
ತಿಪಟೂರು ರುದ್ರಮುನಿ ಶ್ರೀ ಸೇರಿದಂತೆ ಹಲವು ಸ್ವಾಮೀಜಿಗಳು ಈ ಕುರಿತಾಗಿ ಆಗ್ರಹಿಸಿದ್ದಾರೆ. ಸಿಎಂ ಯಡಿಯೂರಪ್ಪ ಅವರನ್ನು ಕೆಳಗಿಳಿಸಿದರೆ ವೀರಶೈವ ಲಿಂಗಾಯತ ಸಮಾಜದ ಶ್ರೀಗಳು ತಿರುಗಿ ಬೀಳುವ ಎಚ್ಚರಿಕೆ ನೀಡಿದ್ದಾರೆ.
ಸಮಾಜದ ಶ್ರೀಗಳು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ಪರ ನಿಂತಿದ್ದಾರೆ. ತುಮಕೂರು ಜಿಲ್ಲೆ ತಿಪಟೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಬೆಂಬಲ ನೀಡಿದ್ದು, ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ಯಡಿಯೂರಪ್ಪ ಕಾರಣರಾಗಿದ್ದಾರೆ. ಅವರನ್ನು ಮುಖ್ಯಮಂತ್ರಿ ಹುದ್ದೆಯಿಂದ ಇಳಿಸಬಾರದು ಎಂದು ತಿಪಟೂರಿನ ರುದ್ರಮುನಿ ಶ್ರೀಗಳು ಸೇರಿದಂತೆ ಹಲವು ಸ್ವಾಮೀಜಿಗಳು ಒತ್ತಾಯಿಸಿದ್ದು ಮುಖ್ಯಮಂತ್ರಿ ಅವರನ್ನು ಕೆಳಗಿಳಿಸಿದರೆ ಹೋರಾಟದ ಎಚ್ಚರಿಕೆ ನೀಡಿದ್ದಾರೆ.
ವೀರಶೈವ ಸಮಾಜದ ಶ್ರೀಗಳು ತಿರುಗಿಬೀಳುವ ಎಚ್ಚರಿಕೆ ನೀಡಲಾಗಿದ್ದು, ಬಿ.ಎಸ್. ಯಡಿಯೂರಪ್ಪ ಇರುವವರೆಗೆ ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿ ಇರುತ್ತದೆ ಎಂದು ಹೇಳಿದ್ದಾರೆ.
Bayalu Birugali – BB News BB News I Kannada Breaking News | Kannada Latest News | News Updates | Political News Updates – Bayalu Birugali News