟಾಗಿ ಈದ್ ನಮಾಜ್ ಮುಗಿಸಿ, ಪ್ರವಚನ ಕೇಳಿ ಪರಸ್ಪರ ಆಲಿಂಗಿಸಿ, …

Read More »

ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಸುಧಾ ಮೂರ್ತಿ ಅವರಿಂದ ಕೋವಿಡ್ ನಿರ್ವಹಣೆಗೆ ಮತ್ತೆ ೧೦೦ ಕೋಟಿ ರೂಪಾಯಿ ದೇಣಿಗೆ

ಬೆಂಗಳೂರು, ಮೇ. 10- ನಿರಂತರವಾಗಿ ಹೆಚ್ಚುತ್ತಿರುವ ಕೋವಿಡ್-19 ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡಲು ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಸುಧಾ ಮೂರ್ತಿ ರೂ. 100 ಕೋಟಿ ರೂ. ದೇಣಿಗೆ ನೀಡಿದ್ದಾರೆ. ಕಳೆದ ವರ್ಷವೂ ಸಹ ಸುಧಾ ಮೂರ್ತಿಯವರು 100 ಕೋಟಿ ರೂ ದೇಣಿಗೆಯನ್ನು ನೀಡಿದ್ದರು. ಈ ಬಾರಿಯ ದೇಣಿಗೆಯನ್ನು ಕೋವಿಡ್ ರೋಗಿಗಳಿಗೆ ಆಮ್ಲಜನಕ, ವೆಂಟಿಲೇಟರ್ ಮತ್ತು ಇತರ ಔಷಧಿ ಖರೀದಿಗೆ ಬಳಸಿಕೊಳ್ಳಬಹುದು ಎಂದು ಅವರು ಹೇಳಿದ್ದಾರೆ. ಮಂಗಳೂರು, ಹೈದರಾಬಾದ್, ಪುಣೆ, ನಾಗ್ಪುರ, …

Read More »

ನಾವು ಸೂಚಿಸಿದ ಲಾಕ್ ಡೌನ್ ಇದಾಗಿರಲಿಲ್ಲ! ದನಕ್ಕೆ ಬಡಿದಂತೆ ಬಡಿಯುತ್ತಿದ್ದಾರೆ: ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ

ಬೆಂಗಳೂರು: ಲಾಕ್ ಡೌನ್ ಅಲ್ಲದ ಕಠಿಣ ಲಾಕ್ ಡೌನ್, ಜನ ಹೊರಗೆ ಬಂದರೆ ದನಕ್ಕೆ ಬಡಿದಂತೆ ಬಡಿಯುವ ಲಾಕ್ ಡೌನ್ ಇಂದಿನಿಂದ ಜಾರಿಗೆ ಬರಲಿದೆ. ಜನಸಂಚಾರ ತಡೆಯುವುದೇ ಲಾಕ್ ಡೌನ್ ಎಂದು ಭಾವಿಸಿರುವ ಸರ್ಕಾರ ಸಂಕಷ್ಟದಲ್ಲಿ ನಾಗರಿಕರನ್ನು ಮರೆತಿರುವುದು ದುರಂತ. ನಾವು ಸೂಚಿಸಿದ ಲಾಕ್ ಡೌನ್ ಇದಾಗಿರಲಿಲ್ಲ. ನಾವು ಹೇಳಿದ್ದು ಜನಹಿತದ ಲಾಕ್ ಡೌನ್ ಆಗಿತ್ತು ಎಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಟೀಕಿಸಿದ್ದಾರೆ. ಲಾಕ್ ಡೌನ್ ಅಲ್ಲದ …

Read More »

