Breaking News

Uncategorized

ಬಾಗಲಕೋಟೆ: ಕೋವಿಡ್‌ನಿಂದ 122 ಮಂದಿ ಗುಣಮುಖ, 138 ಹೊಸ ಪ್ರಕರಣ ದೃಢ

ಬಾಗಲಕೋಟೆ: ಜಿಲ್ಲೆಯಲ್ಲಿ 122 ಮಂದಿ ಕೋವಿಡ್‍ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ‌. ಶನಿವಾರ ಹೊಸದಾಗಿ 138 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ನಾಲ್ವರು ಸಾವಿಗೀಡಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ತಿಳಿಸಿದ್ದಾರೆ.  ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 5060 ಕೋವಿಡ್ ಪ್ರಕರಣ ದೃಡಪಟ್ಟಿವೆ. ಈ ಪೈಕಿ ಒಟ್ಟು 4151 ಜನ ಕೋವಿಡ್‍ನಿಂದ ಗುಣಮುಖರಾಗಿದ್ದಾರೆ. ಹೊಸದಾಗಿ ದೃಢಪಟ್ಟವರಲ್ಲಿ ಬಾಗಲಕೋಟೆ ತಾಲ್ಲೂಕಿನ 33, ಬಾದಾಮಿ 12, ಹುನಗುಂದ 22, ಬೀಳಗಿ 3, ಮುಧೋಳ 51, ಜಮಖಂಡಿ …

Read More »

ಉಗ್ರ ದಾವೂದ್ ಇಬ್ರಾಹಿಂ ನಮ್ಮ ದೇಶದಲ್ಲೇ ಇದ್ದಾನೆ’.. ಕೊನೆಗೂ ಒಪ್ಪಿಕೊಂಡ ಪಾಕಿಸ್ತಾನ

ಕರಾಚಿ: ಉಗ್ರರನ್ನ ಪೋಷಣೆ ಮಾಡುತ್ತಿರುವ ಪಾಕಿಸ್ತಾನ ಕೊನೆಗೂ ತಲೆಮರೆಸಿಕೊಂಡಿರುವ ಉಗ್ರ ದಾವೂದ್ ಇಬ್ರಾಹಿಂ ವಿಚಾರದಲ್ಲಿ ತನ್ನ ಮುಖವಾಡನ್ನ ಕಳಚಿ ಸತ್ಯವನ್ನ ಹೇಳಿದೆ. ಭಾರತದ ಮೋಸ್ಟ್​ ವಾಂಟೆಡ್ ಉಗ್ರ ದಾವೂದ್ ಇಬ್ರಾಹಿಂ ಪಾಕಿಸ್ತಾನದಲ್ಲಿ ಇದ್ದಾನೆ ಅಂತಾ ಸಾರಿ ಸಾರಿ ಹೇಳಿತ್ತು. ಆದರೆ ಪಾಕಿಸ್ತಾನ ಇದುವರೆಗೂ ದಾವೂದ್​ ಇಬ್ರಾಹಿಂ ತಮ್ಮ ದೇಶದಲ್ಲಿ ಇರೋದನ್ನ ಒಪ್ಪಿಕೊಂಡಿರಲಿಲ್ಲ. ಇದೀಗ ತಾನಾಗೇ ಉಗ್ರ ಪಾಕ್​​ನಲ್ಲಿ ಅಡಗಿ ಕೂತಿದ್ದಾನೆ ಅನ್ನೋದನ್ನ ತಿಳಿಸಿದೆ. ವಿಶ್ವಸಂಸ್ಥೆ ಸೇರಿದಂತೆ ಅಂತಾರಾಷ್ಟ್ರೀಯ ಸಂಘಟನೆಗಳ ಎಚ್ಚರಿಕೆ …

Read More »

