ಲಾಕ್ಡೌನ್ ಜಾರಿಯಿಂದ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದ ರೈತರಿಗೆ ರಾಜ್ಯ ಸರ್ಕಾರ ಪರಿಹಾರದ ಮೊತ್ತವಾಗಿ ಮೊದಲ ಕಂತಿನ 666 ಕೋಟಿ ಹಣವನ್ನು ಇಂದು ಬಿಡುಗಡೆ ಮಾಡಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರು ಮೆಕ್ಕೆಜೋಳ ಬೆಳೆದ ಪ್ರತಿಯೊಬ್ಬ ರೈತರ ಪ್ರತಿ ಹೆಕ್ಟೇರ್ಗೆ 5 ಸಾವಿರ ನೀಡುವುದಾಗಿ ಘೋಷಣೆ ಮಾಡಿದ್ದರು. ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಯಡಿಯೂರಪ್ಪ ಅವರು ಮೊದಲ ಕಂತಿನಲ್ಲೇ 666 ಕೋಟಿ ರೂ. ಬಿಡುಗಡೆ ಮಾಡಿ ಸಂಕಷ್ಟದಲ್ಲಿದ್ದ ಅನ್ನದಾತರ ರಕ್ಷಣೆಗೆ ಧಾವಿಸಿದ್ದಾರೆ. …
Read More »