ಕಮತಗಿ : ಪರಿಸರವು ಪ್ರತಿಯೊಂದು ಜೀವರಾಶಿಗೆ ಅತ್ಯಂತ ಅಮೂಲ್ಯ ಕೊಡುಗೆಯಾಗಿದೆ. ಪರಿಸರದಲ್ಲಿನ ಗಾಳಿ, ನೀರು, ಮಣ್ಣು, ಮರಗಳು, ಕಾಡುಗಳು, ಸಾಗರಗಳು ಇತ್ಯಾದಿಗಳು ಎಂದೆಂದಿಗೂ ಉಳಿಯುವುದು ಬಹಳ ಮುಖ್ಯ. ನಾವು ಅವಲಂಬಿತರಾಗಿರುವ ಈ ಪರಿಸರ ಯುಗ ಯುಗಳವರೆಗೂ ಹೀಗೆಯೂ ಉಳಿಯಬೇಕಿದೆ.

ಇಂದು ಬಾಗಲಕೋಟೆ ಜಿಲ್ಲೆಯ ಕಮತಗಿ ಪಟ್ಟಣದ ಸಿದ್ದಶ್ರೀ ಶೈಕ್ಷಣಿಕ ಮತ್ತು ಸಾಮಾಜಿಕ ಅಭಿವೃದ್ಧಿ ಸಂಸ್ಥೆ ಕಮತಗಿ ಇವರ ವತಿಯಿಂದ ಜೂನ್ 5 ರ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಪಟ್ಟಣದ ಶ್ರೀ ಮಸಂಗಸ್ವಾಮಿ ಗದ್ದುಗೇಯ ಆವರಣದಲ್ಲಿ ಸುಮಾರು 6 ಕ್ಕೂ ಹೆಚ್ಚು ಸಸಿಗಳನ್ನು ನೆಡಲಾಯಿತು.

ಈ ಕಾರ್ಯಕ್ರಮದಲ್ಲಿ ಶಂಕರ್ ವನಕಿ, ವೀರಭದ್ರಪ್ಪ ಮುರಾಳ, ನಾಗಪ್ಪ ಅಚನೂರ, ಅಜೀಜ್ ಕೊಲ್ಹಾರ, ನಾರಾಯಣ ತತ್ರಾಣಿ, ಬಸವರಾಜ ನಾಗಶೆಟ್ಟಿ, ಶಿಕ್ಷಕರಾದ ರಾಘವೇಂದ್ರ ವಂದಗನೂರ, ಮಲ್ಲು ಹೋಟಿ, ಶಂಕರ್ ಬಿಜಾಪುರ, ರಾಮು ಕುಣಿಬೆಂಚಿ ಮತ್ತಿತರರು ಪಾಲ್ಗೊಂಡಿದ್ದರು