Breaking News

ಸವದಿಯ ದೆಹಲಿಯಾತ್ರೆ ಊಹಾಪೋಹಗಳಿಗೆ ಎಡೆಮಾಡಿದೆ.

ಬೆಂಗಳೂರು:- ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆಯ ಚರ್ಚೆ ಚುರುಕುಗೊಳ್ಳುತ್ತಿರುವ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ದೆಹಲಿಯ ಯಾತ್ರೆ ಹಲವಾರು ಊಹಾಪೋಹಗಳಿಗೆ ಎಡೆಮಾಡಿಕೊಟ್ಟಿದೆ. ಬಿ.ಎಸ್‌ ಯಡಿಯೂರಪ್ಪ ಒಂದು ವರ್ಷದ ಸಾಧನೆ ಸಮಾರಂಭದ ದಿನದಂದೇ ಸವದಿ ದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್‌ ಸಂತೋಷ್‌ ಹಾಗೂ ಇತರ ಕೇಂದ್ರ ನಾಯಕರುಗಳನ್ನು ಭೇಟಿ ಮಾಡಿದ್ದು ಕುತೂಹಲ ಕೆರಳಿಸಿದೆ. ವರ್ಷದ ಸಂಭ್ರಮಾಚರಣೆ ಬೆನ್ನಲ್ಲೇ ಕಮಲದಲ್ಲಿ ಬಂಡಾಯವು ಬಿ.ಎಸ್‌.ವೈಯವರಿಗೆ ಹೊಸ ತಲೆನೋವು ತಂದೊಡ್ಡಿದೆಯೇ ಎಂಬ ಪ್ರಶ್ನೆ ಕಾಡತೊಡಗಿದೆ.
ಕಾಂಗ್ರೆಸ್-ಜೆಡಿಎಸ್‌ ಸಮ್ಮಿಶ್ರ ಸರ್ಕಾರ ಪತನದ ಬಳಿಕ ರಚನೆಯಾದ ಬಿ.ಎಸ್‌ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರಕ್ಕೆ ಇದೀಗ ಒಂದು ವರ್ಷ ತುಂಬಿದೆ. ವರ್ಷ ತುಂಬುತ್ತಿದ್ದಂತೆ ನಾಯಕತ್ವ ಬದಲಾವಣೆಯ ಚರ್ಚೆಗಳು ಆರಂಭಗೊಂಡಿದೆ. ವಯಸ್ಸು ಹಾಗೂ ಇನ್ನಿತರ ಕಾರಣ ನೀಡಿ ಬಿ.ಎಸ್‌.ವೈ ಅಧಿಕಾರವನ್ನು ಬೇರೆಯವರಿಗೆ ಹಸ್ತಾಂತರ ಮಾಡಬೇಕು ಎಂಬ ಚರ್ಚೆಗಳು ನಡೆಯುತ್ತಿವೆ. ಈ ನಡುವೆ ಸಂಪುಟ ವಿಸ್ತರಣೆಯ ಗೊಂದಲ, ಸಚಿವಕಾಂಕ್ಷಿಗಳ ಬಂಡಾಯ, ನಿಗಮ ಮಂಡಳಿ ರಗಳೆ ಬಿ.ಎಸ್‌.ವೈ ಪಾಲಿಗೆ ಹೊಸ ತಲೆನೋವು ಉಂಟು ಮಾಡಿದೆ. ಕೊರೊನಾ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂಬ ಚರ್ಚೆಗಳು ಚಾಲ್ತಿಯಲ್ಲಿವೆ. ಇವೆಲ್ಲವನ್ನು ಮುಂದಿಟ್ಟುಕೊಂಡು ಬಿಎಸ್ವೈ ಅವರಿಂದ ಅಧಿಕಾರವನ್ನು ಬೇರೆಯವರಿಗೆ ಹಸ್ತಾಂತರ ಮಾಡುವ ಯೋಚನೆ ವರಿಷ್ಠರಿಗಿದೆ ಎಂದು ಈಗಾಗಲೇ ಮೊಗಸಾಲೆಯ ಚರ್ಚೆ. ಈ ಎಲ್ಲಾ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಡಿಸಿಎಂ ಲಕ್ಷ್ಮಣ ಸವದಿ ದೆಹಲಿ ಭೇಟಿ ಸಹಜವಾಗಿ ಕುತೂಹಲವನ್ನು ಕೆರಳಿಸಿದೆ. ಅದಲ್ಲೂ ಬಿಜೆಪಿ ಪಾಲಿಗೆ ಮತ್ತೊಂದು ಶಕ್ತಿ ಕೇಂದ್ರವಾಗಿರುವ ಬಿ.ಎಲ್‌ ಸಂತೋಷ್‌ ಅವರ ಭೇಟಿ ಊಹಾಪೋಹಗಳಿಗೆ ಎಡೆಮಾಡಿಕೊಟ್ಟಿದೆ.

About vijay_shankar

Check Also

AICC ಕಾರ್ಯದರ್ಶಿಯಾಗಿ ಡಾ: ಆರತಿ ಕೃಷ್ಣ ಆಯ್ಕೆ

ನವದೆಹಲಿ: ಅನಿವಾಸಿ ಭಾರತೀಯ ನಿಕಟಪೂರ್ವ ಕರ್ನಾಟಕ ಸರ್ಕಾರದ (ಎನ್ಆರ್ಐ ಫೋರಂ) ಉಪಾಧ್ಯಕ್ಷೆಯದ ಡಾಕ್ಟರ್ ಆರತಿಕೃಷ್ಣ ರವರನ್ನು ಅಖಿಲ ಭಾರತ ರಾಷ್ಟ್ರೀಯ …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.