Breaking News

Recent Posts

ಅಕ್ರಮಗಳ ಬಗ್ಗೆ ಸುದ್ದಿ ಪ್ರಕಟಿಸುವುದು ವರದಿಗಾರನ ಮೂಲಭೂತ ಹಕ್ಕು: ಕೊಲ್ಕತ್ತಾ ಹೈಕೋರ್ಟ್

ಕೊಲ್ಕತ್ತಾ: ಯಾವುದೇ ಅಕ್ರಮ ಚಟುವಟಿಕೆಗಳ ಬಗ್ಗೆ, ಪ್ರಾಮಾಣಿಕವಾಗಿ ಸುದ್ದಿಗಳನ್ನ ಪ್ರಕಟಿಸುವುದು ವರದಿಗಾರನ ಮೂಲಭೂತ ಹಕ್ಕು. ಸರಿಯಾದ ರೀತಿಯ ವರದಿಗಾರಿಕೆಯಿಂದ ಸರ್ಕಾರ ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಲು ಸಹಾಯ ಮಾಡುತ್ತದೆ ಎಂದು ಕೊಲ್ಕತ್ತಾ ಹೈಕೋರ್ಟ್ ಹೇಳಿದೆ. ಖಾಸಗಿ ಪತ್ರಕರ್ತರೊಬ್ಬರು ತಮ್ಮ ವಿರುದ್ಧ ದಾಖಲಾಗಿದ್ದ ಪ್ರಕರಣದಲ್ಲಿ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಇದರ ವಿಚಾರಣೆ ವೇಳೆ ಕೋರ್ಟ್ ಈ ರೀತಿ ಅಭಿಪ್ರಾಯಪಟ್ಟಿದೆ. ಅಕ್ರಮ ಮರಳು‌ ಗಣಿಗಾರಿಕೆ ಬಗ್ಗೆ ಖಾಸಗಿ ವಾಹಿನಿಯ ಪತ್ರಕರ್ತರೊಬ್ಬರು ಸುದ್ದಿ …

Read More »

ಮೈದುಂಬಿದ ಘಟಪ್ರಭೆ: ಮಿರ್ಜಿ-ಮಹಾಲಿಂಗಪುರ ರಸ್ತೆ ಸಂಪರ್ಕ ಕಡಿತ

ಬಾಗಲಕೋಟೆ: ಬೆಳಗಾವಿ ಜಿಲ್ಲೆಯಲ್ಲಿ ಕಳೆದೆರಡು ದಿನಗಳಿಂದ ಸುರಿಯುತ್ತಿರುವ ವ್ಯಾಪಕ ಮಳೆಯಿಂದ ಘಟಪ್ರಭಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಇದರಿಂದ ಮುಧೋಳ ತಾಲ್ಲೂಕಿನ ಮಿರ್ಜಿ- ಮಹಲಿಂಗಪುರ ನಡುವಿನ ಘಟಪ್ರಭಾ ನದಿಯ ಹಳೆ ರಸ್ತೆಯ ಸೇತುವೆ ಜಲಾವೃತವಾಗಿದೆ. ಮಿರ್ಜಿ, ಚನಾಳ, ಮಲ್ಲಾಪುರ ಒಂಟಗೋಡಿ ಗ್ರಾಮಗಳಿಂದ ಮಹಾಲಿಂಗಪುರ ಪಟ್ಟಣಕ್ಕೆ ರಸ್ತೆ ಸಂಪರ್ಕ ಕಡಿತಗೊಂಡಿದೆ. ಸೇತುವೆ ಮೇಲೆ ಐದು ಅಡಿಯಷ್ಟು ನೀರು ಹರಿಯುತ್ತಿದೆ.

Read More »

ಜಮ್ಮು-ಕಾಶ್ಮೀರದ ಬಗ್ಗೆ ಚೀನಾ ಹೇಳಿಕೆ: ಆಂತರಿಕ ವಿಷಯದಲ್ಲಿ ಮಾತನಾಡದಂತೆ ಭಾರತದ ಎಚ್ಚರಿಕೆ

ನವದೆಹಲಿ: ಭಾರತದ ಕೇಂದ್ರಾಡಳಿತ ಪ್ರದೇಶವಾಗಿರುವ ಜಮ್ಮು-ಕಾಶ್ಮೀರದ ಬಗ್ಗೆ ಚೀನಾ ವಿದೇಶಾಂಗ ಇಲಾಖೆ ಕಾಮೆಂಟ್ ಮಾಡಿದ್ದು ಭಾರತ ಎಚ್ಚರಿಕೆ ನೀಡಿದೆ. ಚೀನಾದ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಭಾರತದ ವಿದೇಶಾಂಗ ಸಚಿವಾಲಯದ ವಕ್ತಾರರಾದ ಅನುರಾಗ್ ಶ್ರೀವಾಸ್ತವ ಭಾರತದ ಆಂತರಿಕ ವಿಚಾರಗಳ ಬಗ್ಗೆ ಮಾತನಾಡದೇ ಇರುವಂತೆ ಚೀನಾಗೆ ಸಲಹೆ ನೀಡಿರುವುದಾಗಿ ಹೇಳಿದ್ದಾರೆ. ಜಮ್ಮು-ಕಾಶ್ಮೀರದ ಬಗ್ಗೆ ಚೀನಾದ ಹೇಳಿಕೆಗಳನ್ನು ಗಮನಿಸಿದ್ದೇವೆ, ಈ ವಿಚಾರವಾಗಿ ಮಾತನಾಡುವುದಕ್ಕೆ ಚೀನಾಗೆ ಮಾನ್ಯತೆ ಇಲ್ಲ. ಬೇರೆ ರಾಷ್ಟ್ರಗಳ ಆಂತರಿಕ ವಿಚಾರಗಳಲ್ಲಿ ಮಾತನಾಡದಂತೆ ಚೀನಾಗೆ …

Read More »