ಕೊರೋನಾ ಭೀತಿ ಮಧ್ಯೆ ಪ್ರಯಾಣಿಕರನ್ನು ಸೆಳೆಯಲು KSRTC ಬಸ್‌ ವಿನ್ಯಾಸ ಬದಲು

ಬೆಂಗಳೂರು: ಕೊರೋನಾ ಸೋಂಕಿನ ಹಿನ್ನೆಲೆಯಲ್ಲಿ ಪ್ರಯಾಣಿಕರ ನಡುವೆ ಸಾಮಾಜಿಕ ಅಂತರ ಕಾಯ್ದು ಕೊಳ್ಳಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ಇದೀಗ ಬಸ್‌ಗಳ ಆಸನ ವಿನ್ಯಾಸ ಬದಲಾವಣೆಗೆ ಮುಂದಾಗಿದೆ. ಪ್ರಾಯೋಗಿಕವಾಗಿ ಬೆಂಗಳೂರು ಕೇಂದ್ರ ವಿಭಾಗದ 2X2 ವಿನ್ಯಾಸದ ಎರಡು ಸಾಲಿನ 39 ಆಸನ ಸಾಮರ್ಥ್ಯದ ರಾಜಹಂಸ (ನೋಂದಣಿ ಸಂಖ್ಯೆ ಕೆಎ 27 ಎಫ್‌ 1803) ಬಸ್‌ನಲ್ಲಿ ಆಸನ ವಿನ್ಯಾಸ ಬದಲಾವಣೆ ಮಾಡಲಾಗಿದೆ. ಅಂದರೆ, 2X2 ವಿನ್ಯಾಸದ ಎರಡು ಸಾಲುಗಳ ಆಸನಗಳನ್ನು …

Read More »

ಐಎಸ್‌ಐಎಸ್‌ ಉಗ್ರನ ಬಂಧನದ ಬಳಿಕ ನೊಯ್ಡಾದಲ್ಲಿ ತೀವ್ರಗೊಂಡ ಭದ್ರತಾ ತಪಾಸಣೆ

ನವದೆಹಲಿ: ಸ್ಫೋಟಕಗಳ ಸಹಿತ ಐಎಸ್‌ಐಎಸ್‌ ಉಗ್ರನೊಬ್ಬನನ್ನು ದೆಹಲಿಯಲ್ಲಿ ಬಂಧಿಸಿದ ಬಳಿಕ ಉತ್ತರ ಪ್ರದೇಶದ ನೊಯ್ಡಾದಲ್ಲಿ ಭದ್ರತಾ ತಪಾಸಣೆ ತೀವ್ರಗೊಳಿಸಲಾಗಿದೆ. ದೆಹಲಿಯಿಂದ ಬರುತ್ತಿರುವ ಮತ್ತು ಅಲ್ಲಿಗೆ ತೆರಳುತ್ತಿರುವ ಎಲ್ಲ ವಾಹನಗಳು, ಪ್ರಯಾಣಿಕರನ್ನು ತಪಾಸಣೆಗೆ ಒಳಪಡಿಸಲಾಗುತ್ತಿದೆ. ಗೌತಮ ಬುದ್ಧ ನಗರ ಜಿಲ್ಲೆಯಲ್ಲೂ ಕಟ್ಟೆಚ್ಚರ ಘೋಷಿಸಲಾಗಿದೆ ಎಂದು ನೊಯ್ಡಾ ಪೊಲೀಸ್ ಆಯುಕ್ತ ರಾಜೇಶ್ ಎಸ್ ಹೇಳಿದ್ದಾರೆ. ಹಿರಿಯ ಪೊಲೀಸ್ ಅಧಿಕಾರಿಗಳು ಸಹ ದೆಹಲಿ ಗಡಿಯಲ್ಲಿ ಭದ್ರತಾ ಪರಿಶೀಲನೆ ನಡೆಸಿದ್ದಾರೆ. ಸುಧಾರಿತ ಸ್ಫೋಟಕಗಳನ್ನು ಹೊಂದಿದ್ದ ಐಎಸ್‌ ಶಂಕಿತ …

Read More »

