
ಬೆಂಗಳೂರು, (ಡಿ.16): ಇತ್ತೀಚೆಗಷ್ಟೇ ನೇಮಕಗೊಂಡಿದ್ದ ನಿಗಮ ಮಂಡಳಿ ಅಧ್ಯಕ್ಷರಿಗೆ ಸಿಎಂ ಬಿಎಸ್ವೈ ಸಂಪುಟ ದರ್ಜೆಯ ಸ್ಥಾನಮಾನ ನೀಡಿ ಆದೇಶ ಹೊರಡಿಸಿದ್ದಾರೆ.
ಕೆಲವು ದಿನಗಳ ಹಿಂದಷ್ಟೇ ರಾಜ್ಯ ಸರ್ಕಾರ ಖಾಲಿ ಇರುವ ಎಲ್ಲಾ ನಿಗಮಗಳಿಗೆ ಅಧ್ಯಕ್ಷರನ್ನ ನೇಮಿಸಿತ್ತು. ಇದೀಗ ಅವರಲ್ಲಿ 9 ಮಂದಿಗೆ ಸಂಪುಟ ದರ್ಜೆಯ ಸ್ಥಾನಮಾನ ಹಾಗೂ ನಾಲ್ವರಿಗೆ ರಾಜ್ಯ ಸಚಿವ ದರ್ಜೆಯ ಸ್ಥಾನಮಾನ ನೀಡಲಾಗಿದೆ.
ಬಿಜೆಪಿ ಸರ್ಕಾರಕ್ಕೆ ವರ್ಷ: ಶಾಸಕರಿಗೆ ಭರ್ಜರಿ ಗಿಫ್ಟ್ ನೀಡಿದ ಸಿಎಂ ಯಡಿಯೂರಪ್ಪ
ಯಾರಿಗೆಲ್ಲಾ ಸಂಪುಟ ದರ್ಜೆಯ ಸ್ಥಾನಮಾನ..?
- ಎಂ.ಚಂದ್ರಪ್ಪ – ಕೆಎಸ್ಆರ್ಟಿಸಿ, ಬೆಂಗಳೂರು
- ಐಹೊಳೆ ದುರ್ಯೋಧನ ಮಹಾಲಿಂಗಪ್ಪ – ಕರ್ನಾಟಕ ಆದಿ ಜಾಂಬವ ಅಭಿವೃದ್ಧಿ ನಿಗಮ, ಬೆಂಗಳೂರು
- ನೆಹರೂ ಚನ್ನಬಸಪ್ಪ ಓಲೇಕಾರ್ – ಕರ್ನಾಟಕ ರಾಜ್ಯ ಅನುಸೂಚಿತ ಜಾತಿಗಳ & ಅನುಸೂಚಿತ ಬುಡಕಟ್ಟುಗಳ ಆಯೋಗ, ಬೆಂಗಳೂರು
- ನರಸಿಂಹ ನಾಯಕ್ (ರಾಜೂಗೌಡ) -ಕರ್ನಾಟಕ ನಗರ ನೀರು ಸರಬರಾಜು & ಒಳಚರಂಡಿ ಮಂಡಳಿ, ಬೆಂಗಳೂರು
- ಕಳಕಪ್ಪ ಬಂಡಿ -ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ ನಿಯಮಿತ (KSSIDC), ಬೆಂಗಳೂರು
- ಶಂಕರ ಪಾಟೀಲ್ ಮುನೇನಕೊಪ್ಪ -ಕರ್ನಾಟಕ ಮೂಲಭೂತ ಸೌಕರ್ಯ ಅಭಿವೃದ್ಧಿ & ಹಣಕಾಸು ಸಂಸ್ಥೆ (KUIDFC), ಬೆಂಗಳೂರು
- ಮಾಡಾಳು ವಿರೂಪಾಕ್ಷಪ್ಪ – ಕರ್ನಾಟಕ ಸಾಬೂನು & ಮಾರ್ಜಕ ನಿಯಮಿತ, ಬೆಂಗಳೂರು
- ಸಿದ್ದು ಸವದಿ -ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮ ನಿಯಮಿತ, ಹುಬ್ಬಳ್ಳಿ
ರಾಜ್ಯ ಸಚಿವ ದರ್ಜೆ
- ರಾಜಕುಮಾರ್ ಪಾಟೀಲ್ ತೇಲ್ಕೂರ್ -ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ, ಕಲಬುರಗಿ
- ಸಿ.ಎಸ್.
Bayalu Birugali – BB News BB News I Kannada Breaking News | Kannada Latest News | News Updates | Political News Updates – Bayalu Birugali News