Breaking News

ಕೆಲಸದ ಕೊಡಿಸುವುದಾಗಿ ನಂಬಿసి ಮಹಿಳೆಯೋರ್ವಳ ಬೆತ್ತಲೆ ವಿಡಿಯೋ ಹರಿಬಿಟ್ಟ ವಿವಿ ಗ್ರಂಥಾಲಯ ಅಧೀಕ್ಷಕ

ಕಲಬುರಗಿ: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ಯುವತಿಯೊಂದಿಗಿನ ರಾಸಲೀಲೆ ಸಿಡಿ ಪ್ರಕರಣದ ತನಿಖೆ ಇಡೀ ರಾಜ್ಯವಲ್ಲದೇ ದೇಶದಲ್ಲಿಯೇ ಬಿಸಿ ಬಿಸಿ ಚರ್ಚೆಯಾಗಿರುವ ಸಂದರ್ಭದಲ್ಲಿಯೇ ಗುಲಬರ್ಗಾ ವಿಶ್ವವಿದ್ಯಾಲಯದ ಗ್ರಂಥಾಲಯ ಅಧೀಕ್ಷಕನೊಬ್ಬ ಕೆಲಸ ಕೊಡಿಸುವುದಾಗಿ ನಂಬಿಸಿ ಮಹಿಳೆಯೊಬ್ಬಳ ಅಶ್ಲೀಲ ವಿಡಿಯೋ ತರಿಸಿ ಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟ ಘಟನೆ ನಡೆದಿದೆ.

ಗುಲಬರ್ಗಾ ವಿವಿ ಗ್ರಂಥಾಲಯ ಅಧೀಕ್ಷಕ ಶರಣಪ್ಪ ಮಾಕುಂಡಿ ಕಿರುಕುಳ ನೀಡಿದ ಬಂಧಿತ ಆರೋಪಿ. ಮಹಿಳೆಗೆ ಬೆತ್ತಲಾಗಿ ವಿಡಿಯೋ ಮಾಡಿ ಹಾಕಿದರೆ ನಿನಗೆ ಖಾಯಂ ಕೆಲಸ ಕೊಡಿಸುತ್ತೇನೆ ಎಂದು ಹೇಳಿದ. ಆತನ ಮಾತಿಗೆ ಮರುಳಾದ ಮಹಿಳೆಯು ತನ್ನದೇ ಬೆತ್ತಲೆ ವಿಡಿಯೋ ಚಿತ್ರೀಕರಿಸಿ ಆತನ ವಾಟ್ಸ್ ಆಪ್ಲೆ ಹಾಕಿದ್ದಾಳೆ.

ವಿಡಿಯೋ ನೋಡಿ ಅದನ್ನು ಬೇರೆ ಗ್ರೂಪ್ಲೆ ರವಾನಿಸಿದ್ದಾನೆ. ವಿಡಿಯೋ ವಿಶ್ವವಿದ್ಯಾಲಯದ ಎಲ್ಲ ಗ್ರೂಪ್ನಲ್ಲಿಯೂ ಹರಿದಾಡುತ್ತಿರುವುದು ಗಮನಕ್ಕೆ ಬಂದ ಕೂಡಲೇ ಮಹಿಳೆಯು ತನಗೆ ನಂಬಿಸಿ ಮೋಸ ಮಾಡಿದ್ದಾನೆ ಎಂದು ಗುಲಬರ್ಗಾ ವಿಶ್ವವಿದ್ಯಾಲಯದ ಪೋಲಿಸ್ ಠಾಣೆಗೆ ದೂರು ನೀಡಿದ್ದಾಳೆ.

ದೂರಿನಂತೆ ಪೋಲಿಸರು ಶರಣಪ್ಪ ಮಾಕುಂಡಿ ವಿರುದ್ಧ ಪ್ರಕರಣ ದಾಖಲಿಸಿಕೊಂಡು, ಆತನಿಗೆ ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ.

ಪ್ರಕರಣದ ಕುರಿತು ಹೆಚ್ಚಿನ ತನಿಖೆಗೆ ಕಲಬುರಗಿ ನಗರ ಡಿಸಿಪಿ ಕಿಶೋರ್ ಬಾಬು ಅವರು ತಿಳಿಸಿದ್ದಾರೆ.

About vijay_shankar

Check Also

ವಡಗೇರಿ ಗ್ರಾಮದ ನಂದೀಶ ಹನಮಂತಪ್ಪ ನೆರೆಣ್ಣವರ ರಾಜ್ಯಕ್ಕೆ ೮ನೇ ರ‍್ಯಾಂಕ್

ಇಲಕಲ್ಲ ತಾಲೂಕಿನ ವಡಗೇರಿ ಗ್ರಾಮದ ಕುಮಾರ ನಂದೀಶ ಹನಮಂತಪ್ಪ ನರೆಣ್ಣನವರ, ಇವರು BSc ಯಲ್ಲಿ ರಾಜ್ಯಕ್ಕೆ ೮ನೇ ರ‍್ಯಾಂಕ್ ಬಂದಿದ್ದಾರೆ. …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.