ಕೊರೊನಾ ಬಳಿಕ ಸಾವಿರಾರು ಕೋಟಿ ರೂಪಾಯಿಗೆ ಏರಿಕೆಯಾಗಿದೆ ಈ ಕ್ಷೇತ್ರದ ವಹಿವಾಟು

ಕೊರೊನಾ ಸೋಂಕು ನಿಯಂತ್ರಣಕ್ಕೆ ಮಾಸ್ಕ್ ಹಾಗೂ ಸ್ಯಾನಿಟೈಜರ್ ಬಳಕೆ ಕಡ್ಡಾಯವಾಗಿದೆ. ಸ್ಯಾನಿಟೈಜರ್ ಬಳಸುವಂತೆ ವೈದ್ಯರು ಸಲಹೆ ನೀಡ್ತಿದ್ದಾರೆ. ಇದ್ರಿಂದ ಸ್ಯಾನಿಟೈಜರ್ ಮಾರಾಟ ವೇಗವಾಗಿ ಹೆಚ್ಚಾಗಿದೆ. ದೇಶದಲ್ಲಿ ಸ್ಯಾನಿಟೈಜರ್ ಮಾರುಕಟ್ಟೆ ಶೇಕಡಾ 7ರಿಂದ 8 ಪಟ್ಟು ಹೆಚ್ಚಳವಾಗಿದೆ. ಮಹಾರಾಷ್ಟ್ರದ ಅಂಗಡಿಯೊಂದರಲ್ಲಿ 2017 ರಲ್ಲಿ 43,000 ರೂಪಾಯಿ ಮೌಲ್ಯದ ಸ್ಯಾನಿಟೈಜರ್ ಮಾರಾಟವಾಗಿತ್ತು 2018 ರಲ್ಲಿ 53,000 ರೂಪಾಯಿ ಮೌಲ್ಯದ ಸ್ಯಾನಿಟೈಜರ್ ಮಾರಾಟವಾಗಿತ್ತು. 2019 ರಲ್ಲಿ ಜನರು 58,000 ರೂಪಾಯಿ ಮೌಲ್ಯದ ಸ್ಯಾನಿಟೈಜರ್ ಖರೀದಿಸಿದ್ದರು. …

Read More »

ಕೊಡಗು ಜಿಲ್ಲೆ ಮಳೆ ವಿವರ, ಹಾರಂಗಿ ಜಲಾಶಯ ನೀರಿನ ಮಟ್ಟ

ಮಡಿಕೇರಿ ಆ. 22: ಕೊಡಗು ಜಿಲ್ಲೆಯಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಸರಾಸರಿ ಮಳೆ 15.12 ಮಿ.ಮೀ ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 9.83 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 1838.93 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 1910.77 ಮಿ.ಮೀ ಮಳೆಯಾಗಿತ್ತು. ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 21.30 ಮಿ.ಮೀ. ಕಳೆದ ವರ್ಷ ಇದೇ ದಿನ 22.75 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 2591.33 …

Read More »

ಯಾವುದೇ ಟೈಂನಲ್ಲೂ ಇವರು ಮಾತ್ರ ಫುಲ್ ಅಲರ್ಟ್: ಬೆಳ್ಳಂಬೆಳಗ್ಗೆ ಗಡಿಯಲ್ಲಿ ಐವರು ಉಡೀಸ್

ನವದೆಹಲಿ: ಇಂದು ಮುಂಜಾನೆ ನಡೆದ ಮಹತ್ವದ ಕಾರ್ಯಾಚರಣೆಯಲ್ಲಿ ಭಾರತ-ಪಾಕಿಸ್ತಾನ ಅಂತಾರಾಷ್ಟ್ರೀಯ ಗಡಿಯ ಬಳಿ ಐವರು ನುಸುಳುಕೋರರನ್ನು ಬಿಎಸ್​ಎಫ್​ ಯೋಧರು ಗುಂಡು ಹೊಡೆದು ಹತ್ಯೆ ಮಾಡಿದ್ದಾರೆ. ಪಂಜಾಬ್​​ ಅಂತಾರಾಷ್ಟ್ರೀಯ ಗಡಿಯ ಬಳಿ ಇಂದು ಮುಂಜಾನೆ ಕೆಲವರು ಅನುಮಾನಾಸ್ಪದವಾಗಿ ಒಳ ನುಸುಳುತ್ತಿರುವುದುನ್ನು ನೋಡಿದ ಗಡಿ ಭದ್ರತಾ ಪಡೆಯ 103ನೇ ಬೆಟಾಲಿಯನ್​ ಯೋಧರು ಅವರನ್ನು ಹತ್ಯೆ ಮಾಡಿದ್ದಾರೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ. ಯೋಧರು ಸುಮ್ಮನೆ ಫೈರಿಂಗ್ ಮಾಡಲಿಲ್ಲ. ಒಳನುಸುಳುತ್ತಿರುವವರನ್ನು ತಡೆಯಲು ಪ್ರಯತ್ನಿಸಿದರು. ಆದರೆ ಅವರೇ …

