Breaking News

Recent Posts

ವಿಮ್ಸ್ ಆಸ್ಪತ್ರೆ : ಬಿಪಿಎಲ್ ಕಾರ್ಡಗೂ ಬೆಲೆ ಇಲ್ಲ??ಬಡವರಿಗೆ ಉಚಿತ ಚಿಕಿತ್ಸೆ ನೀಡದ ಸರ್ಕಾರಗಳು.!!

ಬಳ್ಳಾರಿ ; ರಾಜ್ಯ ಕೇಂದ್ರ ಸರ್ಕಾರ ಗಳು,ಬಡವರ ಪರವಾಗಿ ಇದ್ದಿವಿ,ಎಂದು ಬೊಬ್ಬೆ ಹೊಡಿಯುತ್ತವೆ. ಬಡವರ ಆರೋಗ್ಯ ವಿಚಾರ ದಲ್ಲಿ ಕೇಂದ್ರ ರಾಜ್ಯ ಸರ್ಕಾರ ಗಳು ಉಚಿತ ಚಿಕಿತ್ಸೆಗಾಗಿ ಅರೋಗ್ಯ ಕಾರ್ಡುಗಳನ್ನು ಜಾರಿಗೆ ತಂದಿವೆ. ಆದರೂ ಬಡವರು ಹಣ ತೆತ್ತು ಚಿಕಿತ್ಸೆ ಮಾಡಿಸಿಕೊಳ್ಳಲು ಸಾಧ್ಯವಾಗದೆ ಅನೇಕ ಸಾವುಗಳು ಸಂಭವಿಸಿದ್ದು ತಿಳಿದ ಸಂಗತಿ ಆಗಿದೆ. ಇನ್ನೂ ಸರ್ಕಾರಿ ಆಸ್ಪತ್ರೆಗಳಲ್ಲಿ ಕೆಲಸ ಮಾಡುವ ವೈದ್ಯರು ಅಲ್ಲಿಗೆ ಬರುವ ರೋಗಿಗಳನ್ನು ನಿರಾಯಾಸವಾಗಿ ಖಾಸಗಿ ಆಸ್ಪತ್ರೆಗಳಿಗೆ ರೆಫರ್ …

Read More »

21ನೇ ವಯಸ್ಸಿನಲ್ಲೇ ಮೇಯರ್‌ ಸ್ಥಾನ!

ತಿರುವನಂತಪುರ: ಇಲ್ಲಿನ ಮಹಾನಗರ ಪಾಲಿಕೆ ಮೇಯರ್‌ ಆಗಿ 21 ವರ್ಷದ ಆರ್ಯ ರಾಜೇಂದ್ರನ್‌ ಆಯ್ಕೆಯಾಗಿದ್ದು, ಅತಿ ಕಡಿಮೆ ವಯಸ್ಸಿನಲ್ಲೇ ಈ ಹುದ್ದೆಗೇರಿದ ಖ್ಯಾತಿಗೆ ಅವರು ಪಾತ್ರರಾಗಿದ್ದಾರೆ. ಮೇಯರ್‌ ಹುದ್ದೆಗೆ ಸೋಮವಾರ ನಡೆದ ಚುನಾವಣೆ ವೇಳೆ ತ್ರಿಕೋನ ಸ್ಪರ್ಧೆಯಲ್ಲಿ ಕಾಲೇಜು ವಿದ್ಯಾರ್ಥಿನಿಯಾಗಿರುವ, ಸಿಪಿಐ-ಎಂ ಸದಸ್ಯೆ ಆರ್ಯ ಗೆದ್ದಿದ್ದು, ಪ್ರಮಾಣವಚನ ಸ್ವೀಕರಿಸಿದರು. 100 ಸದಸ್ಯರ ಪಾಲಿಕೆಯಲ್ಲಿ ಮೇಯರ್‌ ಗದ್ದುಗೆ ಹಿಡಿಯಲು, ಬಿಜೆಪಿ ನೇತೃತ್ವದ ಎನ್‌ಡಿಎ ಹಾಗೂ ಕಾಂಗ್ರೆಸ್‌ ನೇತೃತ್ವದ ಯುಡಿಎಫ್‌ ಕೂಡಾ ಅಭ್ಯರ್ಥಿಗಳನ್ನು ಕಣಕ್ಕೆ …

Read More »

ರೈಲಿಗೆ ತಲೆಕೊಟ್ಟು ಉಪಸಭಾಪತಿ ಧರ್ಮೇಗೌಡ ಆತ್ಮಹತ್ಯೆ

ಚಿಕ್ಕಮಗಳೂರು: ಉಪಸಭಾಪತಿ ಎಸ್.ಎಲ್. ಧರ್ಮೇಗೌಡ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜೆಡಿಎಸ್ ಪಕ್ಷದಿಂದ ವಿಧಾನಪರಿಷತ್ ಸದಸ್ಯರಾಗಿದ್ದ ಅವರು ಚಿಕ್ಕಮಗಳೂರು ಜಿಲ್ಲೆ ಗುಣಸಾಗರದಲ್ಲಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದೇವೇಗೌಡರ ಕುಟುಂಬಕ್ಕೆ ಧರ್ಮೇಗೌಡರು ಆಪ್ತರಾಗಿದ್ದರು. ರಾತ್ರಿ 11:30 ರ ಸುಮಾರಿಗೆ ಘಟನೆ ನಡೆದಿದೆ. ರಾತ್ರಿ 10 ಗಂಟೆಗೆ ಒಬ್ಬರೇ ಮನೆಯಿಂದ ಕಾರ್ ನಲ್ಲಿ ತೆರಳಿದ್ದ ಅವರು ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Read More »