ಬೆಂಗಳೂರು: ಉತ್ತರ ಕರ್ನಾಟಕ ಭಾಗದಲ್ಲಿ ಮಂಗಳವಾರ ಭಾರಿ ಮಳೆಯಾಗಿದೆ. ದೋಣಿ ನದಿಯಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಹಳ್ಳಗಳು ಭರ್ತಿಯಾಗಿದ್ದು, ಜನವಸತಿ ಪ್ರದೇಶಗಳಿಗೆ ನೀರು ನುಗ್ಗಿದೆ. ವಿಜಯಪುರ ಜಿಲ್ಲೆಯಲ್ಲಿ ಮಳೆಯಿಂದಾಗಿ 127 ಮನೆಗಳಿಗೆ ಭಾಗಶಃ ಹಾನಿಯಾಗಿದೆ. ಚಡಚಣ ತಾಲ್ಲೂಕಿನ ಹಾಲಳ್ಳಿ ಗ್ರಾಮದಲ್ಲಿ ಸಿಡಿಲಿಗೆ ಎಮ್ಮೆ ಬಲಿಯಾಗಿದೆ. ಡೋಣಿ ನದಿಯ ಪ್ರವಾಹದಿಂದ ತಾಳಿಕೋಟೆ-ಹಡಗಿನಾಳ ನೆಲಮಟ್ಟದ ಸೇತುವೆ ಹಾಗೂ ಸಾತಿಹಾಳದಲ್ಲಿ ದೇವರಹಿಪ್ಪರಗಿ- ಬಸವನ ಬಾಗೇವಾಡಿ ಮುಖ್ಯ ರಸ್ತೆಯಲ್ಲಿರುವ ಸಂಪರ್ಕ ಸೇತುವೆ ಜಲಾವೃತವಾಗಿದೆ. ಬಾಗಲಕೋಟೆ ಜಿಲ್ಲೆಯ ಹುನಗುಂದ …
Read More »ಆಧಾರ್ ಕಾರ್ಡ್ ಹೊಂದಿದವರಿಗೆ ಮುಖ್ಯ ಮಾಹಿತಿ: ಜನನ, ಮರಣ ನೋಂದಣಿಗೆ ಕಡ್ಡಾಯವಲ್ಲ ‘ಆಧಾರ್’
ನವದೆಹಲಿ: ಜನನ ಮತ್ತು ಮರಣ ನೋಂದಣಿಗೆ ಆಧಾರ್ ಒದಗಿಸುವುದು ಕಡ್ಡಾಯವಲ್ಲ ಎಂದು ರಿಜಿಸ್ಟ್ರಾರ್ ಜನರಲ್ ಆಫ್ ಇಂಡಿಯಾ ಸ್ಪಷ್ಟಪಡಿಸಿದೆ. ಸ್ವಯಂಪ್ರೇರಣೆಯಿಂದ ಆಧಾರ್ ಒದಗಿಸಿದರೆ, ಅದನ್ನು ಯಾವುದೇ ದಾಖಲೆಯಲ್ಲಿ ಮುದ್ರಿಸಬಾರದು ಎಂದು ಆರ್ಟಿಐಗೆ ನೀಡಿದ ಉತ್ತರದಲ್ಲಿ ಆರ್ಜಿಐ ತಿಳಿ6ಸಿದೆ. ವಿಶಾಖಪಟ್ಟಣಂ ಮೂಲದ ವಕೀಲ ಎಂ.ವಿ.ಎಸ್. ಅನಿಲ್ ಕುಮಾರ್, ಮರಣದ ನೋಂದಣಿಗೆ ಆಧಾರ್ ಕಡ್ಡಾಯವೇ ಅಥವಾ ಇಲ್ಲವೇ ಎಂದು ಕೇಳಿ ಆರ್ಟಿಐ ಮನವಿ ಸಲ್ಲಿಸಿದ್ದರು. ಕಳೆದ ವಾರ ಟ್ವಿಟರ್ನಲ್ಲಿ ಈ ಬಗ್ಗೆ ಉತ್ತರ ನೀಡಲಾಗಿದೆ. …
Read More »ಪ್ರತಿದಿನ 1000 ಜನರ ಹೊಟ್ಟೆ ತುಂಬಿಸುವ 1 ರೂಪಾಯಿ ಊಟ
ನವದೆಹಲಿ: ಒಂದು ರೂಪಾಯಿಗೆ ಏನು ಬರುತ್ತೆ ಎಂದು ಕೇಳುವ ಜನರಿದ್ದಾರೆ. ಆದ್ರೆ ಇಲ್ಲೊಬ್ಬರು ಒಂದು ರೂಪಾಯಿಯಲ್ಲಿ ಒಬ್ಬ ವ್ಯಕ್ತಿಗೆ ಒಂದು ಹೊತ್ತಿನ ಹೊಟ್ಟೆ ತುಂಬಿಸುತ್ತಿದ್ದಾರೆ. ಈ ಮೂಲಕ ಜನ ಸೇವೆಯನ್ನು ಮಾಡುತ್ತಾ ಆ ಪ್ರದೇಶದಲ್ಲಿ ಯಾರೂ ಹಸಿವಿನಿಂದ ಇರದಂತೆ ನೋಡಿಕೊಂಡಿದ್ದಾರೆ. ನಂಗ್ಲೋಯಿನ ಶಿವ ಮಂದಿರ ಬಳಿಯ ‘ಶ್ಯಾಮ್ ರಸೋಯಿ’ ಎಂಬ ರೆಸ್ಟೋರೆಂಟ್, ಜನರಿಗೆ 1 ರೂಪಾಯಿಗೆ ಒಂದು ಹೊತ್ತಿನ ಊಟ ನೀಡುತ್ತಿದೆ. ಈ ಬಗ್ಗೆ ಸಂಸ್ಥೆಯ ಮಾಲೀಕ ಪ್ರವೀಣ್ ಗೋಯಲ್ …
