ಇಲಕಲ್ಲ : ತಾಲೂಕಿನ ವಲಯದಲ್ಲಿ ಮದ್ಯವರ್ಜನ ತಾಲೂಕಿನ ಪೂರ್ವಭಾವಿ ಸಭೆಯನ್ನು ಇಲಕಲ್ಲ ನಗರದ ಶ್ರೀ ಮಠದ ದಾಸೋಹ ಭವನದಲ್ಲಿ ನಡೆಯಿತು. ಈ ಸಭೆಯಲ್ಲಿ ಶ್ರೀ ಮ. ನಿ. ಪ್ರ. ಗುರು ಮಹಾಂತ ಸ್ವಾಮಿಗಳು ಚಿತ್ತರಗಿ ಸಂಸ್ಥಾನ ಮಠ ಇಲಕಲ್ಲ ಇವರು ಉಪಸ್ಥಿತಿಯಲ್ಲಿ ನಡೆಯಿತು.

ಈ ಸಭೆಯಲ್ಲಿ ನಗರಸಭೆ ಮಾಜಿ ಅಧ್ಯಕ್ಷರು, ನಗರದ ಗಣ್ಯವ್ಯಕ್ತಿಗಳು ಮತ್ತು ಜಿಲ್ಲಾ ಜನಜಾಗೃತಿ ಸದಸ್ಯರು ಮತ್ತು ಸಮಾಜ ಸೇವಕರು ಹಾಗೂ ಇತರ ಸಂಘ ಸಂಸ್ಥೆಗಳ ಸದಸ್ಯರು ಭಾಗಿಯಾಗಿದ್ದರು.

ಅಲ್ಲದೆ ಈ ಸಭೆಯಲ್ಲಿ ಶ್ರೀ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕರಾದ ವಿಠ್ಠಲ ಸಾಲಿಯಾನ್ ಯೋಜನಾಧಿಕಾರಿಯಾದ ಸಂತೋಷ, ಮತ್ತು ಒಕ್ಕೂಟದ ಅಧ್ಯಕ್ಷರು ಉಪಾಧ್ಯಕ್ಷರು ಉಪ ಸಮಿತಿಯ ಸದಸ್ಯರು ವಲಯದ ಮೇಲ್ವಿಚಾರಕರು ಮತ್ತು ಸೇವಾ ಪ್ರತಿನಿಧಿಗಳು ಪಾಲ್ಗೊಂಡಿದ್ದರು.