PUC ಪ್ರಥಮ ವರ್ಗಕ್ಕೆ ಪರೀಕ್ಷೆ ರದ್ದು, ದ್ವಿತೀಯ ಪರೀಕ್ಷೆ ಮುಂದಕ್ಕೆ

ಬೆಂಗಳೂರು: ಪಿಯುಸಿ ಪ್ರಥಮ ವರ್ಗಕ್ಕೆ ಪರೀಕ್ಷೆ ಇಲ್ಲ, ದ್ವಿತೀಯ ಪರೀಕ್ಷೆ ಮುಂದಕ್ಕೆಕೊರೋನಾ ಹಿನ್ನೆಲೆಯಲ್ಲಿ ಈ ನಿರ್ಧಾರ ರಾಜ್ಯದಲ್ಲಿ ಮೇ 24ರಂದು ಜೂನ್ 16ರ ವರೆಗೆ ನಡೆಯಬೇಕಿದ್ದ ಪಿಯುಸಿ ದ್ವಿತೀಯ ವರ್ಗದ ಪರೀಕ್ಷೆಗಳನ್ನು ಅನಿರ್ಧಿಷ್ಟಕಾಲ ಮುಂದೂಡಲಾಗಿದೆ. ಪಿಯುಸಿ ಪ್ರಥಮ ವರ್ಗಕ್ಕೆ ಪರೀಕ್ಷೆ ರದ್ದುಪಡಿಸಿ ಎಲ್ಲರೂ ದ್ವಿತೀಯ ವರ್ಗಕ್ಕೆ ಉತ್ತೀರ್ಣ ಎಂದು ಘೋಷಿಸಲಾಗಿದೆ. ರಾಜ್ಯದಲ್ಲಿ ಕೊರೋನಾ ಮಹಾಮಾರಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಮತ್ತು ಅಧಿಕಾರಿಗಳು ಕೋವಿಡ್ ಕೆಲಸದಲ್ಲಿ ತೊಡಗಿರುವುದರಿಂದ …

Read More »

ಮಂಗಳೂರು ಪೊಲೀಸರಿಗೆ ಉಚಿತ ಕ್ಯಾಂಟಿನ್

ದಕ್ಷಿಣ ಕನ್ನಡ: ಕೊರೋನಾ ಎರಡನೇ ಅಲೆಯಿಂದಾಗಿ ಈ ವರ್ಷ ಮತ್ತೆ ಲಾಕ್‌ಡೌನ್ ನಡೆಯುತ್ತಿದೆ. ಲಾಕ್‌ಡೌನ್‌ನಲ್ಲಿ ಕೊರೋನಾ ವಾರಿಯರ್ಸ್‌ಗಳಾಗಿ ಹೆಚ್ಚು ಕೆಲಸ ಮಾಡುತ್ತಿರುವವರಲ್ಲಿ ಪೊಲೀಸ್ ಇಲಾಖೆ ಕೂಡ ಒಂದು. ಪೊಲೀಸರಿಗೆ ಲಾಕ್‌ಡೌನ್‌ನಲ್ಲಿ ಹೆಚ್ಚುವರಿ ಕೆಲಸ ಇದ್ದು, ಊಟ ತಿಂಡಿ ಸರಿಯಾಗಿ ಸಿಗುವುದಿಲ್ಲ. ಆದರೆ ಮಂಗಳೂರು ಪೊಲೀಸರಿಗೆ ಮಾತ್ರ ಈ ಸಮಸ್ಯೆ ಇಲ್ಲ. ಏಕೆಂದರೆ ಇಲ್ಲಿ ಪೊಲೀಸ್ ಕ್ಯಾಂಟೀನ್ ಇದ್ದು, ಪೊಲೀಸರು ನೆಮ್ಮದಿಯಿಂದ ಊಟ ಮಾಡುವಂತಾಗಿದೆ. ಸದ್ಯ ರಾಜ್ಯದಲ್ಲಿ ಲಾಕ್‌ಡೌನ್ ನಡೆಯುತ್ತಿದೆ. 15 …

Read More »

