Breaking News

Recent Posts

ಸಚಿವೆ ಕಮಲಾರಾಣಿ ಕೋವಿಡ್ ಗೆ ತುತ್ತಾಗಿ ಸಾವು.

ಲಕ್ನೋ:- ಕೋವಿಡ್ ಸೋಂಕಿಗೆ ತುತ್ತಾಗಿದ್ದ ಉತ್ತರ ಪ್ರದೇಶದ ಸಚಿವೆ ಕಮಲ ರಾಣಿ ಇಂದು ಮುಂಜಾನೆ ಲಕ್ನೋ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಇವರಿಗೆ 62 ವರ್ಷ ವಯಸ್ಸಾಗಿತ್ತು.ಯೋಗಿ ಆದಿತ್ಯನಾಥ್ ನೇತೃತ್ವದ ಉತ್ತರ ಪ್ರದೇಶ ಸರ್ಕಾರದಲ್ಲಿ ಕಮಲಾ ರಾಣಿ ವರುಣ್ ತಾಂತ್ರಿಕ ಶಿಕ್ಷಣ ಸಚಿವರಾಗಿ ಸೇವೆ ಸಲ್ಲಿಸುತ್ತಿದ್ದರು. ಇವರಿಗೆ ಜುಲೈ 18 ರಂದು ಕೋವಿಡ್ ಪಾಸಿಟಿವ್ ವರದಿ ಬಂದು ರಾಜಧಾನಿ ಕೋವಿಡ್ ಹಾಸ್ಪತ್ರೆಗೆ ದಾಖಲಾಗಿದ್ದರು.ಕೋವಿಡ್ ಮಾತ್ರವಲ್ಲದೆ ಶ್ವಾಸಕೋಶ ಸೋಂಕು ಆಗಿದ್ದರಿಂದ ಕಳೆದ ಹಲವು ದಿನಗಳಿಂದ …

Read More »

ಯೋಗೇಶ್ವರ್ ಗೆ ವಾರ್ನಿಂಗ್ ನೀಡಿದ ಬಿಎಸ್ವೈ.

ಬೆಂಗಳೂರು:- ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ, ಕೆಪಿಸಿಸಿ ಅಧ್ಯಕ್ಷ ಡಿಕೆಶಿ ವಿರುದ್ಧ ಅಡ್ಜೆಸ್ಟ್ ಮೆಂಟ್ ಪಾಲಿಟಿಕ್ಸ್ ಆರೋಪ ಮಾಡಿರುವ ಸಿ.ಪಿ.ಯೋಗೇಶ್ವರ್‌ಗೆ ಸಿಎಂ ಯಡಿಯೂರಪ್ಪ ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ. ಪಕ್ಷ, ಸರ್ಕಾರಕ್ಕೆ ಮುಜುಗರ ಆಗುವಂಥ ಹೇಳಿಕೆ ಕೊಡಬೇಡಿ. ಕೊರೊನಾ ಸಮಯದಲ್ಲಿ ಅನಗತ್ಯ ಹೇಳಿಕೆ ಕೊಡಬೇಡಿ. ನಿಮ್ಮ ಕಿತ್ತಾಟ ಕ್ಷೇತ್ರದ ಮಟ್ಟಿಗೆ ಇಟ್ಕೊಳ್ಳಿ. ಸುಮ್ನೆ ನಿಮ್ ಜಂಜಾಟದಲ್ಲಿ ನಮ್ಮನ್ನ್ಯಾಕೆ ಎಳೀತೀರಾ ಅಂದಿದ್ದಾರೆ ಎಂದು ಬಿಎಸ್ವೈ ಕಚೇರಿಯ ಮೂಲದಿಂದ ತಿಳಿದಿದೆ.ಸಚಿವ ಸಂಪುಟ ವಿಸ್ತರಣೆ ಚರ್ಚೆ …

Read More »

ಮಂಡ್ಯ: ಅತ್ಯಾಚಾರವೆಸಗಿದ ಯುವಕನನ್ನು ಕೊಂದ ಬಾಲಕಿಯ ಪೋಷಕರು.

ಏಳು ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ಯುವಕನನ್ನು ಆಕೆಯ ಪೋಷಕರು ಹೊಡೆದು ಕೊಂದ ಘಟನೆ ಮಂಡ್ಯದ ಎಸ್.ಐ ಕೋಡಿಹಳ್ಳಿ ಗ್ರಾಮದಲ್ಲಿ ನಡೆದಿದೆ.ಭೈರಪ್ಪ(30) ಮೃತಪಟ್ಟ ಯುವಕ. ಈತ 7 ವರ್ಷದ ಬಾಲಕಿಯೊಬ್ಬಳಿಗೆ ಚಾಕಲೇಟ್ ನೀಡುವ ಆಮಿಷವೊಡ್ಡಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ. ಈ ವಿಚಾರ ತಿಳಿದು ರೊಚ್ಚಿಗೆದ್ದ ಆಕೆಯ ಪೋಷಕರು ಆತನ ಮೇಲೆ ಹಲ್ಲೆ ನಡೆಸಿದ್ದಾರೆ. ತೀವ್ರವಾಗಿ ಗಾಯಗೊಂಡ ಯುವಕನನ್ನು ಆಸ್ಪತ್ರೆಗೆ ದಾಖಲಿಸಿದ್ದರೂ ಚಿಕಿತ್ಸೆ ಫಲಕಾರಿಯಾಗದೆ ಆತ ಸಾವನಪ್ಪಿದ್ದಾನೆ. ಈ …

Read More »