Breaking News

Recent Posts

ಸಿಬಿಎಸ್‌ಇ 10, 12ನೇ ತರಗತಿಯ ಪರೀಕ್ಷಾ ವೇಳಾಪಟ್ಟಿ ಪ್ರಕಟ

ನವದೆಹಲಿ: ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ(ಸಿಬಿಎಸ್‌ಇ) ಮಂಗಳವಾರ 10 ಮತ್ತು 12ನೇ ತರಗತಿಗಳ ಪರೀಕ್ಷೆಯ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಇದು cbse.nic.in ನಲ್ಲಿ ಲಭ್ಯವಿದೆ. ಪರೀಕ್ಷೆಯು ಆಫ್‌ಲೈನ್ ಲಿಖಿತ ಕ್ರಮದಲ್ಲಿ ನಡೆಯಲಿದ್ದು, ಪ್ರಶ್ನೆಪತ್ರಿಕೆಗಳು ಶೇ.33 ರಷ್ಟು ಆಂತರಿಕ ಆಯ್ಕೆ ಪ್ರಶ್ನೆಗಳನ್ನು ಹೊಂದಿರುತ್ತದೆ. ಪರೀಕ್ಷೆಯ ಪಠ್ಯಕ್ರಮವನ್ನು ಸಹ ಶೇ.30ರವರೆಗೆ ಕಡಿತಗೊಳಿಸಲಾಗಿದೆ. ಮೇ 4 ರಿಂದ ಜೂ.10 ರವರೆಗೆ ನಡೆಯಲಿರುವ ಪರೀಕ್ಷೆಗಳಲ್ಲಿ ಸುಮಾರು 30 ಲಕ್ಷ ವಿದ್ಯಾರ್ಥಿಗಳು ಹಾಜರಾಗುವ ಸಾಧ್ಯತೆ ಇದೆ. ಮಾ. 1 …

Read More »

ರಾಜಕಾರಣಿಗಳ ಸಂಬಂಧಿಕರಿಗೆ,60 ವರ್ಷ ಮೇಲ್ಪಟ್ಟವರಿಗೆ ಬಿಜೆಪಿ ಟಿಕೆಟ್ ಇಲ್ಲ!

ಗುಜರಾತ್​ನ ಬಿಜೆಪಿ ಘಟಕ ಸ್ಥಳೀಯ ಹಾಗೂ ನಾಗರಿಕ ಚುನಾವಣೆಯಲ್ಲಿ ಪಕ್ಷದಿಂದ ನೀಡಲಾಗುವ ಟಿಕೆಟ್​ನ್ನ ಪಡೆಯಬೇಕು ಅಂದರೆ ಕೆಲ ಮಾನದಂಡಗಳನ್ನ ವಿಧಿಸಿದೆ. ಇದರನ್ವಯ 60 ವರ್ಷಕ್ಕಿಂತ ಮೇಲ್ಪಟ್ಟವರು, ಮೂರು ಬಾರಿ ಚುನಾವಣೆಯಲ್ಲಿ ಆಯ್ಕೆಯಾದವರು ಹಾಗೂ ರಾಜಕಾರಣಿಗಳ ಸಂಬಂಧಿಗಳಿಗೆ ಬಿಜೆಪಿ ಟಿಕೆಟ್ ಸಿಗೋದಿಲ್ಲ ಎಂದು ಹೇಳಿದೆ. ಈ ಬಗ್ಗೆ ಸ್ವತಃ ಗುಜರಾತ್ ಬಿಜೆಪಿ ಅಧ್ಯಕ್ಷ ಸಿ.ಆರ್. ಪಾಟೀಲ್ ಅಧಿಕೃತ ಮಾಹಿತಿ ನೀಡಿದ್ದಾರೆ. ಮುಂಬರುವ ಮುನ್ಸಿಪಾಲ್ ಕಾರ್ಪೋರೇಷನ್ ಚುನಾವಣೆ ಸಂಬಂಧ ನಡೆಸಲಾದ ಸಭೆಯಲ್ಲಿ ಬಿಜೆಪಿ …

Read More »

ಕನ್ನಡಿಗರೆಂದರೆ ಒಕ್ಕೂಟ ಸರ್ಕಾರಕ್ಕೆ ತಾತ್ಸಾರ: ಕೇಂದ್ರ ಬಜೆಟ್ ವಿರುದ್ಧ ಕರವೇ ಕಿಡಿ

ಪೆಟ್ರೋಲ್/ಡೀಸೆಲ್ ಬೆಲೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು ಸಾಮಾನ್ಯ ಜನರು ತೊಂದರೆಗೊಳಗಾಗುತ್ತಿದ್ದಾರೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕವನ್ನು ಸಂಪೂರ್ಣ ಕಡೆಗಣಿಸಲಾಗಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ಆರೋಪಿಸಿದೆ. ಈ ಕುರಿತು ಕರವೇ ರಾಜ್ಯಾಧ್ಯಕ್ಷರಾದ ಟಿ.ಎ ನಾರಾಯಣಗೌಡರು ಪತ್ರಿಕಾ ಹೇಳಿಕೆ ನೀಡಿದ್ದು, ಕನ್ನಡಿಗರು ಈಗಲಾದರೂ ಎಚ್ಚೆತ್ತುಕೊಳ್ಳಬೇಕು ಎಂದು ಕರೆ ನೀಡಿದ್ದಾರೆ. ಹೇಳಿಕೆಯಲ್ಲಿ “ಕರ್ನಾಟಕಕ್ಕೆ ಅನ್ಯಾಯದ ಸರಣಿ ಮುಂದುವರೆದಿದೆ, ಒಕ್ಕೂಟ ಸರ್ಕಾರದ 2021-22 ಬಜೆಟ್ ನಲ್ಲಿ ಕಳೆದ …

Read More »