Breaking News

Recent Posts

ಮೈದುಂಬಿದ ಘಟಪ್ರಭೆ: ಮಿರ್ಜಿ-ಮಹಾಲಿಂಗಪುರ ರಸ್ತೆ ಸಂಪರ್ಕ ಕಡಿತ

ಬಾಗಲಕೋಟೆ: ಬೆಳಗಾವಿ ಜಿಲ್ಲೆಯಲ್ಲಿ ಕಳೆದೆರಡು ದಿನಗಳಿಂದ ಸುರಿಯುತ್ತಿರುವ ವ್ಯಾಪಕ ಮಳೆಯಿಂದ ಘಟಪ್ರಭಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಇದರಿಂದ ಮುಧೋಳ ತಾಲ್ಲೂಕಿನ ಮಿರ್ಜಿ- ಮಹಲಿಂಗಪುರ ನಡುವಿನ ಘಟಪ್ರಭಾ ನದಿಯ ಹಳೆ ರಸ್ತೆಯ ಸೇತುವೆ ಜಲಾವೃತವಾಗಿದೆ. ಮಿರ್ಜಿ, ಚನಾಳ, ಮಲ್ಲಾಪುರ ಒಂಟಗೋಡಿ ಗ್ರಾಮಗಳಿಂದ ಮಹಾಲಿಂಗಪುರ ಪಟ್ಟಣಕ್ಕೆ ರಸ್ತೆ ಸಂಪರ್ಕ ಕಡಿತಗೊಂಡಿದೆ. ಸೇತುವೆ ಮೇಲೆ ಐದು ಅಡಿಯಷ್ಟು ನೀರು ಹರಿಯುತ್ತಿದೆ.

Read More »

ಜಮ್ಮು-ಕಾಶ್ಮೀರದ ಬಗ್ಗೆ ಚೀನಾ ಹೇಳಿಕೆ: ಆಂತರಿಕ ವಿಷಯದಲ್ಲಿ ಮಾತನಾಡದಂತೆ ಭಾರತದ ಎಚ್ಚರಿಕೆ

ನವದೆಹಲಿ: ಭಾರತದ ಕೇಂದ್ರಾಡಳಿತ ಪ್ರದೇಶವಾಗಿರುವ ಜಮ್ಮು-ಕಾಶ್ಮೀರದ ಬಗ್ಗೆ ಚೀನಾ ವಿದೇಶಾಂಗ ಇಲಾಖೆ ಕಾಮೆಂಟ್ ಮಾಡಿದ್ದು ಭಾರತ ಎಚ್ಚರಿಕೆ ನೀಡಿದೆ. ಚೀನಾದ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಭಾರತದ ವಿದೇಶಾಂಗ ಸಚಿವಾಲಯದ ವಕ್ತಾರರಾದ ಅನುರಾಗ್ ಶ್ರೀವಾಸ್ತವ ಭಾರತದ ಆಂತರಿಕ ವಿಚಾರಗಳ ಬಗ್ಗೆ ಮಾತನಾಡದೇ ಇರುವಂತೆ ಚೀನಾಗೆ ಸಲಹೆ ನೀಡಿರುವುದಾಗಿ ಹೇಳಿದ್ದಾರೆ. ಜಮ್ಮು-ಕಾಶ್ಮೀರದ ಬಗ್ಗೆ ಚೀನಾದ ಹೇಳಿಕೆಗಳನ್ನು ಗಮನಿಸಿದ್ದೇವೆ, ಈ ವಿಚಾರವಾಗಿ ಮಾತನಾಡುವುದಕ್ಕೆ ಚೀನಾಗೆ ಮಾನ್ಯತೆ ಇಲ್ಲ. ಬೇರೆ ರಾಷ್ಟ್ರಗಳ ಆಂತರಿಕ ವಿಚಾರಗಳಲ್ಲಿ ಮಾತನಾಡದಂತೆ ಚೀನಾಗೆ …

Read More »

ಎಲ್ಲ ಪ್ರಕಾರಗಳ ವೀಸಾದಾರರಿಗೆ ಭಾರತದಿಂದ ಯುಎಇಗೆ ಪ್ರಯಾಣಿಸಲು ಶೀಘ್ರ ಅವಕಾಶ

ದುಬೈ (ಯುಎಇ), ಆ. 5: ಎಲ್ಲ ಪ್ರಕಾರಗಳ ವೀಸಾ ಹೊಂದಿರುವವರು ಭಾರತದಿಂದ ಯುಎಇಗೆ ಪ್ರಯಾಣಿಸಲು ಅವಕಾಶ ನೀಡುವುದಕ್ಕೆ ಸಂಬಂಧಿಸಿದ ನಿರ್ಧಾರವೊಂದನ್ನು ಶೀಘ್ರವೇ ನಿರೀಕ್ಷಿಸಲಾಗಿದೆ ಎಂದು ಯುಎಇಗೆ ಭಾರತದ ರಾಯಭಾರಿ ಪವನ್ ಕಪೂರ್ ಹೇಳಿದ್ದಾರೆ. ”ಹೊಸ ವೀಸಾಗಳ ವಿತರಣೆಯನ್ನು ಯುಎಇ ಇತ್ತೀಚೆಗೆ ಆರಂಭಿಸಿರುವುದರಿಂದ, ಸೂಕ್ತ ವೀಸಾಗಳನ್ನು ಹೊಂದಿರುವ ಭಾರತೀಯರಿಗೆ ಯುಎಇಗೆ ಪ್ರಯಾಣಿಸಲು ಅವಕಾಶ ನೀಡುವ ಬಗ್ಗೆ ಪರಿಶೀಲಿಸುವಂತೆ ನಾವು ಭಾರತದ ಅಧಿಕಾರಿಗಳಿಗೆ ಶಿಫಾರಸು ಮಾಡಿದ್ದೇವೆ. ಈ ಬಗ್ಗೆ ಶೀಘ್ರ ನಿರ್ಧಾರ ಹೊರಬೀಳುವ …

Read More »