Breaking News

ಎಂಎಲ್‌ಎ ಹೆಸರು ಹೇಳಿಕೊಂಡು ಅಮಾಯಕರಿಂದ ಹಣ ವಸೂಲಿ ಮಾಡುತ್ತಿದ್ದ ನಕಲಿ ಗನ್‌ಮ್ಯಾನ್ ಅಂದರ್!

ಬೆಂಗಳೂರು: ತಾನು ಉತ್ತರ ಕರ್ನಾಟಕ ಕಡೆಯ ಶಾಸಕರೊಬ್ಬರ ಗನ್‌ಮ್ಯಾನ್ ಎಂದು ಸುಳ್ಳು ಹೇಳಿಕೊಂಡು ಅಮಾಯಕರಿಂದ ಹಣ ಪಡೆದು ವಂಚನೆ ಮಾಡುತ್ತಿದ್ದ ಯುವಕನನ್ನು ಉಪ್ಪಾರಪೇಟೆ ಪೊಲೀಸರು ಬಂಧಿಸಿದ್ದಾರೆ.

ಸುಮಾರು ಮೂವತ್ತು ವರ್ಷ ವಯಸ್ಸಿನ ನಾರಾಯಣ ರಾಮಚಂದ್ರ ಹೆಗಡೆ ಎಂಬಾತನೇ ಬಂಧಿತ. ಈತ ಮೂಲತಃ ಉತ್ತರ ಕನ್ನಡ ಜಿಲ್ಲೆಯವನು. ಶಾಸಕರು-ಮಂತ್ರಿಗಳ ಗನ್‌ಮ್ಯಾನ್‌ಗಳಂತೆ ತಾನೂ ಸಫಾರಿ ಸೂಟ್ ಧರಿಸಿ ತಿರುಗಾಡುತ್ತಿದ್ದ. ಸೊಂಟದಲ್ಲಿ ಗನ್ ಪೌಚ್ ನೇತಾಡುತ್ತಿರುತ್ತಿತ್ತು. ಅದರಲ್ಲಿ ಒಂದು ನಕಲಿ ಗನ್ ಕೂಡ ಇಟ್ಟುಕೊಂಡಿರುತ್ತಿದ್ದ. ಇವನನ್ನು ನೋಡಿದವರಿಗೆ ಈತ ನಿಜವಾಗಿಯೂ ಗನ್ ಮ್ಯಾನ್ ಇರಬಹುದು ಎನಿಸುತ್ತಿತ್ತು. 

ಉದ್ಯೋಗ ಹುಡುಕುತ್ತಿದ್ದವರನ್ನು ಪರಚಯಿಸಿಕೊಳ್ಳುತ್ತಿದ್ದ ಈತ, ತಾನು ಶಾಸಕರಿಂದ ಶಿಫಾರಸು ಮಾಡಿಸಿ ಕೆಲಸ ಕೊಡಿಸುವುದಾಗಿ ಲಕ್ಷಾಂತರ ರೂ. ಹಣ ಪಡೆಯುತ್ತಿದ್ದ. ಬೇರೆ ಬೇರೆ ಇಲಾಖೆಗಳಲ್ಲಿ ನಾನಾ ರೀತಿಯ ಕೆಲಸಗಳಿಗಾಗಿ ಅಲೆದಾಡುತ್ತಿದ್ದವರನ್ನು ಸಂಪರ್ಕಿಸಿ, ಬೇಗ ಕೆಲಸ ಮಾಡಿಸಿಕೊಡುವುದಾಗಿ ನಂಬಿಸಿ ಹಣ ಕೀಳುತ್ತಿದ್ದ. ನಂತರ ಅವರ ಕೈಗೆ ಸಿಗದೆ, ಫೋನ್ ಕಾಲ್ ಕೂಡ ಸ್ವೀಕರಿಸದೆ ತಲೆಮರೆಸಿಕೊಳ್ಳುತ್ತಿದ್ದ.

ಜನರಿಗೆ ನಂಬಿಕೆ ಬರಲೆಂದೇ ತನ್ನ ಫೇಸ್‌ಬುಕ್ ಖಾತೆಯಲ್ಲಿ ಈತ ಪೊಲೀಸರ ಜತೆಗಿರುವ ಫೋಟೋಗಳನ್ನು ಹಾಕಿಕೊಂಡಿದ್ದ. ಫೇಸ್‌ಬುಕ್ ಮೂಲಕ ಪರಿಚಯವಾದವರಿಗೂ ಇದೇ ರೀತಿ ನಂಬಿಸಿ ವಂಚಿಸುತ್ತಿದ್ದ. ಫೇಸ್‌ಬುಕ್‌ನಲ್ಲಿ ಈತನ ಫೋಟೋಗಳನ್ನು ನೋಡಿದ ದಾವಣಗೆರೆ ಕಡೆಯವರೊಬ್ಬರು ಈತನಿಗೆ ಹಣ ಕೊಟ್ಟು ಮೋಸ ಹೋಗಿದ್ದರು. ಎಷ್ಟು ಪ್ರಯತ್ನಿಸಿದರೂ ಹಣ ವಾಪಸ್ ಬರದೇ ಇದ್ದಾಗ ಈತನ ವಿರುದ್ಧ ಬೆಂಗಳೂರಿನ ಉಪ್ಪಾರಪೇಟೆ ಪೊಲೀಸರಿಗೆ ದೂರು ನೀಡಿದ್ದರು. ಇನ್ಸ್‌ಪೆಕ್ಟರ್ ಶಿವಸ್ವಾಮಿ ನೇತೃತ್ವದ ತಂಡ ಈ ವಂಚಕನನ್ನು ಸಿಆರ್ ಗಾರ್ಡನ್ ಬಳಿ ಬಂಧಿಸಿದೆ. ಈತ ಇದೇ ರೀತಿ ಹಲವರಿಗೆ ವಂಚಿಸಿರುವ ಸಾಧ್ಯತೆ ಇದ್ದು, ಮೋಸಕ್ಕೆ ಒಳಗಾದವರು ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಪೊಲೀಸರು ಕೋರಿದ್ದಾರೆ.

About vijay_shankar

Check Also

ಪತ್ನಿಯ ಗೆಳತಿಯರು ಮನೆಗೆ ಬರುತ್ತಿದ್ದಂತೆ ಅವರ ಬಟ್ಟೆ ಬಿಚ್ಚುತ್ತಿದ್ದ ಇದಕ್ಕೆ ಪತ್ನಿಯೇ ಸಾತ್ ನೀಡುತ್ತಿದ್ದಳು!

ಬೆಂಗಳೂರು: ಗಂಡನ ಅಣತಿಯಂತೆ ಫೇಸ್ಬುಕ್ನಲ್ಲಿ ಅಮಾಯಕ ಯುವತಿಯರ ಸ್ನೇಹ ಬೆಳೆಸುತ್ತಾಳೆ ಈ ಸುಂದರಿ. ಇದಾದ ಕೆಲವೇ ದಿನದಲ್ಲಿ ಮನೆಯಲ್ಲಿ ಹಬ್ಬ …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.