Read More »ಪ್ರವಾಸಿಗರ ಹುಚ್ಚಾಟ: ವಾರಾಂತ್ಯಕ್ಕೆ ಸುರಕ್ಷತೆ ಇಲ್ಲದೆ ಜನಜಾತ್ರೆ!
ಬೆಂಗಳೂರು: ಕೊರೋನಾ ಹಿನ್ನೆಲೆಯಲ್ಲಿ ಭಣಗುಡುತ್ತಿದ್ದ ರಾಜ್ಯದ ಪ್ರಮುಖ ಪ್ರವಾಸಿತಾಣಗಳಲ್ಲೀಗ ಮತ್ತೆ ಪ್ರವಾಸಿಗರ ಕಲರವ ಆರಂಭವಾಗಿದೆ. ಲಾಕ್ಡೌನ್ ನಿಯಮಾವಳಿ ಸಡಿಲಗೊಳ್ಳುತ್ತಿದ್ದಂತೆ ಬೆಂಗಳೂರಿನ ನಂದಿಬೆಟ್ಟ, ಚಿಕ್ಕಮಗಳೂರಿನ ಮುಳ್ಳಯ್ಯನಗಿರಿ ಸೇರಿ ರಾಜ್ಯದ ಪ್ರಮುಖ ಪ್ರವಾಸಿ ತಾಣಗಳಲ್ಲಿ ವಾರಾಂತ್ಯದಲ್ಲಿ ಪ್ರವಾಸಿಗರ ಭಾರೀ ದಂಡು ಕಾಣಸಿಗುತ್ತಿದೆ. ಈ ಮೂಲಕ ಪ್ರವಾಸೋದ್ಯಮ ಕ್ಷೇತ್ರ, ರಾಜ್ಯದ ಆರ್ಥಿಕತೆಯ ಚೇತರಿಕೆಯ ಮುನ್ಸೂಚನೆ ನೀಡುತ್ತಿದೆ. ಆದರೆ, ಈ ವೇಳೆ ಕೋವಿಡ್ ನಿಯಮಾವಳಿ ಗಾಳಿಗೆ ತೂರಿ ಗುಂಪುಸೇರುವುದು, ಮಾಸ್ಕ್ ಧರಿಸದೆ ಸುತ್ತಾಡುವಂಥ ಹುಚ್ಚಾಟವೂ ಪ್ರವಾಸಿಗರಿಂದ …
Read More »ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ನಿಧನ
ನವದೆಹಲಿ : ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ಇಂದು ನಿಧನರಾಗಿದ್ದಾರೆ. ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಕೆಲ ಕಾಲದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಉಪಚಾರ ಫಲಿಸದೆ ಇಂದು ನಿಧನರಾಗಿದ್ದಾರೆ. ಈ ಕುರಿತು ಅವರ ಪುತ್ರ ಚಿರಾಗ್ ಪಾಸ್ವಾನ್ ಟ್ವೀಟ್ ಮೂಲಕ ವಿಷಯವನ್ನು ಬಹಿರಂಗಪಡಿಸಿದ್ದಾರೆ. 8 ಎಂಟು ಬಾರಿ ಸಂಸದರಾಗಿ ಆಯ್ಕೆಯಾಗಿದ್ದರೆ ರಾಮ್ ವಿಲಾಸ್ ಪಾಸ್ವಾನ್ ಹಲವು ಬಾರಿ ಕೇಂದ್ರದಲ್ಲಿ ಸಚಿವರಾಗಿದ್ದರು. ದಲಿತ ನಾಯಕರಾಗಿದ್ದ ರಾಮ್ ವಿಲಾಸ್ ಪಾಸ್ವಾನ್ ಬಿಹಾರದ …
Read More »ಸ್ವಸಹಾಯ ಗುಂಪುಗಳ ಮಹಿಳೆಯರಿಗೆ ಗುಡ್ ನ್ಯೂಸ್
