Breaking News

ಜಿಲ್ಲಾಧಿಕಾರಿಗಳಿಂದ ಆಸ್ಪತ್ರೆಗಳಿಗೆ ಅನಿರೀಕ್ಷಿತ ಭೇಟಿ, ಪರಿಶೀಲನೆ

ವಿಜಯಪುರ : ನಗರದ ಅಲ್-ಅಮೀನ್ ಮತ್ತು ಬಿ.ಎಲ್.ಡಿ.ಇ ಆಸ್ಪತ್ರೆಗಳಿಗೆ ಜಿಲ್ಲಾಧಿಕಾರಿ ಪಿ.ಸುನೀಲಕುಮಾರ್ ಅವರು ಇಂದು ಭೇಟಿ ನೀಡಿ ಕೋವಿಡ್ -೧೯ ಲಸಿಕಾ ಕಾರ್ಯದ ಬಗ್ಗೆ ಪರಿಶೀಲನೆ ನಡೆಸಿದರು.

ನಗರದ ಅಲ್-ಅಮೀನ್ ಆಸ್ಪತ್ರೆಗೆ ಭೇಟಿ ನೀಡಿದ ಅವರು ಕೋವಿಡ್-೧೯ ಲಸಿಕಾ ಕಾರ್ಯಕ್ರಮ ವ್ಯವಸ್ಥಿತ ರೀತಿಯಲ್ಲಿ ಮುಂದುವರೆಸಿಕೊAಡು ಹೋಗುವಂತೆ ತಿಳಿಸಿದ ಅವರು ಕೋವಿಡ್-೧೯ ಲಸಿಕೆ ಬಗ್ಗೆ ಇರುವಂತಹ ತಪ್ಪು ಕಲ್ಪನೆಗಳನ್ನು ನಿವಾರಿಸಿ, ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ತುಂಬಿದರು.
ನಗರದ ಬಿ.ಎಲ್.ಡಿ.ಇ ಆಸ್ಪತ್ರೆಗೆ ಅನಿರೀಕ್ಷಿತವಾಗಿ ಭೇಟಿ ನೀಡಿ ಕೋವಿಡ್-೧೯ ಲಸಿಕಾ ಕಾರ್ಯಕ್ರಮದ ಬಗ್ಗೆ ಪರಿಶೀಲನೆ ನಡೆಸಿ ಸಂಬAಧಿಸಿದ ವೈದ್ಯರು, ಆರೋಗ್ಯ ಕಾರ್ಯಕರ್ತೆಯರು ಹಾಗೂ ವಿದ್ಯಾರ್ಥಿಗಳೊಂದಿಗೆ ಚರ್ಚೆ ನಡೆಸಿದರು. ಈ ಸಂದರ್ಭದಲ್ಲಿ ಕೋವಿಡ್-೧೯ ಲಸಿಕಾ ಕಾರ್ಯಕ್ರಮವನ್ನು ಪರಿಣಾಮಕಾರಿಯಾಗಿ ಹಮ್ಮಿಕೊಳ್ಳಬೇಕು. ಗುರಿಗೆ ತಕ್ಕಂತೆ ಪ್ರಗತಿ ಸಾಧಿಸುವಂತೆ ಸೂಚಿಸಿದರು.

ಈ ಸಂದರ್ಭದಲ್ಲಿ ಡಬ್ಲೂಂ ಎಚ್‌ಒ ಪ್ರತಿನಿಧಿ ಮುಕುಂದ ಗಲಗಲಿ ಅವರು ಕೋವಿಡ್-೧೯ ಲಸಿಕಾ ಕಾರ್ಯಕ್ರಮದ ಮಹತ್ವದ ಬಗ್ಗೆ ವಿವರಿಸಿದರು. ಅದರಂತೆ ನಗರದ ಲುಕ್ಮಾನ್ ಯುನಾನಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ತಹಶೀಲ್ದಾರ ಶ್ರೀಮತಿ ಮೋಹನಕುಮಾರಿ ಅವರು ಭೇಟಿ ನೀಡಿ ಮಾನ್ಯ ಜಿಲ್ಲಾಧಿಕಾರಿಗಳ ನಿರ್ದೇಶನದಂತೆ ಕೋವಿಡ್-೧೯ (ಕೋವಿಶೀಲ್ಡ್) ಲಸಿಕಾ ಕಾರ್ಯದ ಬಗ್ಗೆ ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಮಹೇಂದ್ರ ಕಾಪ್ಸೆ, ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಮಹೇಶ ನಾಗರಬೆಟ್ಟ, ಅಲ್-ಅಮೀನ್ ಆಸ್ಪತ್ರೆಯಲ್ಲಿ ಡೀನ್ ಸಲೀಮ್ ದುಂಡಸಿ, ಬಿ.ಎಲ್.ಡಿ.ಇ ಆಸ್ಪತ್ರೆಯಲ್ಲಿ ಅಧೀಕ್ಷಕ ರಾಜೇಶ ಹೊನ್ನುಟಗಿ, ನೋಡಲ್ ಅಧಿಕಾರಿ ಶ್ರೀ ಯಡವಣ್ಣನವರ ಅವರು ಉಪಸ್ಥಿತರಿದ್ದರು.

About vijay_shankar

Check Also

ಕರ್ನಾಟಕ ಪತ್ರಕರ್ತಕ ಸಂಘ ದಿಂದ ರಾಷ್ಟೀಯ ಪತ್ರಿಕಾ ದಿನಾಚರಣೆ ನಿಮಿತ್ತವಾಗಿ  ವಿವಿಧ ಕ್ಷೇತ್ರದ ಸಾಧಕರಿಗೆ ರಾಜ್ಯ ಪ್ರಶಸ್ತಿ  ಪ್ರದಾನ

ಕರ್ನಾಟಕ ಪತ್ರಕರ್ತಕ ಸಂಘ ದಿಂದ ರಾಷ್ಟೀಯ ಪತ್ರಿಕಾ ದಿನಾಚರಣೆ ನಿಮಿತ್ತವಾಗಿ ವಿವಿಧ ಕ್ಷೇತ್ರದ ಸಾಧಕರಿಗೆ ರಾಜ್ಯ ಪ್ರಶಸ್ತಿ ಪ್ರದಾನ

ಅಮೀನಗಡ : ನಗರದ ಪ್ರವಾಸಿ ಮಂದಿರಲ್ಲಿ ಇಂದು ಕರ್ನಾಟಕ ಪತ್ರಕರ್ತರ ಸಂಘವು ರಾಷ್ಟ್ರೀಯ ಪತ್ರಿಕಾ ದಿನಾಚರಣೆಯನ್ನು ಆಚರಿಸಿತು. ಕಾರ್ಯಕ್ರಮ ಉದ್ಘಾಟನೆ …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.