ಬೇಕಾಬಿಟ್ಟಿ ಓಡಾಡುವ ವಾಹನಗಳು ಸೀಜ್ ! PSI ಎಮ್,ಜೆ,ಕುಲಕರ್ಣಿ ಖಡಕ್ ವಾರ್ನಿಂಗ್

ಅಮೀನಗಡ: ಬೇಕಾಬಿಟ್ಟಿಯಾಗಿ ಓಡಾಡುವ ವಾಹನ ಸವಾರರಿಗೆ ಇಂದು ಬೆಳಗ್ಗಿನಿಂದ ಹುನಗುಂದ ತಾಲೂಕಿನ ಅಮೀನಗಡ ಪೊಲೀಸ್ ಠಾಣೆಯ ಮುಂದೆ ಅನಾವಶ್ಯಕವಾಗಿ ತಿರುಗಾಡುವ ವಾಹನಗಳ ತಪಾಸಣೆಯನ್ನು ಪಿ,ಎಸ್,ಐ ಶ್ರೀ ಎಮ್ ಜೆ ಕುಲಕರ್ಣಿ ಅವರು ಮಾಡಿದರು, ಬೈಕ್, ಕಾರ್, ಇತರೆ ಗುಡ್ಸ್ ವಾಹನಗಳ ತಪಾಸಣೆ ಮಾಡಿ ಕೆಲವು ವಾಹನಗಳ ಸವಾರರಿಗೆ ದಂಡ ಹಾಗೂ ಬೈಕ್ ಸಿಜ್ ಮಾಡುವ ಮೂಲಕ ಖಡಕ್ ಎಚ್ಚರಿಕೆ ನೀಡಿದರು. ಬೆಳಗ್ಗೆ ೬ ರಿಂದ ೧೦ ಗಂಟೆಯ ವರೆಗೆ ಸಾರ್ವಜನಿಕರು …

Read More »

ವಾಟ್ಸ್ ಅಪ್ ಗ್ರೂಪಿನಲ್ಲಿ ಬಂದ ಆಕ್ಷೇಪಾರ್ಹ ಪೋಸ್ಟ್ ಗಳಿಗೆ ಅಡ್ಮಿನ್ ಹೊಣೆಗಾರನಲ್ಲ: ಬಾಂಬೆ ಹೈಕೋರ್ಟ್

ಬಾಂಬೆ ಹೈಕೋರ್ಟ್ ನ ನಾಗುರ ನ್ಯಾಯಪೀಠವು ವಾಟ್ಸ್ ಆಪ್ ಸದಸ್ಯರ ಆಕ್ಷೇಪಾರ್ಹ ಪೋಸ್ಟ್ ಗಳಿಗೆ ಗ್ರೂಪ್ ಅಡ್ಮಿನ್ ನನ್ನು ಹೊಣೆಗಾರರನ್ನಾಗಿ ಮಾಡಲು ಸಾಧ್ಯವಿಲ್ಲ ಎಂದು ಆದೇಶ ಪ್ರಕಟಿಸಿದೆ. ಮಹಿಳೆಯೊಬ್ಬರ ಕುರಿತು ವಾಟ್ಸ್ ಆಪ್ ಗ್ರೂಪ್ ಒಂದರ ಸದಸ್ಯರೊಬ್ಬರು ಆಕ್ಷೇಪಾರ್ಹವಾಗಿ ಪೋಸ್ಟ್ ನ್ನು ಹಾಕಿದ್ದರು. ಇದರ ವಿರುದ್ಧ ವಾಟ್ಸ್ ಆಪ್ ಗ್ರೂಪ್ ನ ಅಡ್ಮಿನ್ ಆಗಿದ್ದ ಕಿಶೋರ್ ಟ್ಯಾರೋನ್ (33) ಎಂಬಾತನ ಮೇಲೆ ಮಹಿಳೆಯೊಬ್ಬಳು ಕ್ರಿಮಿನಲ್ ಪ್ರಕರಣವನ್ನು ದಾಖಲಿಸಿದ್ದಳು. ಮಹಿಳೆಯ ಕುರಿತಾದ …

