Breaking News

ಡಿಸಿಎಂ ಸ್ಥಾನಕ್ಕೆ ರಮೇಶ್ ಜಾರಕಿಹೊಳಿ ತೀವ್ರ ಕಸರತ್ತು, ಬೇಡಿಕೆಗೆ ಮಣಿಯುತ್ತಾ ಹೈಕಮಾಂಡ್ ?

ಉಪಮುಖ್ಯಮಂತ್ರಿ ಸ್ಥಾನಕ್ಕೆ ಸಚಿವ ರಮೇಶ್ ಜಾರಕಿಹೊಳಿ ತೀವ್ರ ಕಸರತ್ತು ನಡೆಸುತ್ತಿದ್ದಾರೆ. ಈಗಾಗಲೇ ದೆಹಲಿಗೆ ತೆರಳಿ ಒಂದು ಸುತ್ತಿನ ಮಾತುಕತೆ ನಡೆಸಿರುವ ಅವರು ಮತ್ತೊಮ್ಮೆ ದೆಹಲಿಗೆ ತೆರಳುವ ಸಾಧ್ಯತೆ ಇದೆ ಎಂಬ ಮಾಹಿತಿ ಲಭ್ಯವಾಗಿದೆ.

ಬೆಂಗಳೂರು: ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಗೊಂದಲದ ನಡುವೆ ಡಿಸಿಎಂ ಸ್ಥಾನಕ್ಕಾಗಿ ಪೈಪೋಟಿಯೂ ತೀವ್ರಗೊಂಡಿದೆ. ಈಗಾಗಲೇ ರಾಜ್ಯದಲ್ಲಿ ಮೂವರು ಡಿಸಿಎಂಗಳಿದ್ದು ಈ ನಡುವೆ ರಮೇಶ್ ಜಾರಕಿಹೊಳಿ ಕೂಡಾ ಉಪಮುಖ್ಯಮಂತ್ರಿ ಸ್ಥಾನದ ಮೇಲೆ ಕಣ್ಣಿಟ್ಟಿದ್ದಾರೆ. ಕುರ್ಚಿ ಪಡೆದುಕೊಳ್ಳಲು ಹೈಕಮಾಂಡ್‌ ಮಟ್ಟದಲ್ಲೇ ರಮೇಶ್ ಕಸರತ್ತು ಮುಂದುವರಿಸಿದ್ದಾರೆ.

ಡಾ. ಆಶ್ವತ್ಥನಾರಾಯಣ, ಲಕ್ಷ್ಮಣ ಸವದಿ ಹಾಗೂ ಗೋವಿಂದ ಕಾರಜೋಳ ಪೈಕಿ ಸವದಿ ಸ್ಥಾನ ಬದಲಾವಣೆಯ ಚರ್ಚೆಗಳು ಪಕ್ಷದ ಆಂತರಿಕ ವಲಯದಲ್ಲಿ ನಡೆಯುತ್ತಿದೆ. ಆದರೆ ಸ್ಥಾನ ಭದ್ರಪಡಿಸಿಕೊಳ್ಳಲು ಸವದಿ ಪ್ರಯತ್ನ ನಡೆಸುತ್ತಿದ್ದಾರೆ. ಈ ನಡುವೆ ವರಿಷ್ಠರ ಬೆಂಬಲ ಸವದಿಗೆ ಇದ್ದು ಇದರಿಂದಾಗಿ ಡಿಸಿಎಂ ಕೈತಪ್ಪುವ ಸಾಧ್ಯತೆ ಕಡಿಮೆ ಎನ್ನಲಾಗುತ್ತಿದೆ.

ಡಿಜೆ ಹಳ್ಳಿ ಗಲಭೆ: ಬಿಎಸ್‌ವೈಗೆ ಡಿ.ಕೆ ಶಿವಕುಮಾರ್ ಬರೆದ ಪತ್ರದಲ್ಲೇನಿದೆ?

ಇನ್ನು ಆಪರೇಷನ್ ಕಮಲದಲ್ಲಿ ಪ್ರಮುಖ ಪಾತ್ರ ವಹಿಸಿದ್ದ ರಮೇಶ್ ಜಾರಕಿಹೊಳಿ ಕಾಂಗ್ರೆಸ್‌ನಲ್ಲಿದ್ದಾಗಲೂ ಸಚಿವರಾಗಿದ್ದರು. ಇದೀಗ ಬಿಜೆಪಿಗೆ ಬಂದು ತಮ್ಮ ಬೇಡಿಕೆಯ ಖಾತೆಯನ್ನು ಪಡೆಕೊಳ್ಳುವಲ್ಲಿ ಸಫಲರಾಗಿದ್ದಾರೆ. ಆದರೆ ಡಿಸಿಎಂ ಸ್ಥಾನದ ಮೇಲೆ ರಮೇಶ್ ಕಣ್ಣಿಟ್ಟಿದ್ದಾರೆ. ಆಪರೇಷನ್ ಸಂದರ್ಭದಲ್ಲಿ ಡಿಸಿಎಂ ಸ್ಥಾನದ ಭರವಸೆಯನ್ನು ನೀಡಲಾಗಿತ್ತು ಎನ್ನಲಾಗುತ್ತಿದೆ.

