Breaking News

ವಿಶಾಖಪಟ್ಟಣದಲ್ಲಿ ಕ್ರೇನ್ ಕುಸಿತ, 11 ಮಂದಿ ಸಾವು.

ವಿಶಾಖಪಟ್ಟಣ:- ಆಂಧ್ರಪ್ರದೇಶದ ವಿಶಾಖಪಟ್ಟಣದ ಹಿಂದೂಸ್ಥಾನ್ ಶಿಪ್ ಯಾರ್ಡ್ ನಲ್ಲಿ ಕ್ರೇನ್ ಕುಸಿದು ಭಾರಿ ದುರ್ಘಟನೆ ನಡೆದಿದ್ದು, 11 ಮಂದಿ ಸಾವನ್ನಪ್ಪಿದ್ದಾರೆ.
ಘಟನೆಯಲ್ಲಿ ಇನ್ನೂ ಹಲವರು ಗಾಯಗೊಂಡಿದ್ದು, ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳದಲ್ಲಿ ಇನ್ನೂ ಹಲವರು ಸಿಲುಕಿರುವ ಸಾಧ್ಯತೆಯಿದ್ದು, ತೆರವು ಕಾರ್ಯಾಚರಣೆ ನಡೆಸಲಾಗುತ್ತಿದೆ. ವಿಶಾಖಪಟ್ಟಣದ ಬಂದರಿನ ಹಿಂದೂಸ್ಥಾನ್ ಶಿಪ್ ಯಾರ್ಡ್ ನಲ್ಲಿ ನೂತನ ಕ್ರೇನ್ ಅನ್ನು ನಿಲ್ಲಿಸುತ್ತಿದ್ದಾಗ ಈ ದುರ್ಘಟನೆ ನಡೆದಿದೆ. ಈ ಕ್ರೇನ್ 70 ಟನ್ ತೂಕವಿದೆ. ಕ್ರೇನ್ ಕುಸಿದು ಬಿದ್ದ ಕಾರಣ ಹತ್ತಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಸಾವನ್ನಪ್ಪಿದವರಲ್ಲಿ ನಾಲ್ಕು ಮಂದಿ ಹಿಂದೂಸ್ಥಾನ್ ಶಿಪ್ ಯಾರ್ಡ್ ಲಿಮಿಟೆಡ್ ಕಂಪನಿಗೆ ಸೇರಿದವರಾಗಿದ್ದು, ಉಳಿದವರು ಗುತ್ತಿಗೆ ಸಂಸ್ಥೆಯ ನೌಕರರಾಗಿದ್ದಾರೆ ಎಂದು ಸ್ಥಳೀಯ ಜಿಲ್ಲಾಧಿಕಾರಿ ವಿನಯ್ ಚಂದ್ ಹೇಳಿಕೆ ನೀಡಿದ್ದಾರೆ.

About vijay_shankar

Check Also

test

test

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.