Read More »

ನಾಳೆ ರಾತ್ರಿಯಿಂದ ಕರ್ನಾಟಕ 14 ದಿನ ಲಾಕ್ ಡೌನ್- ಬೆಳಿಗ್ಗೆ 6 ರಿಂದ 10 ವರೆಗೆ ಅಗತ್ಯ ಖರೀದಿಗೆ ಅವಕಾಶ

ನಾಳೆ ರಾತ್ರಿಯಿಂದ 14 ದಿನಗಳವರೆಗೆ ರಾಜ್ಯಾಧ್ಯಂತ ಬಿಗಿ ಕ್ರಮ ಕೈಗೊಳ್ಳಲಾಗುತ್ತಿದೆ. 14 ದಿನಗಳವರೆಗೆ ಕರ್ನಾಟಕದಲ್ಲಿ ಸಂಪೂರ್ಣ ಲಾಕ್ ಡೌನ್ ಮಾಡಲಾಗುತ್ತಿದೆ. ಬೆಳಿಗ್ಗೆ 6 ರಿಂದ 10 ಗಂಟೆಯವರೆಗೆ ಮಾತ್ರವೇ ಅಗತ್ಯ ವಸ್ತು ಖರೀದಿಗೆ ಅವಕಾಶ ನೀಡಲಾಗುತ್ತದೆ ಎಂಬುದಾಗಿ ಮುಖ್ಯಮಂತ್ರಿ ಬಿಎಸ್ ಘೋಘಿಸಿದ್ದಾರೆ. ಯಡಿಯೂರಪ್ಪ ಇಂದಿನ ಕೊರೋನಾ ನಿಯಂತ್ರಣ ಸಂಬಂಧ ನಡೆದಂತ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದಂತ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು, ಮಂತ್ರಿ ಮಂಡಲದ ಸಭೆಯ …

Read More »

ಮಸೀದಿಗಳಲ್ಲಿ ಪ್ರಾರ್ಥನೆಗೆ ಅವಕಾಶ ನೀಡಿ : ಜೆಡಿಎಸ್ ಅಲ್ಪಸಂಖ್ಯಾತರ ಘಟಕ ಮನವಿ

ಮಡಿಕೇರಿ ಏ.22 : ಮುಸಲ್ಮಾನರಿಗೆ ರಂಜಾನ್ ವ್ರತಾಚರಣೆಯ ಪವಿತ್ರ ತಿಂಗಳು ಇದಾಗಿರುವುದರಿಂದ ಕೋವಿಡ್ ಮಾರ್ಗಸೂಚಿಯೊಂದಿಗೆ ಮಸೀದಿಗಳಲ್ಲಿ ಪ್ರಾರ್ಥನೆಗೆ ಅವಕಾಶ ಕಲ್ಪಿಸಬೇಕೆಂದು ಜಾತ್ಯತೀತ ಜನತಾದಳದ ಜಿಲ್ಲಾಧ್ಯಕ್ಷ ಇಸಾಕ್ ಖಾನ್ ಮನವಿ ಮಾಡಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಸಮಾಜದ ಬಂಧುಗಳು ಸರ್ಕಾರ ಹಾಗೂ ಜಿಲ್ಲಾಡಳಿತ ಜಾರಿಗೆ ತಂದಿರುವ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಬದ್ಧರಾಗಿದ್ದಾರೆ. ರಂಜಾನ್ ಮಾಸವಾದ ಕಾರಣ ಇದೊಂದು ವಿಶೇಷ ಸಂದರ್ಭವೆAದು ಪರಿಗಣಿಸಿ ಪ್ರಾರ್ಥನೆಗೆ ವಿನಾಯಿತಿ ನೀಡಬೇಕೆಂದು ಅವರು ಕೋರಿದ್ದಾರೆ. ಮಸೀದಿಗಳಲ್ಲಿ …

Read More »