Read More »

ದುಬೈಗೆ ಹಾರುವ ಮುನ್ನ ‘ಎಂಗೇಜ್’ ಆದ ಆಲ್‌ರೌಂಡರ್ ವಿಜಯ್ ಶಂಕರ್

ಯುವ ಕ್ರಿಕೆಟಿಗ ವಿಜಯ್ ಶಂಕರ್ ನಿಶ್ಚಿತಾರ್ಥವನ್ನು ಮಾಡಿಕೊಂಡಿದ್ದಾರೆ. ಈ ವಿಚಾರವನ್ನು ಸ್ವತಃ ವಿಜಯ್ ಶಂಕರ್ ಇನ್ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಹಾಕುವ ಮೂಲಕ ಘೋಷಿಸಿದ್ದಾರೆ. ನಿಶ್ಚಿತಾರ್ಥದ ಫೋಟೋಗಳನ್ನು ಕೂಡ ಅವರ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಭಾರತೀಯ ಕ್ರಿಕೆಟ್‌ ತಂಡದಲ್ಲಿ ಆಲ್‌ರೌಂಡರ್ ಆಗಿ ಹಲವು ಪಂದ್ಯಗಳಲ್ಲಿ ಕಣಕ್ಕಿಳಿದಿರುವ ವಿಜಯ್ ಶಂಕರ್ ಈ ಬಾರಿಯ ಐಪಿಎಲ್‌ನಲ್ಲೂ ಪಾಲ್ಗೊಳ್ಳಲಿದ್ದಾರೆ. ಐಪಿಎಲ್‌ನಲ್ಲಿ ಸನ್ ರೈಸರ್ಸ್ ತಂಡದ ಪರವಾಗಿ ವಿಜಯ್ ಶಂಕರ್ ಕಣಕ್ಕಿಳಿಯಲಿದ್ದು ದುಬೈಗೆ ಹಾರಲು ಸಜ್ಜಾಗಿದ್ದಾರೆ. ಶಂಕರ್ ತನ್ನ …

Read More »

ಜಲಸಂಪನ್ಮೂಲ ಇಲಾಖೆ ಸಾಧನೆಯ ಕಿರುಹೊತ್ತಿಗೆ ಜಲ ಯಜ್ಞ ಪುಸ್ತಕ ಬಿಡುಗಡೆ

ಜಲಸಂಪನ್ಮೂಲ ಇಲಾಖೆಯ ಒಂದು ವರ್ಷದ ಸಾಧನೆಯ ಕಿರುಹೊತ್ತಿಗೆ *ಜಲ ಯಜ್ಞ* ಪುಸ್ತಕವನ್ನು ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಿ ಎಸ್ ಯಡಿಯೂರಪ್ಪ ಮತ್ತು ಜಲಸಂಪನ್ಮೂಲ ಸಚಿವರಾದ ಶ್ರೀ ರಮೇಶ್ ಜಾರಕಿಹೊಳಿ‌ ಅವರು ಕೃಷ್ಣರಾಜಸಾಗರ ಜಲಾಶಯದ ಕಾವೇರಿ ಪ್ರತಿಮೆಗೆ ಪೂಜೆ ಸಲ್ಲಿಸಿ ಬಿಡುಗಡೆ ಮಾಡಿದರು. ಕಾರ್ಯಕ್ರಮದಲ್ಲಿ ಸಂಪುಟದ ಸಚಿವರು, ಸಂಸದರು, ಶಾಸಕರು‌ ‌ಮತ್ತು ಇತರೆ ಜನಪ್ರತಿನಿಧಿಗಳು, ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Read More »