ಬೆಂಗಳೂರು: ರಾಜ್ಯದಲ್ಲಿ ಸ್ವಸಹಾಯ ಗುಂಪುಗಳು ತಯಾರಿಸುವ ಉತ್ಪನ್ನಗಳ ಮಾರಾಟಕ್ಕೆ ಅಮೆಜಾನ್ ವೇದಿಕೆ ಒದಗಿಸಲಿದೆ. ಅಮೆಜಾನ್ ಕಂಪನಿ ಸಾರ್ವಜನಿಕ ಕಾರ್ಯನೀತಿ ವಿಭಾಗದ ಉಪಾಧ್ಯಕ್ಷ ಚೇತನ್ ಕೃಷ್ಣಸ್ವಾಮಿ ಉಪಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವಥ್ ನಾರಾಯಣ ಅವರೊಂದಿಗೆ ನಡೆಸಿದ ಸಭೆಯಲ್ಲಿ ಈ ಕುರಿತಂತೆ ಭರವಸೆ ನೀಡಿದ್ದಾರೆ. ರಾಜ್ಯದಲ್ಲಿ 1.5 ಲಕ್ಷ ಸ್ವಸಹಾಯ ಗುಂಪುಗಳು ಇದ್ದು ನಾನಾ ಉತ್ಪನ್ನಗಳನ್ನು ತಯಾರಿಸುತ್ತಿವೆ. ಇವುಗಳಿಗೆ ಇ -ಕಾಮರ್ಸ್ ವೇದಿಕೆ ಒದಗಿಸಿ ಉತ್ಪನ್ನ ಮಾರಾಟಕ್ಕೆ ಅನುಕೂಲ ಮಾಡಿಕೊಡಬೇಕಿದೆ ಎಂದು ಡಿಸಿಎಂ ಹೇಳಿದ್ದಾರೆ. ಗ್ರಾಮೀಣ …
Read More »ಅಕ್ರಮ `BPL’ ಕಾರ್ಡ್ ಪಡೆದವರಿಗೆ ರಾಜ್ಯ ಸರ್ಕಾರದಿಂದ ಬಿಗ್ ಶಾಕ್!
ಬೆಂಗಳೂರು : ಆರ್ಥಿಕವಾಗಿ ಸದೃಢವಾಗಿದ್ದರೂ ತಪ್ಪು ಮಾಹಿತಿ ನೀಡಿ ಬಿಪಿಎಲ್ ಕಾರ್ಡ್ ಪಡೆದುಕೊಂಡವರಿಗೆ ರಾಜ್ಯ ಸರ್ಕಾರವು ಬಿಗ್ ಶಾಕ್ ನೀಡಿದ್ದು, ಒಟ್ಟು 94 ಸಾವಿರಕ್ಕೂ ಅಧಿಕ ಅನರ್ಹ ಬಿಪಿಎಲ್ ಕಾರ್ಡ್ ಗಳನ್ನು ರದ್ದುಪಡಿಸಲಾಗಿದೆ. ಅನರ್ಹ ಬಿಪಿಎಲ್ ಕಾರ್ಡ್ ಗಳನ್ನು ತಡೆಯುವ ಉದ್ದೇಶದಿಂದ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಬಿಪಿಎಲ್ ಕಾರ್ಡ್ ಪಡೆದ ಅನರ್ಹರರ ಪತ್ತೆಗೆ ಮುಂದಾಗಿತ್ತು. ಕಳೆದ 15 ತಿಂಗಳಲ್ಲಿ ರಾಜ್ಯಾದ್ಯಂತ 94,885 ಬಿಪಿಎಲ್ ಕಾರ್ಡ್ ಗಳನ್ನು ಇಲಾಖೆ …
Read More »ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರಿಗೆ ಸೋಂಕು ದೃಢ
ಹುಬ್ಬಳ್ಳಿ ; ಕೇಂದ್ರ ಸಚಿವರ ಪ್ರಹ್ಲಾದ ಜೋಶಿ ಅವರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ಕುರಿತು ಸ್ವತಃ ಟ್ವೀಟ್ ಮಾಡಿರುವ ಸಚಿವರು ತಮಗೆ ಸೋಂಕು ತಗುಲಿರುವುದು ದೃಢಪಟ್ಟಿದೆ ಆದರೆ ರೋಗಲಕ್ಷಣಗಳು ಕಂಡು ಬಂದಿಲ್ಲ ವೈದ್ಯರ ಸಲಹೆಯಂತೆ ತಾವು ಹೊಮ ಕ್ವಾರಂಟೈನ್ ಆಗುತ್ತಿರುವುದಾಗಿ ಅವರು ಹೇಳಿದ್ದಾರೆ. ಸಚಿವರು ನಿನ್ನೆಯಷ್ಟೇ ಬೆಳಗಾವಿಗೆ ಆಗಮಿಸಿದ್ದರು. ದಿ.ಸಚಿವ ಸುರೇಶ್ ಅಂಗಡಿಯವರ ಮನೆಗೆ ಭೇಟಿ ನೀಡಿದ್ದರು .
