Breaking News

Recent Posts

ಪ್ರವಾಸಿಗರ ಹುಚ್ಚಾಟ: ವಾರಾಂತ್ಯಕ್ಕೆ ಸುರಕ್ಷತೆ ಇಲ್ಲದೆ ಜನಜಾತ್ರೆ!

ಬೆಂಗಳೂರು: ಕೊರೋನಾ ಹಿನ್ನೆಲೆಯಲ್ಲಿ ಭಣಗುಡುತ್ತಿದ್ದ ರಾಜ್ಯದ ಪ್ರಮುಖ ಪ್ರವಾಸಿತಾಣಗಳಲ್ಲೀಗ ಮತ್ತೆ ಪ್ರವಾಸಿಗರ ಕಲರವ ಆರಂಭವಾಗಿದೆ. ಲಾಕ್‌ಡೌನ್‌ ನಿಯಮಾವಳಿ ಸಡಿಲಗೊಳ್ಳುತ್ತಿದ್ದಂತೆ ಬೆಂಗಳೂರಿನ ನಂದಿಬೆಟ್ಟ, ಚಿಕ್ಕಮಗಳೂರಿನ ಮುಳ್ಳಯ್ಯನಗಿರಿ ಸೇರಿ ರಾಜ್ಯದ ಪ್ರಮುಖ ಪ್ರವಾಸಿ ತಾಣಗಳಲ್ಲಿ ವಾರಾಂತ್ಯದಲ್ಲಿ ಪ್ರವಾಸಿಗರ ಭಾರೀ ದಂಡು ಕಾಣಸಿಗುತ್ತಿದೆ. ಈ ಮೂಲಕ ಪ್ರವಾಸೋದ್ಯಮ ಕ್ಷೇತ್ರ, ರಾಜ್ಯದ ಆರ್ಥಿಕತೆಯ ಚೇತರಿಕೆಯ ಮುನ್ಸೂಚನೆ ನೀಡುತ್ತಿದೆ. ಆದರೆ, ಈ ವೇಳೆ ಕೋವಿಡ್‌ ನಿಯಮಾವಳಿ ಗಾಳಿಗೆ ತೂರಿ ಗುಂಪುಸೇರುವುದು, ಮಾಸ್ಕ್‌ ಧರಿಸದೆ ಸುತ್ತಾಡುವಂಥ ಹುಚ್ಚಾಟವೂ ಪ್ರವಾಸಿಗರಿಂದ …

Read More »

ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ನಿಧನ

ನವದೆಹಲಿ : ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ಇಂದು ನಿಧನರಾಗಿದ್ದಾರೆ. ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಕೆಲ ಕಾಲದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಉಪಚಾರ ಫಲಿಸದೆ ಇಂದು ನಿಧನರಾಗಿದ್ದಾರೆ. ಈ ಕುರಿತು ಅವರ ಪುತ್ರ ಚಿರಾಗ್ ಪಾಸ್ವಾನ್ ಟ್ವೀಟ್ ಮೂಲಕ ವಿಷಯವನ್ನು ಬಹಿರಂಗಪಡಿಸಿದ್ದಾರೆ. 8 ಎಂಟು ಬಾರಿ ಸಂಸದರಾಗಿ ಆಯ್ಕೆಯಾಗಿದ್ದರೆ ರಾಮ್ ವಿಲಾಸ್ ಪಾಸ್ವಾನ್ ಹಲವು ಬಾರಿ ಕೇಂದ್ರದಲ್ಲಿ ಸಚಿವರಾಗಿದ್ದರು. ದಲಿತ ನಾಯಕರಾಗಿದ್ದ ರಾಮ್ ವಿಲಾಸ್ ಪಾಸ್ವಾನ್ ಬಿಹಾರದ …

Read More »

ಸ್ವಸಹಾಯ ಗುಂಪುಗಳ ಮಹಿಳೆಯರಿಗೆ ಗುಡ್ ನ್ಯೂಸ್

ಬೆಂಗಳೂರು: ರಾಜ್ಯದಲ್ಲಿ ಸ್ವಸಹಾಯ ಗುಂಪುಗಳು ತಯಾರಿಸುವ ಉತ್ಪನ್ನಗಳ ಮಾರಾಟಕ್ಕೆ ಅಮೆಜಾನ್ ವೇದಿಕೆ ಒದಗಿಸಲಿದೆ. ಅಮೆಜಾನ್ ಕಂಪನಿ ಸಾರ್ವಜನಿಕ ಕಾರ್ಯನೀತಿ ವಿಭಾಗದ ಉಪಾಧ್ಯಕ್ಷ ಚೇತನ್ ಕೃಷ್ಣಸ್ವಾಮಿ ಉಪಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವಥ್ ನಾರಾಯಣ ಅವರೊಂದಿಗೆ ನಡೆಸಿದ ಸಭೆಯಲ್ಲಿ ಈ ಕುರಿತಂತೆ ಭರವಸೆ ನೀಡಿದ್ದಾರೆ. ರಾಜ್ಯದಲ್ಲಿ 1.5 ಲಕ್ಷ ಸ್ವಸಹಾಯ ಗುಂಪುಗಳು ಇದ್ದು ನಾನಾ ಉತ್ಪನ್ನಗಳನ್ನು ತಯಾರಿಸುತ್ತಿವೆ. ಇವುಗಳಿಗೆ ಇ -ಕಾಮರ್ಸ್ ವೇದಿಕೆ ಒದಗಿಸಿ ಉತ್ಪನ್ನ ಮಾರಾಟಕ್ಕೆ ಅನುಕೂಲ ಮಾಡಿಕೊಡಬೇಕಿದೆ ಎಂದು ಡಿಸಿಎಂ ಹೇಳಿದ್ದಾರೆ. ಗ್ರಾಮೀಣ …

Read More »