ಇದೀಗ ಸಂಪುಟ ವಿಸ್ತರಣೆಯ ವಿಚಾರ ಮುನ್ನೆಲೆಗೆ ಬಂದಿರುವ ಸಂದರ್ಭದಲ್ಲಿ ಡಿಸಿಎಂ ಸ್ಥಾನಕ್ಕಾಗಿ ರಮೇಶ್ ಗಾಳ ಹಾಕಿದ್ದಾರೆ. ಈಗಾಗಲೇ ದೆಹಲಿಗೆ ತೆರಳಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರನ್ನು ಭೇಟಿಯಾಗಿ ಮಾತುಕತೆಯನ್ನು ನಡೆಸಿದ್ದಾರೆ. ಇನ್ನೇನು ಮುಂದಿನ ವಾರ ಸಿಎಂ ಬಿಎಸ್‌ವೈ ದೆಹಲಿಗೆ ತೆರಳಲಿದ್ದಾರೆ. ಸಂಪುಟ ವಿಸ್ತರಣೆ ಅಥವಾ ಪುನಾಚರನೆಯ ಕುರಿತಾಗಿ ಹೈಕಮಾಂಡ್‌ ಜೊತೆಗೆ ಮಾತುಕತೆ ನಡೆಸಿ ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ.

ಇದೇ ಸಂದರ್ಭದಲ್ಲಿ ರಮೇಶ್ ಜಾರಕಿಹೊಳಿ ಕೂಡಾ ದೆಹಲಿ ತೆರಳುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ದೆಹಲಿಯಲ್ಲಿ ಹೈಕಮಾಂಡ್‌ ಭೇಟಿ ಮಾಡಿ ಡಿಸಿಎಂ ಸ್ಥಾನದ ಬೇಡಿಕೆಯನ್ನು ಇಡಲಿದ್ದಾರೆ ಎಂಬ ಮಾಹಿತಿ ಇದೆ. ಆದರೆ ರಮೇಶ್ ಬೇಡಿಕೆಗೆ ಹೈಕಮಾಂಡ್ ಒಪ್ಪುತ್ತಾ ಎಂಬುವುದು ಸದ್ಯದ ಕುತೂಹಲ.

ಈಗಾಗಲೇ ಮೂವರು ಡಿಸಿಎಂಗಳಿದ್ದು ಹೆಚ್ಚುವರಿ ಡಿಸಿಎಂ ಸ್ಥಾನವನ್ನು ಕಲ್ಪಿಸುವುದು ಅಸಾಧ್ಯದ ಮಾತು. ಅಷ್ಟೇ ಅಲ್ಲದೆ ಡಿಸಿಎಂ ಸ್ಥಾನಕ್ಕೆ ಪಕ್ಷದಲ್ಲಿ ಮತ್ತೆ ಕೆಲವರು ಕಣ್ಣಿಟ್ಟಿದ್ದಾರೆ. ಈ ನಿಟ್ಟಿನಲ್ಲಿ ಬಿಎಸ್‌ ಯಡಿಯೂರಪ್ಪ ಹಾಗೂ ಹೈಕಮಾಂಡ್ ಏನು ನಿರ್ಧಾರ ಕೈಗೊಳ್ಳುತ್ತಾರೆ ಎಂಬುವುದು ಕುತೂಹಲ ಕೆರಳಿಸಿದೆ.

About vijay_shankar

Check Also

BJP ತೋರೆದು ಕಾಂಗ್ರೆಸ್ ಕೈ ಹಿಡಿದ ರಂಗಪ್ಪ ಸುರಪೂರ

ಇಲಕಲ್ ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ:- ಕೆಪಿಸಿಸಿ ಸದಸ್ಯರಾದ ಶಾಂತಕುಮಾರ್ ಸುರಪುರ ಅವರ ನೇತೃತ್ವದಲ್ಲಿ ಯುವ ಮುಖಂಡರಾದ ರಂಗಪ್ಪ …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.