Read More »ಗೂಡುರು sc ಗ್ರಾಮದಲ್ಲಿ ಬೃಹತ್ ಕರವೇ ಪ್ರತಿಭಟನೆ, ಯೋಗಿ ಆದಿತ್ಯನಾಥ ಸರಕಾರದ ವಿರುದ್ಧ ಕರವೇ ಗರಂ,
ಗೂಡೂರ SC : ಇಂದು ಇಲಕಲ್ಲ ತಾಲೂಕಿನ ಗುಡೂರು Sc, ಗ್ರಾಮದಲ್ಲಿ ಕರವೇ, ಸಂಘಟನೆಯಿಂದ ಬೃಹತ್ ಪ್ರತಿಭಟನೆ ನಡೆಯಿತು ಉತ್ತರ ಪ್ರದೇಶದ ಹತ್ರಾಸ್ ನಲ್ಲಿ ಯುವತಿಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರ ಹಾಗೂ ಸಾವಿನ ಪ್ರಕರಣದ ಬಗ್ಗೆ ಇಡೀ ದೇಶಾದ್ಯಂತ ಆಕ್ರೋಶ ವ್ಯಕ್ತವಾಗುತ್ತಿರುವಂತೆಯೇ ಇದೇ ರೀತಿಯಲ್ಲಿ ಮತ್ತೊಂದು ಪ್ರಕರಣ ವರದಿಯಾಗಿದೆ. ಹತ್ರಾಸ್ ನಿಂದ 500 ಕಿಲೋ ಮೀಟರ್ ದೂರದಲ್ಲಿರುವ ಬಲ ರಾಮ್ ಪುರ ಗ್ರಾಮದಲ್ಲಿ ಮಂಗಳವಾರ ಸಂಜೆ 22 ವರ್ಷದ ದಲಿತ …
Read More »ಚಕ್ರಬಡ್ಡಿ ಮನ್ನಾ’ ಒಪ್ಪಂದ ಸುಪ್ರೀಂಕೋರ್ಟ್!
ಮುಂಬಯಿ: 2 ಕೋಟಿ ರೂಪಾಯಿವರೆಗಿನ ಸಾಲಗಳಿಗೆ ಚಕ್ರಬಡ್ಡಿ ಮನ್ನಾ ಮಾಡುವ ಸಂಬಂಧ ಹೆಚ್ಚುವರಿ ಅಫಿಡವಿಟ್ ಸಲ್ಲಿಸಲು ಭಾರತೀಯ ರಿಸರ್ವ್ ಬ್ಯಾಂಕ್ ಮತ್ತು ಕೇಂದ್ರ ಸರ್ಕಾರಗಳಿಗೆ ಸುಪ್ರೀಂ ಕೋರ್ಟ್ ಸೋಮವಾರ ಒಂದು ವಾರ ಕಾಲಾವಕಾಶ ನೀಡಿದೆ. ಅಂದ್ರೆ, ಪ್ರಕರಣದ ವಿಚಾರಣೆಯನ್ನ ಅಕ್ಟೋಬರ್ 13ಕ್ಕೆ ಮುಂದೂಡಿದೆ. ಕೇಂದ್ರದ ಪ್ರಸ್ತಾವನೆಗೆ ಪ್ರತಿಕ್ರಿಯೆ ಸಲ್ಲಿಸುವಂತೆ ಭಾರತೀಯ ಬ್ಯಾಂಕುಗಳ ಸಂಘವನ್ನ ಕೋರಿದ ನ್ಯಾಯಾಲಯ, ರಿಯಲ್ ಎಸ್ಟೇಟ್ ಸಂಘಗಳು ಮತ್ತು ವಿದ್ಯುತ್ ಉತ್ಪಾದಕರು ಎತ್ತಿದ ಸಮಸ್ಯೆಗಳನ್ನ ಪರಿಗಣಿಸುವಂತೆ ಸರ್ಕಾರ …
Read More »